<p><strong>ತಿರುವನಂತಪುರ</strong>: ದೇವಸ್ಥಾನಗಳನ್ನು ಪ್ರವೇಶಿಸುವ ಮುನ್ನ ಪುರುಷರು ತಮ್ಮ ಮೇಲಂಗಿಯನ್ನು ತೆಗೆಯುವ ಪದ್ಧತಿ ಕೈ ಬಿಡಬೇಕು ಎಂದು ಒತ್ತಾಯಿಸಿ ಕೇರಳದಲ್ಲಿ ಶುಕ್ರವಾರ ಪ್ರತಿಭಟನೆ ಆಯೋಜಿಸಲಾಗಿದೆ.</p>.<p>ಸಮಾಜ ಸುಧಾರಕ ಶ್ರೀ ನಾರಾಯಣ ಗುರು ಅವರು ಸ್ಥಾಪಿಸಿರುವ ಶಿವಗಿರಿ ಮಠದ ಜೊತೆಗೆ ಗುರುತಿಸಿಕೊಂಡಿರುವ ‘ಗುರುಧರ್ಮ ಪ್ರಚಾರ ಸಭಾ’ವು ತಿರುವನಂತಪುರದಲ್ಲಿರುವ ತಿರುವಾಂಕೂರು ದೇವಸ್ವ ಮಂಡಳಿ (ಟಿಡಿಬಿ) ಕಚೇರಿ ಮುಂದೆ ರ್ಯಾಲಿ ಹಾಗೂ ಪ್ರಾರ್ಥನೆ ನಡೆಸಲು ನಿರ್ಧರಿಸಿದೆ. ಈ ವಿಚಾರವನ್ನು ಮೊದಲಿಗೆ ಪ್ರಸ್ತಾಪಿಸಿದ್ದ ಶಿವಗಿರಿ ಮಠದ ಮುಖ್ಯಸ್ಥ ಸ್ವಾಮಿ ಸಚ್ಚಿದಾನಂದ ಅವರು ರ್ಯಾಲಿಗೆ ಚಾಲನೆ ನೀಡಲಿದ್ದಾರೆ.</p>.<p>ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಮುಖ್ಯ ಅರ್ಚಕರಾಗಿ ಮಲಯಾಳ ಬ್ರಾಹ್ಮಣ ಸಮುದಾಯದವರೇ ನೇಮಕ ಮಾಡುತ್ತಿರುವ ಪದ್ಧತಿ ಕೈ ಬಿಡಬೇಕು ಎಂದು ಪ್ರತಿಭಟನೆಯಲ್ಲಿ ಪ್ರಸ್ತಾಪಿಸಲಿದ್ದಾರೆ. </p>.<p>ಮೇಲಂಗಿ ತೆಗೆಯಬೇಕು ಎಂದು ಸ್ವಾಮೀಜಿ ನೀಡಿದ್ದ ಹೇಳಿಕೆಯನ್ನು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಸ್ವಾಗತಿಸಿದ್ದರು. ಅದಾದ ಮೇಲೆ ವಿಷಯದ ಕುರಿತು ಪರ–ವಿರೋಧ ಚರ್ಚೆಗಳು ನಡೆದಿವೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ</strong>: ದೇವಸ್ಥಾನಗಳನ್ನು ಪ್ರವೇಶಿಸುವ ಮುನ್ನ ಪುರುಷರು ತಮ್ಮ ಮೇಲಂಗಿಯನ್ನು ತೆಗೆಯುವ ಪದ್ಧತಿ ಕೈ ಬಿಡಬೇಕು ಎಂದು ಒತ್ತಾಯಿಸಿ ಕೇರಳದಲ್ಲಿ ಶುಕ್ರವಾರ ಪ್ರತಿಭಟನೆ ಆಯೋಜಿಸಲಾಗಿದೆ.</p>.<p>ಸಮಾಜ ಸುಧಾರಕ ಶ್ರೀ ನಾರಾಯಣ ಗುರು ಅವರು ಸ್ಥಾಪಿಸಿರುವ ಶಿವಗಿರಿ ಮಠದ ಜೊತೆಗೆ ಗುರುತಿಸಿಕೊಂಡಿರುವ ‘ಗುರುಧರ್ಮ ಪ್ರಚಾರ ಸಭಾ’ವು ತಿರುವನಂತಪುರದಲ್ಲಿರುವ ತಿರುವಾಂಕೂರು ದೇವಸ್ವ ಮಂಡಳಿ (ಟಿಡಿಬಿ) ಕಚೇರಿ ಮುಂದೆ ರ್ಯಾಲಿ ಹಾಗೂ ಪ್ರಾರ್ಥನೆ ನಡೆಸಲು ನಿರ್ಧರಿಸಿದೆ. ಈ ವಿಚಾರವನ್ನು ಮೊದಲಿಗೆ ಪ್ರಸ್ತಾಪಿಸಿದ್ದ ಶಿವಗಿರಿ ಮಠದ ಮುಖ್ಯಸ್ಥ ಸ್ವಾಮಿ ಸಚ್ಚಿದಾನಂದ ಅವರು ರ್ಯಾಲಿಗೆ ಚಾಲನೆ ನೀಡಲಿದ್ದಾರೆ.</p>.<p>ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಮುಖ್ಯ ಅರ್ಚಕರಾಗಿ ಮಲಯಾಳ ಬ್ರಾಹ್ಮಣ ಸಮುದಾಯದವರೇ ನೇಮಕ ಮಾಡುತ್ತಿರುವ ಪದ್ಧತಿ ಕೈ ಬಿಡಬೇಕು ಎಂದು ಪ್ರತಿಭಟನೆಯಲ್ಲಿ ಪ್ರಸ್ತಾಪಿಸಲಿದ್ದಾರೆ. </p>.<p>ಮೇಲಂಗಿ ತೆಗೆಯಬೇಕು ಎಂದು ಸ್ವಾಮೀಜಿ ನೀಡಿದ್ದ ಹೇಳಿಕೆಯನ್ನು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಸ್ವಾಗತಿಸಿದ್ದರು. ಅದಾದ ಮೇಲೆ ವಿಷಯದ ಕುರಿತು ಪರ–ವಿರೋಧ ಚರ್ಚೆಗಳು ನಡೆದಿವೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>