<p><strong>ಖಾಂಡವಾ (ಮಧ್ಯಪ್ರದೇಶ):</strong> ಇತ್ತೀಚೆಗೆ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿ ಮೃತಪಟ್ಟ ಬುಡಕಟ್ಟು ಮಹಿಳೆಯ ಕುಟುಂಬದೊಂದಿಗೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕರೆ ಮಾಡಿ ಮಾತನಾಡಿ, ಸಾಂತ್ವನ ಹೇಳಿದ್ದಾರೆ. </p><p>ಈ ವೇಳೆ ರಾಹುಲ್ ಸಹಾಯದ ಭರವಸೆಯನ್ನು ನೀಡಿದ್ದಾರೆ ಎಂದು ತಿಳಿದು ಬಂದಿದೆ.</p><p>ಇತ್ತೀಚೆಗೆ ಬುಡಕಟ್ಟು ಸಮುದಾಯದ 45 ವಯಸ್ಸಿನ ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿತ್ತು, ಗಂಭೀರ ಸ್ವರೂಪದಲ್ಲಿ ಗಾಯಗೊಂಡಿದ್ದ ಮಹಿಳೆ ಮೃತಪಟ್ಟಿದ್ದರು.</p>.ಮಾಫಿ ಸಾವರ್ಕರ್ ಹೇಳಿಕೆ | ರಾಹುಲ್ ಮುಖಕ್ಕೆ ಮಸಿ: ಶಿವಸೇನಾ(UBT) ನಾಯಕನ ಬೆದರಿಕೆ.ಜೂನ್ 25ರೊಳಗೆ ಭಾರತ-ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದ ಪೂರ್ಣ?. <p>ಅಖಿಲ ಭಾರತ ಆದಿವಾಸಿ ಕಾಂಗ್ರೆಸ್ ಅಧ್ಯಕ್ಷ ವಿಕ್ರಾಂತ್ ಭುರಿಯಾ ಅವರು ಇಂದು (ಬುಧವಾರ) ಮಧ್ಯಾಹ್ನ ಸಂತ್ರಸ್ತೆಯ ಮನೆಗೆ ಭೇಟಿ ಮಾಡಿದ್ದಾರೆ. ಈ ವೇಳೆ ರಾಹುಲ್ ಮಾತನಾಡಿ ಧೈರ್ಯ ತುಂಬಿದ್ದಾರೆ ಎಂದು ತಿಳಿದು ಬಂದಿದೆ. ಸಂಭಾಷಣೆಯ ವಿಡಿಯೊವನ್ನೂ ಕಾಂಗ್ರೆಸ್ ಪಕ್ಷ ಬಿಡುಗಡೆ ಮಾಡಿದೆ.</p><p>ಸಂಭಾಷಣೆಯ ವೇಳೆ ರಾಹುಲ್ ಗಾಂಧಿ ಆರೋಪಿಗಳು ನಿಮಗೆ ತಿಳಿದಿರುವವರೇ?, ಆರೋಪಿಗಳನ್ನು ಬಂಧಿಸಲಾಗಿದೆಯೇ? ಎಂದು ಪ್ರಶ್ನಿಸಿದರು. ಇದಕ್ಕೆ ಕುಟುಂಬಸ್ಥರು ಹೌದು ಎಂದು ಹೇಳಿದ್ದಾರೆ.</p>.TCS ಸಿಇಒ ಕಾರ್ತಿವಾಸನ್ ವೇತನ ₹26 ಕೋಟಿ: ಸರಾಸರಿ ವೇತನಕ್ಕಿಂತ 330 ಪಟ್ಟು ಹೆಚ್ಚಳ.ಮಣಿಪುರದಲ್ಲಿ ಸರಣಿ ಭೂಕಂಪ: ಯಾವುದೇ ಸಾವು, ಹಾನಿಯ ವರದಿಯಾಗಿಲ್ಲ. <p>ಆರೋಪಿಗಳಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳಿ ಮತ್ತು ಕುಟುಂಬದ ಬೆಂಬಲಕ್ಕೆ ನಿಲ್ಲುವಂತೆ ರಾಹುಲ್ ಅವರು ಭುರಿಯಾ ಅವರಿಗೆ ಸೂಚಿಸಿದ್ದಾರೆ.</p><p>ಆರೋಪಿಗಳ ವಿರುದ್ಧ ಭಾರತೀಯ ನ್ಯಾಯಸಂಹಿತೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಮೃತಪಟ್ಟ ಮಹಿಳೆಗೆ ಇಬ್ಬರು ಮಕ್ಕಳಿದ್ದಾರೆ ಎಂದು ಪೊಲೀಸರು ತಿಳಿಸಿದ್ದರು.</p>.ಸಿಂಗಪುರ: ಪಾರಿವಾಳಗಳಿಗೆ ಕಾಳು ಹಾಕಿದ್ದಕ್ಕೆ ಭಾರತೀಯ ಮೂಲದ ಮಹಿಳೆಗೆ ದಂಡ.ಕನ್ನಡಕ್ಕೆ ಎರಡೂವರೆ ಸಾವಿರ ವರ್ಷಗಳ ಇತಿಹಾಸವಿದೆ; ಕಮಲ್ ಮಾತು ಒಪ್ಪಲ್ಲ: ಜಗ್ಗೇಶ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಖಾಂಡವಾ (ಮಧ್ಯಪ್ರದೇಶ):</strong> ಇತ್ತೀಚೆಗೆ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿ ಮೃತಪಟ್ಟ ಬುಡಕಟ್ಟು ಮಹಿಳೆಯ ಕುಟುಂಬದೊಂದಿಗೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕರೆ ಮಾಡಿ ಮಾತನಾಡಿ, ಸಾಂತ್ವನ ಹೇಳಿದ್ದಾರೆ. </p><p>ಈ ವೇಳೆ ರಾಹುಲ್ ಸಹಾಯದ ಭರವಸೆಯನ್ನು ನೀಡಿದ್ದಾರೆ ಎಂದು ತಿಳಿದು ಬಂದಿದೆ.</p><p>ಇತ್ತೀಚೆಗೆ ಬುಡಕಟ್ಟು ಸಮುದಾಯದ 45 ವಯಸ್ಸಿನ ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿತ್ತು, ಗಂಭೀರ ಸ್ವರೂಪದಲ್ಲಿ ಗಾಯಗೊಂಡಿದ್ದ ಮಹಿಳೆ ಮೃತಪಟ್ಟಿದ್ದರು.</p>.ಮಾಫಿ ಸಾವರ್ಕರ್ ಹೇಳಿಕೆ | ರಾಹುಲ್ ಮುಖಕ್ಕೆ ಮಸಿ: ಶಿವಸೇನಾ(UBT) ನಾಯಕನ ಬೆದರಿಕೆ.ಜೂನ್ 25ರೊಳಗೆ ಭಾರತ-ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದ ಪೂರ್ಣ?. <p>ಅಖಿಲ ಭಾರತ ಆದಿವಾಸಿ ಕಾಂಗ್ರೆಸ್ ಅಧ್ಯಕ್ಷ ವಿಕ್ರಾಂತ್ ಭುರಿಯಾ ಅವರು ಇಂದು (ಬುಧವಾರ) ಮಧ್ಯಾಹ್ನ ಸಂತ್ರಸ್ತೆಯ ಮನೆಗೆ ಭೇಟಿ ಮಾಡಿದ್ದಾರೆ. ಈ ವೇಳೆ ರಾಹುಲ್ ಮಾತನಾಡಿ ಧೈರ್ಯ ತುಂಬಿದ್ದಾರೆ ಎಂದು ತಿಳಿದು ಬಂದಿದೆ. ಸಂಭಾಷಣೆಯ ವಿಡಿಯೊವನ್ನೂ ಕಾಂಗ್ರೆಸ್ ಪಕ್ಷ ಬಿಡುಗಡೆ ಮಾಡಿದೆ.</p><p>ಸಂಭಾಷಣೆಯ ವೇಳೆ ರಾಹುಲ್ ಗಾಂಧಿ ಆರೋಪಿಗಳು ನಿಮಗೆ ತಿಳಿದಿರುವವರೇ?, ಆರೋಪಿಗಳನ್ನು ಬಂಧಿಸಲಾಗಿದೆಯೇ? ಎಂದು ಪ್ರಶ್ನಿಸಿದರು. ಇದಕ್ಕೆ ಕುಟುಂಬಸ್ಥರು ಹೌದು ಎಂದು ಹೇಳಿದ್ದಾರೆ.</p>.TCS ಸಿಇಒ ಕಾರ್ತಿವಾಸನ್ ವೇತನ ₹26 ಕೋಟಿ: ಸರಾಸರಿ ವೇತನಕ್ಕಿಂತ 330 ಪಟ್ಟು ಹೆಚ್ಚಳ.ಮಣಿಪುರದಲ್ಲಿ ಸರಣಿ ಭೂಕಂಪ: ಯಾವುದೇ ಸಾವು, ಹಾನಿಯ ವರದಿಯಾಗಿಲ್ಲ. <p>ಆರೋಪಿಗಳಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳಿ ಮತ್ತು ಕುಟುಂಬದ ಬೆಂಬಲಕ್ಕೆ ನಿಲ್ಲುವಂತೆ ರಾಹುಲ್ ಅವರು ಭುರಿಯಾ ಅವರಿಗೆ ಸೂಚಿಸಿದ್ದಾರೆ.</p><p>ಆರೋಪಿಗಳ ವಿರುದ್ಧ ಭಾರತೀಯ ನ್ಯಾಯಸಂಹಿತೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಮೃತಪಟ್ಟ ಮಹಿಳೆಗೆ ಇಬ್ಬರು ಮಕ್ಕಳಿದ್ದಾರೆ ಎಂದು ಪೊಲೀಸರು ತಿಳಿಸಿದ್ದರು.</p>.ಸಿಂಗಪುರ: ಪಾರಿವಾಳಗಳಿಗೆ ಕಾಳು ಹಾಕಿದ್ದಕ್ಕೆ ಭಾರತೀಯ ಮೂಲದ ಮಹಿಳೆಗೆ ದಂಡ.ಕನ್ನಡಕ್ಕೆ ಎರಡೂವರೆ ಸಾವಿರ ವರ್ಷಗಳ ಇತಿಹಾಸವಿದೆ; ಕಮಲ್ ಮಾತು ಒಪ್ಪಲ್ಲ: ಜಗ್ಗೇಶ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>