<p><strong>ಇಡುಕ್ಕಿ</strong>: ಕೇರಳದ ಯೂಟ್ಯೂಬರ್ ಸಾಜನ್ ಸ್ಕರಿಯ ಅವರ ಮೇಲೆ ಹಲ್ಲೆ ನಡೆಸಿ ಪರಾಯಿಯಾಗಿದ್ದ ನಾಲ್ವರು ಆರೋಪಿಗಳನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ ಎಂದು ಕೇರಳದ ಇಡುಕ್ಕಿ ಜಿಲ್ಲೆಯ ಪೊಲೀಸರು ತಿಳಿಸಿದ್ದಾರೆ.</p><p>ಶಾಜನ್ ಸ್ಕಾರಿಯಾ ಅವರು ಮುನ್ನಡೆಸುವ Marunadan Malayali ಎಂಬ ಯೂಟ್ಯೂಬ್ ಚಾನಲ್ನಲ್ಲಿ ಇತ್ತೀಚೆಗೆ ಕೇರಳ ಸರ್ಕಾರದ ಬಗ್ಗೆ ಪ್ರಸಾರವಾಗಿದ್ದ ವಿಡಿಯೊ ಖಂಡಿಸಿ ಕಳೆದ ಶನಿವಾರ ರಾತ್ರಿ ಆರೋಪಿಗಳು ಸಾಜನ್ ಸ್ಕರಿಯ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದರು.</p><p>ಹಲ್ಲೆಗೂ ಮುನ್ನ ಯುವಕನೊಬ್ಬ ಬೆಂಗಳೂರಿನಲ್ಲಿ ಕೂತು ಫೇಸ್ಬುಕ್ನಲ್ಲಿ ಬೆದರಿಕೆ ಹಾಕಿದ್ದ. ಇದರ ಜಾಡು ಹಿಡಿದು ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.</p><p>ಹಲ್ಲೆ ನಡೆದ ನಂತರ ತೋಡುಪುಳ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಿಂದನೆ, ಕಿರುಕುಳ, ಹಲ್ಲೆ, ಕೊಲೆ ಯತ್ನ ಪ್ರಕರಣವನ್ನು ಸ್ಕರಿಯ ಆರೋಪಿಗಳ ವಿರುದ್ಧ ದಾಖಲಿಸಿದ್ದರು.</p><p>ಆರೋಪಿಗಳನ್ನು ಇಡುಕ್ಕಿಗೆ ಕರೆತಂದು ವಿಚಾರಣೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.</p><p>ನನ್ನ ಮೇಲೆ ಹಲ್ಲೆ ಮಾಡಿ, ಕೊಲೆಗೆ ಯತ್ನಿಸಿದವರು ಆಡಳಿತಾರೂಢ ಸಿಪಿಐಎಂನ ಕಾರ್ಯಕರ್ತರು ಎಂದು ಆರೋಪಿಸಿದ್ದಾರೆ.</p><p>Marunadan Malayali ಇದು ಸುದ್ದಿ ಯೂಟ್ಯೂಬ್ ಚಾನಲ್ ಆಗಿದ್ದು 2.88 ಮಿಲಿಯನ್ ಚಂದಾದಾರರನ್ನು ಹೊಂದಿದೆ.</p>.VIDEO | ಮಹೇಶ್ ಶೆಟ್ಟಿ ತಿಮರೋಡಿ ಬಂಧನ; ಯೂಟ್ಯೂಬರ್ ಸಮೀರ್ಗೆ ಜಾಮೀನು.ಗುರುಗ್ರಾಮ: ಯೂಟ್ಯೂಬರ್ ಎಲ್ವಿಶ್ ಯಾದವ್ ಮನೆಯ ಹೊರಗೆ ಗುಂಡಿನ ದಾಳಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಡುಕ್ಕಿ</strong>: ಕೇರಳದ ಯೂಟ್ಯೂಬರ್ ಸಾಜನ್ ಸ್ಕರಿಯ ಅವರ ಮೇಲೆ ಹಲ್ಲೆ ನಡೆಸಿ ಪರಾಯಿಯಾಗಿದ್ದ ನಾಲ್ವರು ಆರೋಪಿಗಳನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ ಎಂದು ಕೇರಳದ ಇಡುಕ್ಕಿ ಜಿಲ್ಲೆಯ ಪೊಲೀಸರು ತಿಳಿಸಿದ್ದಾರೆ.</p><p>ಶಾಜನ್ ಸ್ಕಾರಿಯಾ ಅವರು ಮುನ್ನಡೆಸುವ Marunadan Malayali ಎಂಬ ಯೂಟ್ಯೂಬ್ ಚಾನಲ್ನಲ್ಲಿ ಇತ್ತೀಚೆಗೆ ಕೇರಳ ಸರ್ಕಾರದ ಬಗ್ಗೆ ಪ್ರಸಾರವಾಗಿದ್ದ ವಿಡಿಯೊ ಖಂಡಿಸಿ ಕಳೆದ ಶನಿವಾರ ರಾತ್ರಿ ಆರೋಪಿಗಳು ಸಾಜನ್ ಸ್ಕರಿಯ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದರು.</p><p>ಹಲ್ಲೆಗೂ ಮುನ್ನ ಯುವಕನೊಬ್ಬ ಬೆಂಗಳೂರಿನಲ್ಲಿ ಕೂತು ಫೇಸ್ಬುಕ್ನಲ್ಲಿ ಬೆದರಿಕೆ ಹಾಕಿದ್ದ. ಇದರ ಜಾಡು ಹಿಡಿದು ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.</p><p>ಹಲ್ಲೆ ನಡೆದ ನಂತರ ತೋಡುಪುಳ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಿಂದನೆ, ಕಿರುಕುಳ, ಹಲ್ಲೆ, ಕೊಲೆ ಯತ್ನ ಪ್ರಕರಣವನ್ನು ಸ್ಕರಿಯ ಆರೋಪಿಗಳ ವಿರುದ್ಧ ದಾಖಲಿಸಿದ್ದರು.</p><p>ಆರೋಪಿಗಳನ್ನು ಇಡುಕ್ಕಿಗೆ ಕರೆತಂದು ವಿಚಾರಣೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.</p><p>ನನ್ನ ಮೇಲೆ ಹಲ್ಲೆ ಮಾಡಿ, ಕೊಲೆಗೆ ಯತ್ನಿಸಿದವರು ಆಡಳಿತಾರೂಢ ಸಿಪಿಐಎಂನ ಕಾರ್ಯಕರ್ತರು ಎಂದು ಆರೋಪಿಸಿದ್ದಾರೆ.</p><p>Marunadan Malayali ಇದು ಸುದ್ದಿ ಯೂಟ್ಯೂಬ್ ಚಾನಲ್ ಆಗಿದ್ದು 2.88 ಮಿಲಿಯನ್ ಚಂದಾದಾರರನ್ನು ಹೊಂದಿದೆ.</p>.VIDEO | ಮಹೇಶ್ ಶೆಟ್ಟಿ ತಿಮರೋಡಿ ಬಂಧನ; ಯೂಟ್ಯೂಬರ್ ಸಮೀರ್ಗೆ ಜಾಮೀನು.ಗುರುಗ್ರಾಮ: ಯೂಟ್ಯೂಬರ್ ಎಲ್ವಿಶ್ ಯಾದವ್ ಮನೆಯ ಹೊರಗೆ ಗುಂಡಿನ ದಾಳಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>