‘ಬೆಂಗಳೂರು ಮೂಲದ ಹಲವು ಐಟಿ ಕಂಪನಿಗಳು ತಮ್ಮ ಕಾರ್ಯಾಚರಣೆಯನ್ನು ವಿಸ್ತರಿಸಲು ಆಯ್ಕೆಗಳ ಹುಡುಕಾಟದಲ್ಲಿವೆ. ಅಂಥ ಕಂಪನಿಗಳಿಗೆ ಕೇರಳ ರಾಜ್ಯದಲ್ಲಿನ ಅನುಕೂಲಕರ ಅಂಶಗಳನ್ನು ಮನದಟ್ಟು ಮಾಡಿಸಲು ಯತ್ನಿಸಲಾಗುತ್ತಿದೆ. ಪ್ರಸ್ತುತ ಬೆಂಗಳೂರಿನಲ್ಲಿ ನೀರಿನ ಬಿಕ್ಕಟ್ಟು ತೀವ್ರವಾಗಿದೆ. ನಾವು ಕೇರಳದಲ್ಲಿ ನೀರಿನ ಲಭ್ಯತೆಯನ್ನು ಹೊಂದಿರುವುದು, ಅನುಕೂಲಕರ ಅಂಶವಾಗಿದೆ’ ಎಂದು ರಾಜೀವ್ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ್ದಾರೆ.