<p><strong>ಕೊಲ್ಲಂ, ಕೇರಳ: </strong>ದಕ್ಷಿಣ ಕೇರಳದ ಕುರೀಪ್ಪುಳದಲ್ಲಿರುವ ಸೇಂಟ್ ಜೋಸೆಫ್ ಕಾನ್ವೆಂಟ್ನ ಬಾವಿಯೊಳಗೆ 42 ವರ್ಷದ ಕ್ಯಾಥೊಲಿಕ್ ಪಂಗಡಕ್ಕೆ ಸೇರಿದ ಕ್ರೈಸ್ತ ಸನ್ಯಾಸಿನಿಯೊಬ್ಬರು ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಕರುಣಗಪ್ಪಳ್ಳಿ ಮೂಲದ ಮಾಬಲ್ ಜೋಸೆಫ್ (42) ಶವವಾಗಿ ಪತ್ತೆಯಾದ ಸನ್ಯಾಸಿನಿ.</p>.<p>ಸಾಮಾನ್ಯವಾಗಿ ಬೆಳಗಿನ ವೇಳೆ ಮಾಬಲ್ ಅವರು ಪಾರ್ಥನೆಗೆ ತೆರಳುತ್ತಿದ್ದರು. ಶುಕ್ರವಾರ ಮುಂಜಾನೆ ಅವರು ಕಾಣದಿದ್ದಾಗ ಸ್ನೇಹಿತೆಯರು ಮಾಬಲ್ ಅವರಿಗಾಗಿ ಹುಡುಕಾಟ ನಡೆಸಿದರು. ಕೊನೆಗೆ ಕಾನ್ವೆಂಟ್ನ ಆವರಣದಲ್ಲಿರುವ ಬಾವಿಯೊಳಗೆ ಮಾಬಲ್ ಶವವಾಗಿ ಪತ್ತೆಯಾಗಿದ್ದಾರೆ.</p>.<p>ಘಟನೆ ಕುರಿತು ಪರಿಶೀಲನೆ ನಡೆಸಿದ ಪೊಲೀಸರು ಇದು ಆತ್ಮಹತ್ಯೆ ಪ್ರಕರಣವಿರಬಹುದೆಂದು ಶಂಕೆ ವ್ಯಕ್ತಪಡಿಸಿದ್ದಾರೆ.</p>.<p>ಆತ್ಮಹತ್ಯೆಗೆ ಮುನ್ನ ಮೃತ ಸನ್ಯಾಸಿನಿ ಬರೆದಿಟ್ಟಿದ್ದರು ಎನ್ನಲಾದ ಡೆತ್ನೋಟ್ ಅನ್ನು ಆಕೆಯ ಕೋಣೆಯಿಂದ ವಶಪಡಿಸಿಕೊಳ್ಳಲಾಗಿದೆ. ಆ ಪತ್ರದಲ್ಲಿ ತನ್ನ ಸಾವಿಗೆ ಯಾರೂ ಕಾರಣರಲ್ಲ, ಅನಾರೋಗ್ಯದ ಸಮಸ್ಯೆಯಿಂದ ಜೀವ ಕಳೆದುಕೊಳ್ಳುತ್ತಿದ್ದೇನೆ ಎಂದು ಬರೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಲ್ಲಂ, ಕೇರಳ: </strong>ದಕ್ಷಿಣ ಕೇರಳದ ಕುರೀಪ್ಪುಳದಲ್ಲಿರುವ ಸೇಂಟ್ ಜೋಸೆಫ್ ಕಾನ್ವೆಂಟ್ನ ಬಾವಿಯೊಳಗೆ 42 ವರ್ಷದ ಕ್ಯಾಥೊಲಿಕ್ ಪಂಗಡಕ್ಕೆ ಸೇರಿದ ಕ್ರೈಸ್ತ ಸನ್ಯಾಸಿನಿಯೊಬ್ಬರು ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಕರುಣಗಪ್ಪಳ್ಳಿ ಮೂಲದ ಮಾಬಲ್ ಜೋಸೆಫ್ (42) ಶವವಾಗಿ ಪತ್ತೆಯಾದ ಸನ್ಯಾಸಿನಿ.</p>.<p>ಸಾಮಾನ್ಯವಾಗಿ ಬೆಳಗಿನ ವೇಳೆ ಮಾಬಲ್ ಅವರು ಪಾರ್ಥನೆಗೆ ತೆರಳುತ್ತಿದ್ದರು. ಶುಕ್ರವಾರ ಮುಂಜಾನೆ ಅವರು ಕಾಣದಿದ್ದಾಗ ಸ್ನೇಹಿತೆಯರು ಮಾಬಲ್ ಅವರಿಗಾಗಿ ಹುಡುಕಾಟ ನಡೆಸಿದರು. ಕೊನೆಗೆ ಕಾನ್ವೆಂಟ್ನ ಆವರಣದಲ್ಲಿರುವ ಬಾವಿಯೊಳಗೆ ಮಾಬಲ್ ಶವವಾಗಿ ಪತ್ತೆಯಾಗಿದ್ದಾರೆ.</p>.<p>ಘಟನೆ ಕುರಿತು ಪರಿಶೀಲನೆ ನಡೆಸಿದ ಪೊಲೀಸರು ಇದು ಆತ್ಮಹತ್ಯೆ ಪ್ರಕರಣವಿರಬಹುದೆಂದು ಶಂಕೆ ವ್ಯಕ್ತಪಡಿಸಿದ್ದಾರೆ.</p>.<p>ಆತ್ಮಹತ್ಯೆಗೆ ಮುನ್ನ ಮೃತ ಸನ್ಯಾಸಿನಿ ಬರೆದಿಟ್ಟಿದ್ದರು ಎನ್ನಲಾದ ಡೆತ್ನೋಟ್ ಅನ್ನು ಆಕೆಯ ಕೋಣೆಯಿಂದ ವಶಪಡಿಸಿಕೊಳ್ಳಲಾಗಿದೆ. ಆ ಪತ್ರದಲ್ಲಿ ತನ್ನ ಸಾವಿಗೆ ಯಾರೂ ಕಾರಣರಲ್ಲ, ಅನಾರೋಗ್ಯದ ಸಮಸ್ಯೆಯಿಂದ ಜೀವ ಕಳೆದುಕೊಳ್ಳುತ್ತಿದ್ದೇನೆ ಎಂದು ಬರೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>