<p><strong>ನವದೆಹಲಿ</strong>: ಚೀನಾ, ಪಾಕಿಸ್ತಾನ ಸಂಬಂಧಿತ ಭದ್ರತಾ ಸವಾಲು ಕುರಿತು ಸಂಸತ್ತನ್ನು ವಿಶ್ವಾಸಕ್ಕೆ ಪಡೆಯಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಒತ್ತಾಯಿಸಿದ್ದಾರೆ.</p>.<p>ಕೇಂದ್ರವು ‘ಹುಸಿ ಧೈರ್ಯ, ಟೊಳ್ಳು ಪ್ರಚಾರ’ ನಡೆಸುತ್ತಿದೆ ಎಂದು ಆರೋಪಿಸಿರುವ ಅವರು, ದೇಶದ ಕಾರ್ಯತಂತ್ರ ಹಿತಾಸಕ್ತಿ ರಕ್ಷಿಸುವ ಹೊಣೆಗಾರಿಕೆ ಇದೆ ಎಂಬುದನ್ನೇ ಸರ್ಕಾರ ಮರೆತಿದೆ ಎಂದಿದ್ದಾರೆ.</p>.<p>ದೇಶದ ಭದ್ರತೆ ಕುರಿತಂತೆ ಇತ್ತೀಚಿನ ಎರಡು ಬೆಳವಣಿಗೆಗಳು ನರೇಂದ್ರ ಮೋದಿ ನೇತೃತ್ವದ ಸರ್ಕಾರದ ನಿರಾಸಕ್ತಿಯನ್ನು ಬಯಲು ಮಾಡಿದೆ ಎಂದು ಟೀಕಿಸಿದ್ದಾರೆ. </p>.<p>ಎಕ್ಸ್ನಲ್ಲಿ ಈ ಕುರಿತು ಮಾಡಿರುವ ಪೋಸ್ಟ್ನಲ್ಲಿ ಅವರು, ಪ್ಯಾಂಗಾಂಗ್ ಸರೋವರದ ಉತ್ತರ ಮತ್ತು ದಕ್ಷಿಣ ತುದಿ ಸಂಪರ್ಕಿಸುವಂತೆ ಚೀನಾ ಸೇತುವೆ ನಿರ್ಮಿಸಿದ್ದು, ಅದು ಬಳಕೆಯಲ್ಲಿರುವುದು ನಿಜವಲ್ಲವೇ ಎಂದು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ.</p>.<p>ಡೆಮ್ಚೊಕ್ ವಲಯದಲ್ಲಿ ಡೆಪ್ಸಂಗ್ಗೆ ಸಮೀಪ ವಾಸ್ತವ ಗಡಿ ರೇಖೆಗೆ ಹೊಂದಿಕೊಂಡಂತೆ ಹೊಸ ಗ್ರಾಮ ಅಭಿವೃದ್ಧಿ ಪಡಿಸುತ್ತಿಲ್ಲವೇ ಎಂದು ಪ್ರಶ್ನಿಸಿದ್ದಾರೆ. </p>.<p>ಪಾಕಿಸ್ತಾನಕ್ಕೆ ಸಂಬಂಧಿಸಿದಂತೆ, ಪ್ರಧಾನಿಯಾಗಿ ಮೋದಿ ಅಧಿಕಾರ ಸ್ವೀಕರಿಸಿದ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ 25 ಭಯೋತ್ಪಾದಕ ದಾಳಿ ನಡೆದಿರುವುದು ಹಾಗೂ 15 ಯೋಧರು, ಭದ್ರತಾ ಸಿಬ್ಬಂದಿ ಸತ್ತು ಇತರೆ 27 ಮಂದಿ ಗಾಯಗೊಂಡಿರುವುದು ನಿಜವಲ್ಲವೇ ಎಂದು ಪ್ರಶ್ನಿಸಿದ್ದಾರೆ. </p>.<p>ಈ ಬೆಳವಣಿಗೆಗಳು ರಾಷ್ಟ್ರೀಯ ಭದ್ರತೆ ದೃಷ್ಟಿಯಿಂದ ಗಂಭೀರ ಮತ್ತು ಸೂಕ್ಷ್ಮವಾದ ವಿಷಯವಾಗಿದೆ. ಇದನ್ನು ಎದುರಿಸಲು ಒಗ್ಗಟ್ಟಿನ, ರಚನಾತ್ಮಕ ಕ್ರಮ ಅಗತ್ಯ ಎಂದು ಅವರು ಪ್ರತಿಪಾದಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಚೀನಾ, ಪಾಕಿಸ್ತಾನ ಸಂಬಂಧಿತ ಭದ್ರತಾ ಸವಾಲು ಕುರಿತು ಸಂಸತ್ತನ್ನು ವಿಶ್ವಾಸಕ್ಕೆ ಪಡೆಯಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಒತ್ತಾಯಿಸಿದ್ದಾರೆ.</p>.<p>ಕೇಂದ್ರವು ‘ಹುಸಿ ಧೈರ್ಯ, ಟೊಳ್ಳು ಪ್ರಚಾರ’ ನಡೆಸುತ್ತಿದೆ ಎಂದು ಆರೋಪಿಸಿರುವ ಅವರು, ದೇಶದ ಕಾರ್ಯತಂತ್ರ ಹಿತಾಸಕ್ತಿ ರಕ್ಷಿಸುವ ಹೊಣೆಗಾರಿಕೆ ಇದೆ ಎಂಬುದನ್ನೇ ಸರ್ಕಾರ ಮರೆತಿದೆ ಎಂದಿದ್ದಾರೆ.</p>.<p>ದೇಶದ ಭದ್ರತೆ ಕುರಿತಂತೆ ಇತ್ತೀಚಿನ ಎರಡು ಬೆಳವಣಿಗೆಗಳು ನರೇಂದ್ರ ಮೋದಿ ನೇತೃತ್ವದ ಸರ್ಕಾರದ ನಿರಾಸಕ್ತಿಯನ್ನು ಬಯಲು ಮಾಡಿದೆ ಎಂದು ಟೀಕಿಸಿದ್ದಾರೆ. </p>.<p>ಎಕ್ಸ್ನಲ್ಲಿ ಈ ಕುರಿತು ಮಾಡಿರುವ ಪೋಸ್ಟ್ನಲ್ಲಿ ಅವರು, ಪ್ಯಾಂಗಾಂಗ್ ಸರೋವರದ ಉತ್ತರ ಮತ್ತು ದಕ್ಷಿಣ ತುದಿ ಸಂಪರ್ಕಿಸುವಂತೆ ಚೀನಾ ಸೇತುವೆ ನಿರ್ಮಿಸಿದ್ದು, ಅದು ಬಳಕೆಯಲ್ಲಿರುವುದು ನಿಜವಲ್ಲವೇ ಎಂದು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ.</p>.<p>ಡೆಮ್ಚೊಕ್ ವಲಯದಲ್ಲಿ ಡೆಪ್ಸಂಗ್ಗೆ ಸಮೀಪ ವಾಸ್ತವ ಗಡಿ ರೇಖೆಗೆ ಹೊಂದಿಕೊಂಡಂತೆ ಹೊಸ ಗ್ರಾಮ ಅಭಿವೃದ್ಧಿ ಪಡಿಸುತ್ತಿಲ್ಲವೇ ಎಂದು ಪ್ರಶ್ನಿಸಿದ್ದಾರೆ. </p>.<p>ಪಾಕಿಸ್ತಾನಕ್ಕೆ ಸಂಬಂಧಿಸಿದಂತೆ, ಪ್ರಧಾನಿಯಾಗಿ ಮೋದಿ ಅಧಿಕಾರ ಸ್ವೀಕರಿಸಿದ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ 25 ಭಯೋತ್ಪಾದಕ ದಾಳಿ ನಡೆದಿರುವುದು ಹಾಗೂ 15 ಯೋಧರು, ಭದ್ರತಾ ಸಿಬ್ಬಂದಿ ಸತ್ತು ಇತರೆ 27 ಮಂದಿ ಗಾಯಗೊಂಡಿರುವುದು ನಿಜವಲ್ಲವೇ ಎಂದು ಪ್ರಶ್ನಿಸಿದ್ದಾರೆ. </p>.<p>ಈ ಬೆಳವಣಿಗೆಗಳು ರಾಷ್ಟ್ರೀಯ ಭದ್ರತೆ ದೃಷ್ಟಿಯಿಂದ ಗಂಭೀರ ಮತ್ತು ಸೂಕ್ಷ್ಮವಾದ ವಿಷಯವಾಗಿದೆ. ಇದನ್ನು ಎದುರಿಸಲು ಒಗ್ಗಟ್ಟಿನ, ರಚನಾತ್ಮಕ ಕ್ರಮ ಅಗತ್ಯ ಎಂದು ಅವರು ಪ್ರತಿಪಾದಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>