<p><strong>ನವದೆಹಲಿ</strong>: ‘ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ರೈತರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಈಗ ರೈತರ ದನಿಯನ್ನು ದಮನ ಮಾಡುತ್ತಿದೆ’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಟೀಕಿಸಿದ್ದಾರೆ.</p>.<p>ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ‘ದೆಹಲಿ ಚಲೋ’ ಹಮ್ಮಿಕೊಂಡಿರುವ ರೈತರು, ರಾಷ್ಟ್ರ ರಾಜಧಾನಿ ಪ್ರವೇಶಿಸದಂತೆ ವ್ಯಾಪಕ ಬಂದೋಬಸ್ತ್ ಮಾಡಿರುವ ಸರ್ಕಾರದ ನಡೆ ವಿರುದ್ಧ ಅವರು ವಾಗ್ದಾಳಿ ನಡೆಸಿದ್ದಾರೆ.</p>.<p>‘ಮುಳ್ಳು ತಂತಿಗಳ ಬೇಲಿ ಅಳವಡಿಕೆ, ಡ್ರೋನ್ಗಳಿಂದ ಅಶ್ರುವಾಯು ಶೆಲ್ ಸಿಡಿಸುವುದು ಸೇರಿದಂತೆ ರೈತರು ದೆಹಲಿ ಪ್ರವೇಶಿಸದಂತೆ ತಡೆಯುವುದಕ್ಕಾಗಿ ಸರ್ಕಾರ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ. ಸರ್ವಾಧಿಕಾರ ಧೋರಣೆಯ ಈ ಸರ್ಕಾರ ರೈತರ ದನಿ ಹತ್ತಿಕ್ಕುತ್ತಿದೆ’ ಎಂದು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.</p>.<p>‘ಈ ಹಿಂದೆಯೂ ರೈತರು ಪ್ರತಿಭಟನೆ ನಡೆಸಿದ್ದರು. ಆಗ, ‘ಆಂದೋಲನ ಜೀವಿ’ ಹಾಗೂ ‘ಪರಾವಲಂಬಿ’ಗಳು ಎಂಬುದಾಗಿ ಕರೆಯುವ ಮೂಲಕ ಅವರನ್ನು ಅವಮಾನಿಸಲಾಗಿತ್ತು . ಪ್ರತಿಭಟನೆ ವೇಳೆ 750 ರೈತರು ಪ್ರಾಣ ಕಳೆದುಕೊಂಡಿದ್ದರು’ ಎಂದು ಅವರು ಹಿಂದಿಯಲ್ಲಿ ಮಾಡಿರುವ ಪೋಸ್ಟ್ನಲ್ಲಿ ತಿಳಿಸಿದ್ದಾರೆ.</p>.<p>ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಕಾಂಗ್ರೆಸ್ ಪಕ್ಷ ಸಂಪೂರ್ಣ ಬೆಂಬಲ ನೀಡುತ್ತದೆ ಎಂದಿರುವ ಅವರು, ‘ನಾವು ಹೆದರುವುದಿಲ್ಲ; ನಾವು ಬಗ್ಗುವುದಿಲ್ಲ’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ರೈತರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಈಗ ರೈತರ ದನಿಯನ್ನು ದಮನ ಮಾಡುತ್ತಿದೆ’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಟೀಕಿಸಿದ್ದಾರೆ.</p>.<p>ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ‘ದೆಹಲಿ ಚಲೋ’ ಹಮ್ಮಿಕೊಂಡಿರುವ ರೈತರು, ರಾಷ್ಟ್ರ ರಾಜಧಾನಿ ಪ್ರವೇಶಿಸದಂತೆ ವ್ಯಾಪಕ ಬಂದೋಬಸ್ತ್ ಮಾಡಿರುವ ಸರ್ಕಾರದ ನಡೆ ವಿರುದ್ಧ ಅವರು ವಾಗ್ದಾಳಿ ನಡೆಸಿದ್ದಾರೆ.</p>.<p>‘ಮುಳ್ಳು ತಂತಿಗಳ ಬೇಲಿ ಅಳವಡಿಕೆ, ಡ್ರೋನ್ಗಳಿಂದ ಅಶ್ರುವಾಯು ಶೆಲ್ ಸಿಡಿಸುವುದು ಸೇರಿದಂತೆ ರೈತರು ದೆಹಲಿ ಪ್ರವೇಶಿಸದಂತೆ ತಡೆಯುವುದಕ್ಕಾಗಿ ಸರ್ಕಾರ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ. ಸರ್ವಾಧಿಕಾರ ಧೋರಣೆಯ ಈ ಸರ್ಕಾರ ರೈತರ ದನಿ ಹತ್ತಿಕ್ಕುತ್ತಿದೆ’ ಎಂದು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.</p>.<p>‘ಈ ಹಿಂದೆಯೂ ರೈತರು ಪ್ರತಿಭಟನೆ ನಡೆಸಿದ್ದರು. ಆಗ, ‘ಆಂದೋಲನ ಜೀವಿ’ ಹಾಗೂ ‘ಪರಾವಲಂಬಿ’ಗಳು ಎಂಬುದಾಗಿ ಕರೆಯುವ ಮೂಲಕ ಅವರನ್ನು ಅವಮಾನಿಸಲಾಗಿತ್ತು . ಪ್ರತಿಭಟನೆ ವೇಳೆ 750 ರೈತರು ಪ್ರಾಣ ಕಳೆದುಕೊಂಡಿದ್ದರು’ ಎಂದು ಅವರು ಹಿಂದಿಯಲ್ಲಿ ಮಾಡಿರುವ ಪೋಸ್ಟ್ನಲ್ಲಿ ತಿಳಿಸಿದ್ದಾರೆ.</p>.<p>ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಕಾಂಗ್ರೆಸ್ ಪಕ್ಷ ಸಂಪೂರ್ಣ ಬೆಂಬಲ ನೀಡುತ್ತದೆ ಎಂದಿರುವ ಅವರು, ‘ನಾವು ಹೆದರುವುದಿಲ್ಲ; ನಾವು ಬಗ್ಗುವುದಿಲ್ಲ’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>