ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಿರುವನಂತಪುರ: ಹಿಂಸಾಚಾರಕ್ಕೆ ತಿರುಗಿದ ಯುವ ಕಾಂಗ್ರೆಸ್‌ ಪ್ರತಿಭಟನೆ

Published 10 ಜನವರಿ 2024, 15:42 IST
Last Updated 10 ಜನವರಿ 2024, 15:42 IST
ಅಕ್ಷರ ಗಾತ್ರ

ತಿರುವನಂತಪುರ: ಯುವ ಕಾಂಗ್ರೆಸ್‌ ಕೇರಳ ರಾಜ್ಯ ಘಟಕ ಅಧ್ಯಕ್ಷ ರಾಹುಲ್‌ ಮಾಂಕೂಟತ್ತಿಲ್‌ ಅವರ ಬಂಧನ ಖಂಡಿಸಿ ಇಲ್ಲಿನ ಸಚಿವಾಲಯದ ಮುಂದೆ ಯುವ ಕಾಂಗ್ರೆಸ್‌ ಕಾರ್ಯಕರ್ತರು ಬುಧವಾರ ನಡೆಸಿದ ಪ್ರತಿಭಟನೆ ಹಿಂ‌ಸಾಚಾರಕ್ಕೆ ತಿರುಗಿದೆ.

ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿ ರಾಹುಲ್‌ ಮಾಂಕೂಟತ್ತಿಲ್‌ ಅವರನ್ನು ಪೊಲೀಸರು ಮಂಗಳವಾರ ಬಂಧಿಸಿದ್ದರು. ಅವರ ಜಾಮೀನು ಅರ್ಜಿ ತಿರಸ್ಕರಿಸಿದ ನ್ಯಾಯಾಲಯವು, ನ್ಯಾಯಾಂಗ ಬಂಧನ ವಿಧಿಸಿದೆ.

ಪೊಲೀಸರು ಸ್ಥಾಪಿಸಿದ್ದ ಬ್ಯಾರಿಕೇಡ್‌ಗಳನ್ನು ಹತ್ತಲು ಯತ್ನಿಸಿದ ಪ್ರತಿಭಟನಕಾರರನ್ನು ಚದುರಿಸಲು ಪೊಲೀಸರು ಹಲವು ಬಾರಿ ಜಲಫಿರಂಗಿ ಪ್ರಯೋಗಿಸಿದ್ದಾರೆ.

ಸರ್ಕಾರ ಮತ್ತು ಪೊಲೀಸರ ವಿರುದ್ಧ ಘೋಷಣೆ ಕೂಗಿದ ಯುವ ಕಾಂಗ್ರೆಸ್‌ ಕಾರ್ಯಕರ್ತರು ಬಳಿಕ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.

ಪ್ರತಿಭಟನಾ ಮೆರವಣಿಗೆಯನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಶಾಫಿ ಪರಂಬಿಲ್‌, ‘ಪೊಲೀಸರು ಎಡ ಪಕ್ಷಗಳ ನಾಯಕರ ಸೇವಕರಂತೆ ವರ್ತಿಸುತ್ತಿದ್ದಾರೆ’ ಎಂದು ಆರೋಪಿಸಿದರು.

ರಾಹುಲ್‌ ಮಾಂಕೂಟತ್ತಿಲ್‌ ಬಂಧನ ಖಂಡಿಸಿ ಮಂಗಳವಾರ ರಾಜ್ಯದಾದ್ಯಂತ ಯುವ ಕಾಂ‌ಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT