<p><strong>ಪ್ರಯಾಗರಾಜ್:</strong> ಮಾಹಾ ಕುಂಭಮೇಳಕ್ಕೆ ಬೆದರಿಕೆ ಹಾಕಿರುವ ಸಿಖ್ ಪ್ರತ್ಯೇಕತಾವಾದಿ ಗುರುಪತ್ವಂತ್ ಸಿಂಗ್ ಪನ್ನೂ ವಿರುದ್ಧ ಅಖಾಡ ಪರಿಷತ್ ಕಿಡಿ ಕಾರಿದೆ. ಇದು ಸಮುದಾಯಗಳ ನಡುವೆ ಭಿನ್ನತೆ ಉಂಟು ಮಾಡುವ ಪ್ರಯತ್ನ ಎಂದು ಆಕ್ರೋಶ ವ್ಯಕ್ತಪಡಿಸಿದೆ.</p><p>ಮಹಾ ಕುಂಭಮೇಳನ್ನು ಗುರಿಯಾಗಿಸಿ ಪನ್ನೂ ಬಿಡುಗಡೆ ಮಾಡಿದ ವಿಡಿಯೊಗೆ ಅಖಾಡ ಹೀಗೆ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದೆ.</p>.ಉತ್ತರ ಪ್ರದೇಶ: ಎನ್ಕೌಂಟರ್ನಲ್ಲಿ ಮೂವರು ಖಾಲಿಸ್ತಾನಿ ಭಯೋತ್ಪಾದಕರ ಹತ್ಯೆ.<p>ಉತ್ತರ ಪ್ರದೇಶದಲ್ಲಿ ಇತ್ತೀಚೆಗೆ ನಡೆದ ಎನ್ಕೌಂಟರ್ನಲ್ಲಿ ಮೂವರು ಖಾಲಿಸ್ತಾನಿ ಭಯೋತ್ಪಾದಕರನ್ನು ಕೊಲ್ಲಲಾಗಿತ್ತು. ಹೀಗಾಗಿ ಪನ್ನೂ ಮಹಾ ಕುಂಭಮೇಳಕ್ಕೆ ಬೆದರಿಕೆ ಹಾಕಿದ್ದ.</p><p>ಮಹಾಕುಂಭ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅಖಿಲ ಭಾರತೀಯ ಅಖಾಡ ಪರಿಷತ್ನ ಅಧ್ಯಕ್ಷ ಮಹಾಂತ ರವೀಂದ್ರ ಪುರಿ, ಪನ್ನೂ ಎಂಬ ವ್ಯಕ್ತಿ ನಮ್ಮ ಮಹಾಕುಂಭಕ್ಕೆ ಪ್ರವೇಶಿಸಲು ಧೈರ್ಯ ಮಾಡಿದರೆ, ಅವನನ್ನು ಹೊಡೆದು ಓಡಿಸಲಾಗುತ್ತದೆ. ಇಂತಹ ನೂರಾರು ಹುಚ್ಚರನ್ನು ನಾವು ನೋಡಿದ್ದೇವೆ’ ಎಂದು ಕಿಡಿಕಾರಿದ್ದಾರೆ.</p>.ಖಾಲಿಸ್ತಾನಿ ಉಗ್ರ ಅರ್ಷ್ ದಲ್ಲಾ ಒಪ್ಪಿಸುವಂತೆ ಭಾರತ ಮನವಿ.<p>ಇದು ಸಿಖ್ಖರು ಮತ್ತು ಹಿಂದೂಗಳು ಒಗ್ಗೂಡಿರುವ ಮಾಘ ಮೇಳ. ವಿಭಜನೆಯನ್ನು ಪ್ರಚೋದಿಸುವ ಪನ್ನೂ ಅವರ ಪ್ರಯತ್ನಗಳನ್ನು ಸಹಿಸಲಾಗುವುದಿಲ್ಲ. ಇದು ನಮ್ಮ ಸನಾತನ ಸಂಪ್ರದಾಯವನ್ನು ಜೀವಂತವಾಗಿಟ್ಟಿರುವ ಸಿಖ್ ಸಮುದಾಯವಾಗಿದೆ. ಅವರು ಸನಾತನ ಧರ್ಮವನ್ನು ರಕ್ಷಿಸಿದ್ದಾರೆ ಎಂದು ಮಹಾಂತ ಪುರಿ ಹೇಳಿದ್ದಾರೆ.</p> .ಖಾಲಿಸ್ತಾನಿ ಬೆಂಬಲಿಗರ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಪೊಲೀಸ್ ಅಧಿಕಾರಿ ಅಮಾನತು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪ್ರಯಾಗರಾಜ್:</strong> ಮಾಹಾ ಕುಂಭಮೇಳಕ್ಕೆ ಬೆದರಿಕೆ ಹಾಕಿರುವ ಸಿಖ್ ಪ್ರತ್ಯೇಕತಾವಾದಿ ಗುರುಪತ್ವಂತ್ ಸಿಂಗ್ ಪನ್ನೂ ವಿರುದ್ಧ ಅಖಾಡ ಪರಿಷತ್ ಕಿಡಿ ಕಾರಿದೆ. ಇದು ಸಮುದಾಯಗಳ ನಡುವೆ ಭಿನ್ನತೆ ಉಂಟು ಮಾಡುವ ಪ್ರಯತ್ನ ಎಂದು ಆಕ್ರೋಶ ವ್ಯಕ್ತಪಡಿಸಿದೆ.</p><p>ಮಹಾ ಕುಂಭಮೇಳನ್ನು ಗುರಿಯಾಗಿಸಿ ಪನ್ನೂ ಬಿಡುಗಡೆ ಮಾಡಿದ ವಿಡಿಯೊಗೆ ಅಖಾಡ ಹೀಗೆ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದೆ.</p>.ಉತ್ತರ ಪ್ರದೇಶ: ಎನ್ಕೌಂಟರ್ನಲ್ಲಿ ಮೂವರು ಖಾಲಿಸ್ತಾನಿ ಭಯೋತ್ಪಾದಕರ ಹತ್ಯೆ.<p>ಉತ್ತರ ಪ್ರದೇಶದಲ್ಲಿ ಇತ್ತೀಚೆಗೆ ನಡೆದ ಎನ್ಕೌಂಟರ್ನಲ್ಲಿ ಮೂವರು ಖಾಲಿಸ್ತಾನಿ ಭಯೋತ್ಪಾದಕರನ್ನು ಕೊಲ್ಲಲಾಗಿತ್ತು. ಹೀಗಾಗಿ ಪನ್ನೂ ಮಹಾ ಕುಂಭಮೇಳಕ್ಕೆ ಬೆದರಿಕೆ ಹಾಕಿದ್ದ.</p><p>ಮಹಾಕುಂಭ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅಖಿಲ ಭಾರತೀಯ ಅಖಾಡ ಪರಿಷತ್ನ ಅಧ್ಯಕ್ಷ ಮಹಾಂತ ರವೀಂದ್ರ ಪುರಿ, ಪನ್ನೂ ಎಂಬ ವ್ಯಕ್ತಿ ನಮ್ಮ ಮಹಾಕುಂಭಕ್ಕೆ ಪ್ರವೇಶಿಸಲು ಧೈರ್ಯ ಮಾಡಿದರೆ, ಅವನನ್ನು ಹೊಡೆದು ಓಡಿಸಲಾಗುತ್ತದೆ. ಇಂತಹ ನೂರಾರು ಹುಚ್ಚರನ್ನು ನಾವು ನೋಡಿದ್ದೇವೆ’ ಎಂದು ಕಿಡಿಕಾರಿದ್ದಾರೆ.</p>.ಖಾಲಿಸ್ತಾನಿ ಉಗ್ರ ಅರ್ಷ್ ದಲ್ಲಾ ಒಪ್ಪಿಸುವಂತೆ ಭಾರತ ಮನವಿ.<p>ಇದು ಸಿಖ್ಖರು ಮತ್ತು ಹಿಂದೂಗಳು ಒಗ್ಗೂಡಿರುವ ಮಾಘ ಮೇಳ. ವಿಭಜನೆಯನ್ನು ಪ್ರಚೋದಿಸುವ ಪನ್ನೂ ಅವರ ಪ್ರಯತ್ನಗಳನ್ನು ಸಹಿಸಲಾಗುವುದಿಲ್ಲ. ಇದು ನಮ್ಮ ಸನಾತನ ಸಂಪ್ರದಾಯವನ್ನು ಜೀವಂತವಾಗಿಟ್ಟಿರುವ ಸಿಖ್ ಸಮುದಾಯವಾಗಿದೆ. ಅವರು ಸನಾತನ ಧರ್ಮವನ್ನು ರಕ್ಷಿಸಿದ್ದಾರೆ ಎಂದು ಮಹಾಂತ ಪುರಿ ಹೇಳಿದ್ದಾರೆ.</p> .ಖಾಲಿಸ್ತಾನಿ ಬೆಂಬಲಿಗರ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಪೊಲೀಸ್ ಅಧಿಕಾರಿ ಅಮಾನತು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>