<p><strong>ಶ್ರೀನಗರ:</strong> ಅಯಾತೊಲ್ಲಾ ಅಲಿ ಖಮೇನಿ ಹತ್ಯೆ ಖಂಡಿಸಿ ಕಾಶ್ಮೀರದಲ್ಲಿ ಸೋಮವಾರವೂ ಪ್ರತಿಭಟನೆಗಳು ನಡೆದವು.</p>.<p>ಕಣಿವೆ ಪ್ರದೇಶದಲ್ಲಿ ಎರಡನೇ ದಿನವೂ ಪ್ರತಿಭಟನೆಗಳು ನಡೆದ ಕಾರಣ ಪೊಲೀಸರು ತೀವ್ರ ನಿಗಾ ವಹಿಸಿದ್ದರು ಮತ್ತು ಮೊಬೈಲ್ ಇಂಟರ್ನೆಟ್ ಸೇವೆಯ ವೇಗವನ್ನು ಕಡಿಮೆಗೊಳಿಸಿದ್ದರು.</p>.<p>ಶಿಯಾ ಸಮುದಾಯದವರು ಬಹುಸಂಖ್ಯೆಯಲ್ಲಿರುವ ಬೆಮಿನ, ಗುಂಡ್ ಹಸ್ಸಿಭತ್ ಮತ್ತು ಜಹಾಂಗೀರ್ ಚೌಕ್ ಮತ್ತು ಪುಲ್ವಾಮದಲ್ಲಿ ಪ್ರತಿಭಟನೆ ತೀವ್ರವಾಗಿತ್ತು. ರಸ್ತೆಗಳಲ್ಲಿ ಮೆರವಣಿಗೆ ನಡೆಸಿ, ಅಮೆರಿಕ ಮತ್ತು ಇಸ್ರೇಲ್ ವಿರುದ್ಧ ಘೋಷಣೆಗಳನ್ನು ಕೂಗಿದರು.</p>.<p>ಕೆಲ ಪ್ರದೇಶಗಳಲ್ಲಿ ಪ್ರತಿಭಟನಕಾರರನ್ನು ಚದುರಿಸಲು ಪೊಲೀಸರು ಬಲ ಪ್ರಯೋಗ ಮಾಡಿದರು. ಜನಸಂಚಾರದ ಮೇಲೆಯೂ ನಿರ್ಬಂದ ಹೇರಲಾಗಿತ್ತು. ಲಾಲ್ಚೌಕ್ ನಗರ ಮತ್ತು ಜಿಲ್ಲೆಗಳ ಹಲವು ರಸ್ತೆಗಳಲ್ಲಿ ತಂತಿ ಮತ್ತು ಬ್ಯಾರಿಕೇಡ್ಗಳನ್ನು ಅಳವಡಿಸಲಾಗಿತ್ತು.</p>.<p>ಮುತಾಹಿದಾ ಮಜ್ಲಿಸ್ –ಇ–ಉಲಾಮ(ಎಂಎಂಯು) ಅಧ್ಯಕ್ಷ ಮಿರ್ವಾಝ್ ಉಮರ್ ಫಾರೂಕ್ ಅವರು ಪ್ರತಿಭಟನೆಗೆ ಕರೆ ನೀಡಿದ್ದರು. ಪಿಡಿಪಿ ಸೇರಿದಂತೆ ಹಲವು ರಾಜಕೀಯ ಪಕ್ಷಗಳು ಈ ಪ್ರತಿಭಟನೆಗೆ ಬೆಂಬಲ ನೀಡಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ:</strong> ಅಯಾತೊಲ್ಲಾ ಅಲಿ ಖಮೇನಿ ಹತ್ಯೆ ಖಂಡಿಸಿ ಕಾಶ್ಮೀರದಲ್ಲಿ ಸೋಮವಾರವೂ ಪ್ರತಿಭಟನೆಗಳು ನಡೆದವು.</p>.<p>ಕಣಿವೆ ಪ್ರದೇಶದಲ್ಲಿ ಎರಡನೇ ದಿನವೂ ಪ್ರತಿಭಟನೆಗಳು ನಡೆದ ಕಾರಣ ಪೊಲೀಸರು ತೀವ್ರ ನಿಗಾ ವಹಿಸಿದ್ದರು ಮತ್ತು ಮೊಬೈಲ್ ಇಂಟರ್ನೆಟ್ ಸೇವೆಯ ವೇಗವನ್ನು ಕಡಿಮೆಗೊಳಿಸಿದ್ದರು.</p>.<p>ಶಿಯಾ ಸಮುದಾಯದವರು ಬಹುಸಂಖ್ಯೆಯಲ್ಲಿರುವ ಬೆಮಿನ, ಗುಂಡ್ ಹಸ್ಸಿಭತ್ ಮತ್ತು ಜಹಾಂಗೀರ್ ಚೌಕ್ ಮತ್ತು ಪುಲ್ವಾಮದಲ್ಲಿ ಪ್ರತಿಭಟನೆ ತೀವ್ರವಾಗಿತ್ತು. ರಸ್ತೆಗಳಲ್ಲಿ ಮೆರವಣಿಗೆ ನಡೆಸಿ, ಅಮೆರಿಕ ಮತ್ತು ಇಸ್ರೇಲ್ ವಿರುದ್ಧ ಘೋಷಣೆಗಳನ್ನು ಕೂಗಿದರು.</p>.<p>ಕೆಲ ಪ್ರದೇಶಗಳಲ್ಲಿ ಪ್ರತಿಭಟನಕಾರರನ್ನು ಚದುರಿಸಲು ಪೊಲೀಸರು ಬಲ ಪ್ರಯೋಗ ಮಾಡಿದರು. ಜನಸಂಚಾರದ ಮೇಲೆಯೂ ನಿರ್ಬಂದ ಹೇರಲಾಗಿತ್ತು. ಲಾಲ್ಚೌಕ್ ನಗರ ಮತ್ತು ಜಿಲ್ಲೆಗಳ ಹಲವು ರಸ್ತೆಗಳಲ್ಲಿ ತಂತಿ ಮತ್ತು ಬ್ಯಾರಿಕೇಡ್ಗಳನ್ನು ಅಳವಡಿಸಲಾಗಿತ್ತು.</p>.<p>ಮುತಾಹಿದಾ ಮಜ್ಲಿಸ್ –ಇ–ಉಲಾಮ(ಎಂಎಂಯು) ಅಧ್ಯಕ್ಷ ಮಿರ್ವಾಝ್ ಉಮರ್ ಫಾರೂಕ್ ಅವರು ಪ್ರತಿಭಟನೆಗೆ ಕರೆ ನೀಡಿದ್ದರು. ಪಿಡಿಪಿ ಸೇರಿದಂತೆ ಹಲವು ರಾಜಕೀಯ ಪಕ್ಷಗಳು ಈ ಪ್ರತಿಭಟನೆಗೆ ಬೆಂಬಲ ನೀಡಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>