<p><strong>ನವದೆಹಲಿ</strong>: ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಸಶಸ್ತ್ರ ಪಡೆಯಲ್ಲಿ ಖಾಲಿ ಹುದ್ದೆಗಳ ಕುರಿತಾದ ಮಹತ್ವದ ಮಾಹಿತಿಗಳನ್ನು ಮುಚ್ಚಿಡುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.</p><p>ಈ ಮಾಹಿತಿಯು ಅಗ್ನಿಪಥ ನೇಮಕಾತಿ ಯೋಜನೆ ಕುರಿತಂತೆ ಮತ್ತಷ್ಟು ಪ್ರಶ್ನೆಗಳನ್ನು ಎತ್ತಬಹುದು ಎಂದು ಸರ್ಕಾರ ಭಯಪಡುತ್ತಿದೆಯೇ? ಎಂದು ಅವರು ಪ್ರಶ್ನಿಸಿದ್ದಾರೆ.</p><p>ಸೋಮವಾರ ರಾಜ್ಯಸಭೆಯಲ್ಲಿ ಕೇಳಲಾದ ಪ್ರಶ್ನೆ ಮತ್ತು ಉತ್ತರದ ಮಾಹಿತಿಯನ್ನು ಖರ್ಗೆ ಎಕ್ಸ್ ಪೋಸ್ಟ್ನಲ್ಲಿ ಹಂಚಿಕೊಂಡಿದ್ದಾರೆ. ಸೇನೆಯಲ್ಲಿ ಅಧಿಕಾರಿಗಳು, ವೈದ್ಯಕೀಯ ಅಧಿಕಾರಿಗಳು, ಯೋಧರು ಸೇರಿದಂತೆ ಇತರೆ ಸಿಬ್ಬಂದಿಯ ಕೊರತೆ ಬಗ್ಗೆ ಸರ್ಕಾರ ಗಮನ ಹರಿಸಿದೆಯೇ? ಈ ಬಗ್ಗೆ ಮಾಹಿತಿ ಹಂಚಿಕೊಳ್ಳಬಹುದೇ ಎಂದು ಪ್ರಶ್ನೆ ಕೇಳಲಾಯಿತು.</p><p>ಇದಕ್ಕೆ ಲಿಖಿತ ಉತ್ತರ ನೀಡಿದ ರಕ್ಷಣಾ ಖಾತೆಯ ರಾಜ್ಯ ಸಚಿವ ಸಂಜಯ್ ಸೇಠ್, ‘ಸದನದಲ್ಲಿ ಕೋರಲಾಗಿರುವ ಮಾಹಿತಿಯು ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಸೂಕ್ಷ್ಮ ಕಾರ್ಯಾಚರಣೆಯ ವಿಷಯವಾಗಿದೆ. ಹಾಗಾಗಿ, ಸಂಬಂಧಿತ ವಿವರಗಳನ್ನು ರಾಷ್ಟ್ರೀಯ ಭದ್ರತೆಯ ದೃಷ್ಟಿಯಿಂದ ಬಹಿರಂಗಪಡಿಸುವುದು ಸೂಕ್ತವಾದುದಲ್ಲ’ಎಂದಿದ್ದಾರೆ.</p><p>‘ಬಿಜೆಪಿಯ ನಕಲಿ ರಾಷ್ಟ್ರೀಯವಾದಿಗಳು ನಮ್ಮ ದೇಶಪ್ರೇಮಿ ಯುವಕರ ಮೇಲೆ ಅಗ್ನಿಪಥ ಯೋಜನೆಯನ್ನು ಹೇರಿದ್ದಾರೆ. ಅವರ ಭವಿಷ್ಯವನ್ನು ನಾಶಪಡಿಸಿದ್ದಾರೆ. ಈಗ ಈ ಕುರಿತಾದ ಪ್ರಮುಖ ಮಾಹಿತಿಯನ್ನು ಬಹಿರಂಗವಾಗಿ ಹಂಚಿಕೊಳ್ಳಲು ನಿರಾಕರಿಸುತ್ತಿದ್ದಾರೆ’ಎಂದು ಖರ್ಗೆ ಕಿಡಿಕಾರಿದ್ದಾರೆ.</p><p>ಸೇನೆಯಲ್ಲಿ ಖಾಲಿ ಇರುವ ಅಧಿಕಾರಿಗಳು, ಯೋಧರು, ಜೆಒಸಿ, ವೈದ್ಯಕೀಯ ಅಧಿಕಾರಿಗಳ ಹುದ್ದೆಗಳ ಕುರಿತಾದ ಪ್ರಮುಖ ಮಾಹಿತಿಗಳನ್ನು ಮೋದಿ ಸರ್ಕಾರ ಕಳೆದ ಕೆಲ ವರ್ಷಗಳಿಂದ ಆಗಿಂದ್ದಾಗ್ಗೆ ಪ್ರಕಟಿಸುತ್ತಿದೆ ಎಂದು ಖರ್ಗೆ ಹೇಳಿದ್ದಾರೆ.</p><p>‘ಈಗ ಏಕೆ ಇದ್ದಕ್ಕಿದ್ದಂತೆ ಈ ಕುರಿತಾದ ಮಾಹಿತಿ ಹಂಚಿಕೊಳ್ಳಲು ನೀವು ಹಿಂದೇಟು ಹಾಕುತ್ತಿದ್ದೀರಿ ಎಂಬುದನ್ನು ಅರ್ಥ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಬಹಳಷ್ಟು ಹುದ್ದೆಗಳ ಖಾಲಿ ಕುರಿತಾದ ಈ ಮಾಹಿತಿಯು ಅಗ್ನಿಪಥ ಯೋಜನೆಯ ಮೇಲೆ ಮತ್ತಷ್ಟು ಪ್ರಶ್ನೆಗಳನ್ನು ಎತ್ತಲಿದೆ ಎಂದು ನೀವು ಭಯಪಡುತ್ತಿರುವಿರೇ? ಕೆಟ್ಟ ಆಲೋಚನೆ ಇಟ್ಟುಕೊಂಡು ಏಕಪಕ್ಷೀಯವಾಗಿ ಈ ಯೋಜನೆಯನ್ನು ಸಶಸ್ತ್ರ ಪಡೆಗಳ ಮೇಲೆ ಹೇರಿದ್ದೀರಿ’ಎಂದು ದೂರಿದ್ದಾರೆ.</p><p>2023ರ ಮಾರ್ಚ್ ತಿಂಗಳಲ್ಲಿ ಮೋದಿ ಸರ್ಕಾರ ನೀಡಿರುವ ಮಾಹಿತಿ ಪ್ರಕಾರ ಸಶಸ್ತ್ರ ಪಡೆಯಲ್ಲಿ 1.55 ಲಕ್ಷಕ್ಕೂ ಅಧಿಕ ಹುದ್ದೆಗಳು ಖಾಲಿ ಇವೆ.</p><p>ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ಗೆ ರಾಷ್ಟ್ರೀಯ ಭದ್ರತೆ ಅತಿಮುಖ್ಯ. ನೈಜ ರಾಷ್ಟ್ರೀಯ ಹಿತಾಸಕ್ತಿಯು ಸಶಸ್ತ್ರ ಪಡೆಯಲ್ಲಿ ನಿಜವಾಗಿ ಖಾಲಿ ಇರುವ ಹುದ್ದೆಗಳ ಮಾಹಿತಿ ಬಹಿರಂಗಕ್ಕೆ ಕೋರುತ್ತದೆ ಎಂದಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಸಶಸ್ತ್ರ ಪಡೆಯಲ್ಲಿ ಖಾಲಿ ಹುದ್ದೆಗಳ ಕುರಿತಾದ ಮಹತ್ವದ ಮಾಹಿತಿಗಳನ್ನು ಮುಚ್ಚಿಡುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.</p><p>ಈ ಮಾಹಿತಿಯು ಅಗ್ನಿಪಥ ನೇಮಕಾತಿ ಯೋಜನೆ ಕುರಿತಂತೆ ಮತ್ತಷ್ಟು ಪ್ರಶ್ನೆಗಳನ್ನು ಎತ್ತಬಹುದು ಎಂದು ಸರ್ಕಾರ ಭಯಪಡುತ್ತಿದೆಯೇ? ಎಂದು ಅವರು ಪ್ರಶ್ನಿಸಿದ್ದಾರೆ.</p><p>ಸೋಮವಾರ ರಾಜ್ಯಸಭೆಯಲ್ಲಿ ಕೇಳಲಾದ ಪ್ರಶ್ನೆ ಮತ್ತು ಉತ್ತರದ ಮಾಹಿತಿಯನ್ನು ಖರ್ಗೆ ಎಕ್ಸ್ ಪೋಸ್ಟ್ನಲ್ಲಿ ಹಂಚಿಕೊಂಡಿದ್ದಾರೆ. ಸೇನೆಯಲ್ಲಿ ಅಧಿಕಾರಿಗಳು, ವೈದ್ಯಕೀಯ ಅಧಿಕಾರಿಗಳು, ಯೋಧರು ಸೇರಿದಂತೆ ಇತರೆ ಸಿಬ್ಬಂದಿಯ ಕೊರತೆ ಬಗ್ಗೆ ಸರ್ಕಾರ ಗಮನ ಹರಿಸಿದೆಯೇ? ಈ ಬಗ್ಗೆ ಮಾಹಿತಿ ಹಂಚಿಕೊಳ್ಳಬಹುದೇ ಎಂದು ಪ್ರಶ್ನೆ ಕೇಳಲಾಯಿತು.</p><p>ಇದಕ್ಕೆ ಲಿಖಿತ ಉತ್ತರ ನೀಡಿದ ರಕ್ಷಣಾ ಖಾತೆಯ ರಾಜ್ಯ ಸಚಿವ ಸಂಜಯ್ ಸೇಠ್, ‘ಸದನದಲ್ಲಿ ಕೋರಲಾಗಿರುವ ಮಾಹಿತಿಯು ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಸೂಕ್ಷ್ಮ ಕಾರ್ಯಾಚರಣೆಯ ವಿಷಯವಾಗಿದೆ. ಹಾಗಾಗಿ, ಸಂಬಂಧಿತ ವಿವರಗಳನ್ನು ರಾಷ್ಟ್ರೀಯ ಭದ್ರತೆಯ ದೃಷ್ಟಿಯಿಂದ ಬಹಿರಂಗಪಡಿಸುವುದು ಸೂಕ್ತವಾದುದಲ್ಲ’ಎಂದಿದ್ದಾರೆ.</p><p>‘ಬಿಜೆಪಿಯ ನಕಲಿ ರಾಷ್ಟ್ರೀಯವಾದಿಗಳು ನಮ್ಮ ದೇಶಪ್ರೇಮಿ ಯುವಕರ ಮೇಲೆ ಅಗ್ನಿಪಥ ಯೋಜನೆಯನ್ನು ಹೇರಿದ್ದಾರೆ. ಅವರ ಭವಿಷ್ಯವನ್ನು ನಾಶಪಡಿಸಿದ್ದಾರೆ. ಈಗ ಈ ಕುರಿತಾದ ಪ್ರಮುಖ ಮಾಹಿತಿಯನ್ನು ಬಹಿರಂಗವಾಗಿ ಹಂಚಿಕೊಳ್ಳಲು ನಿರಾಕರಿಸುತ್ತಿದ್ದಾರೆ’ಎಂದು ಖರ್ಗೆ ಕಿಡಿಕಾರಿದ್ದಾರೆ.</p><p>ಸೇನೆಯಲ್ಲಿ ಖಾಲಿ ಇರುವ ಅಧಿಕಾರಿಗಳು, ಯೋಧರು, ಜೆಒಸಿ, ವೈದ್ಯಕೀಯ ಅಧಿಕಾರಿಗಳ ಹುದ್ದೆಗಳ ಕುರಿತಾದ ಪ್ರಮುಖ ಮಾಹಿತಿಗಳನ್ನು ಮೋದಿ ಸರ್ಕಾರ ಕಳೆದ ಕೆಲ ವರ್ಷಗಳಿಂದ ಆಗಿಂದ್ದಾಗ್ಗೆ ಪ್ರಕಟಿಸುತ್ತಿದೆ ಎಂದು ಖರ್ಗೆ ಹೇಳಿದ್ದಾರೆ.</p><p>‘ಈಗ ಏಕೆ ಇದ್ದಕ್ಕಿದ್ದಂತೆ ಈ ಕುರಿತಾದ ಮಾಹಿತಿ ಹಂಚಿಕೊಳ್ಳಲು ನೀವು ಹಿಂದೇಟು ಹಾಕುತ್ತಿದ್ದೀರಿ ಎಂಬುದನ್ನು ಅರ್ಥ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಬಹಳಷ್ಟು ಹುದ್ದೆಗಳ ಖಾಲಿ ಕುರಿತಾದ ಈ ಮಾಹಿತಿಯು ಅಗ್ನಿಪಥ ಯೋಜನೆಯ ಮೇಲೆ ಮತ್ತಷ್ಟು ಪ್ರಶ್ನೆಗಳನ್ನು ಎತ್ತಲಿದೆ ಎಂದು ನೀವು ಭಯಪಡುತ್ತಿರುವಿರೇ? ಕೆಟ್ಟ ಆಲೋಚನೆ ಇಟ್ಟುಕೊಂಡು ಏಕಪಕ್ಷೀಯವಾಗಿ ಈ ಯೋಜನೆಯನ್ನು ಸಶಸ್ತ್ರ ಪಡೆಗಳ ಮೇಲೆ ಹೇರಿದ್ದೀರಿ’ಎಂದು ದೂರಿದ್ದಾರೆ.</p><p>2023ರ ಮಾರ್ಚ್ ತಿಂಗಳಲ್ಲಿ ಮೋದಿ ಸರ್ಕಾರ ನೀಡಿರುವ ಮಾಹಿತಿ ಪ್ರಕಾರ ಸಶಸ್ತ್ರ ಪಡೆಯಲ್ಲಿ 1.55 ಲಕ್ಷಕ್ಕೂ ಅಧಿಕ ಹುದ್ದೆಗಳು ಖಾಲಿ ಇವೆ.</p><p>ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ಗೆ ರಾಷ್ಟ್ರೀಯ ಭದ್ರತೆ ಅತಿಮುಖ್ಯ. ನೈಜ ರಾಷ್ಟ್ರೀಯ ಹಿತಾಸಕ್ತಿಯು ಸಶಸ್ತ್ರ ಪಡೆಯಲ್ಲಿ ನಿಜವಾಗಿ ಖಾಲಿ ಇರುವ ಹುದ್ದೆಗಳ ಮಾಹಿತಿ ಬಹಿರಂಗಕ್ಕೆ ಕೋರುತ್ತದೆ ಎಂದಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>