<p><strong>ನವದೆಹಲಿ</strong>: ‘ಅಯೋಧ್ಯೆಯಲ್ಲಿ ರಾಮ ಮಂದಿರ ಪ್ರತಿಷ್ಠಾಪನೆಗೊಂಡ ದಿನ ಭಾರತಕ್ಕೆ ನಿಜವಾದ ಸ್ವಾತಂತ್ರ್ಯ ಸಿಕ್ಕಿತು’ ಎಂಬ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ ಪ್ರತಿಕ್ರಿಯಿಸಿದ್ದಾರೆ.</p><p>ಈ ಸಂಬಂಧ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ' ಭಾಗವತ್ ಈ ರೀತಿಯ ಹೇಳಿಕೆಗಳನ್ನು ನೀಡುವುದನ್ನು ಮುಂದುವರಿಸಿದರೆ ದೇಶದಲ್ಲಿ ತಿರುಗಾಡುವುದೂ ಕಷ್ಟವಾಗಬಹುದು' ಎಂದು ಖರ್ಗೆ ಕಿಡಿಕಾರಿದ್ದಾರೆ.</p><p>ರಾಮಮಂದಿರ ಪ್ರತಿಷ್ಠಾಪನೆಗೊಂಡ ದಿನವೇ ಭಾರತಕ್ಕೆ ಸ್ವಾತಂತ್ರ್ಯ ದೊರೆಕಿತ್ತು ಎಂಬುವುದಾದರೆ 1947ರ ಸ್ವಾತಂತ್ರ್ಯಕ್ಕೆ ಹೋರಾಟ ನಡೆಸಿದ ಇತಿಹಾಸ ನೆನಪಿಲ್ಲವೇ, ಸ್ವಾತಂತ್ರ್ಯಕ್ಕಾಗಿ ಆರ್ಎಸ್ಎಸ್ ಹೋರಾಟ ನಡೆಸಿಲ್ಲವೇ ಎಂದು ಖರ್ಗೆ ವಾಗ್ದಾಳಿ ನಡೆಸಿದ್ದಾರೆ.</p>.ಶಾಸಕ ಝಾ ವಿರುದ್ಧ ಬಿಜೆಪಿಯ ಪೂನಾವಾಲಾ ಹೇಳಿಕೆ ಖಂಡಿಸಿ ನಾಳೆ ಎಎಪಿ ಪ್ರತಿಭಟನೆ .ನಾನು ಮೃತಪಟ್ಟರೆ ಎಎಪಿಯೇ ಕಾರಣ: ಉಪವಾಸ ಆರಂಭಿಸಿದ ಬಿಜೆಪಿಯ ಶೆಹಜಾದ್ ಪೂನಾವಾಲಾ. <p>1947ರ ಸ್ವಾತಂತ್ರ್ಯಕ್ಕಾಗಿ ನೂರಾರು ವರ್ಷಗಳ ಕಾಲ ನಡೆದ ಹೋರಾಟ, ಹೋರಾಟಗಾರರ ಪ್ರಾಣ ತ್ಯಾಗ ಯಾವುದು ನೆನಪಿಲ್ಲವೇ? ಸ್ವಾತಂತ್ರ್ಯ ಹೋರಾಟ ಸಂದರ್ಭದಲ್ಲಿ ಭಾಗಿಯಾಗದೇ ಇರುವವರು ಈ ರೀತಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p><p>'1947ರಲ್ಲಿ ಸ್ವಾತಂತ್ರ್ಯ ಸಿಕ್ಕಿತ್ತು ಎಂಬ ವಿಚಾರವನ್ನು ಒಪ್ಪಿಕೊಳ್ಳಲು ಸಿದ್ಧರಿಲ್ಲದಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ. ಭಾಗವತ್ ಇಂತಹ ಹೇಳಿಕೆಗಳನ್ನು ನೀಡುವುದನ್ನು ಮುಂದುರಿಸಿದರೆ ಈ ದೇಶದಲ್ಲಿ ಅವರು ತಿರುಗುವುದೂ ಕಷ್ಟವಾಗುತ್ತದೆ' ಎಂದು ಖರ್ಗೆ ಹೇಳಿದ್ದಾರೆ.</p><p>ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಉಲ್ಲೇಖಿಸಿ ಮಾತನಾಡಿದ ಖರ್ಗೆ, ಇತಿಹಾಸ ಮರೆತವರು ಇತಿಹಾಸವನ್ನು ನಿರ್ಮಿಸಲು ಸಾಧ್ಯವಿಲ್ಲ ಎಂದು ತಿರುಗೇಟು ನೀಡಿದ್ದಾರೆ.</p>.ದಕ್ಷಿಣ ಕೊರಿಯಾದ ಅಧ್ಯಕ್ಷ ಯೂನ್ ಸುಕ್ ಯೋಲ್ ಬಂಧನ.ಮಹಾರಾಷ್ಟ್ರ | ವಾಹನಗಳಿಗೆ ಆಟೊ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು, 15 ಮಂದಿಗೆ ಗಾಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ಅಯೋಧ್ಯೆಯಲ್ಲಿ ರಾಮ ಮಂದಿರ ಪ್ರತಿಷ್ಠಾಪನೆಗೊಂಡ ದಿನ ಭಾರತಕ್ಕೆ ನಿಜವಾದ ಸ್ವಾತಂತ್ರ್ಯ ಸಿಕ್ಕಿತು’ ಎಂಬ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ ಪ್ರತಿಕ್ರಿಯಿಸಿದ್ದಾರೆ.</p><p>ಈ ಸಂಬಂಧ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ' ಭಾಗವತ್ ಈ ರೀತಿಯ ಹೇಳಿಕೆಗಳನ್ನು ನೀಡುವುದನ್ನು ಮುಂದುವರಿಸಿದರೆ ದೇಶದಲ್ಲಿ ತಿರುಗಾಡುವುದೂ ಕಷ್ಟವಾಗಬಹುದು' ಎಂದು ಖರ್ಗೆ ಕಿಡಿಕಾರಿದ್ದಾರೆ.</p><p>ರಾಮಮಂದಿರ ಪ್ರತಿಷ್ಠಾಪನೆಗೊಂಡ ದಿನವೇ ಭಾರತಕ್ಕೆ ಸ್ವಾತಂತ್ರ್ಯ ದೊರೆಕಿತ್ತು ಎಂಬುವುದಾದರೆ 1947ರ ಸ್ವಾತಂತ್ರ್ಯಕ್ಕೆ ಹೋರಾಟ ನಡೆಸಿದ ಇತಿಹಾಸ ನೆನಪಿಲ್ಲವೇ, ಸ್ವಾತಂತ್ರ್ಯಕ್ಕಾಗಿ ಆರ್ಎಸ್ಎಸ್ ಹೋರಾಟ ನಡೆಸಿಲ್ಲವೇ ಎಂದು ಖರ್ಗೆ ವಾಗ್ದಾಳಿ ನಡೆಸಿದ್ದಾರೆ.</p>.ಶಾಸಕ ಝಾ ವಿರುದ್ಧ ಬಿಜೆಪಿಯ ಪೂನಾವಾಲಾ ಹೇಳಿಕೆ ಖಂಡಿಸಿ ನಾಳೆ ಎಎಪಿ ಪ್ರತಿಭಟನೆ .ನಾನು ಮೃತಪಟ್ಟರೆ ಎಎಪಿಯೇ ಕಾರಣ: ಉಪವಾಸ ಆರಂಭಿಸಿದ ಬಿಜೆಪಿಯ ಶೆಹಜಾದ್ ಪೂನಾವಾಲಾ. <p>1947ರ ಸ್ವಾತಂತ್ರ್ಯಕ್ಕಾಗಿ ನೂರಾರು ವರ್ಷಗಳ ಕಾಲ ನಡೆದ ಹೋರಾಟ, ಹೋರಾಟಗಾರರ ಪ್ರಾಣ ತ್ಯಾಗ ಯಾವುದು ನೆನಪಿಲ್ಲವೇ? ಸ್ವಾತಂತ್ರ್ಯ ಹೋರಾಟ ಸಂದರ್ಭದಲ್ಲಿ ಭಾಗಿಯಾಗದೇ ಇರುವವರು ಈ ರೀತಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p><p>'1947ರಲ್ಲಿ ಸ್ವಾತಂತ್ರ್ಯ ಸಿಕ್ಕಿತ್ತು ಎಂಬ ವಿಚಾರವನ್ನು ಒಪ್ಪಿಕೊಳ್ಳಲು ಸಿದ್ಧರಿಲ್ಲದಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ. ಭಾಗವತ್ ಇಂತಹ ಹೇಳಿಕೆಗಳನ್ನು ನೀಡುವುದನ್ನು ಮುಂದುರಿಸಿದರೆ ಈ ದೇಶದಲ್ಲಿ ಅವರು ತಿರುಗುವುದೂ ಕಷ್ಟವಾಗುತ್ತದೆ' ಎಂದು ಖರ್ಗೆ ಹೇಳಿದ್ದಾರೆ.</p><p>ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಉಲ್ಲೇಖಿಸಿ ಮಾತನಾಡಿದ ಖರ್ಗೆ, ಇತಿಹಾಸ ಮರೆತವರು ಇತಿಹಾಸವನ್ನು ನಿರ್ಮಿಸಲು ಸಾಧ್ಯವಿಲ್ಲ ಎಂದು ತಿರುಗೇಟು ನೀಡಿದ್ದಾರೆ.</p>.ದಕ್ಷಿಣ ಕೊರಿಯಾದ ಅಧ್ಯಕ್ಷ ಯೂನ್ ಸುಕ್ ಯೋಲ್ ಬಂಧನ.ಮಹಾರಾಷ್ಟ್ರ | ವಾಹನಗಳಿಗೆ ಆಟೊ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು, 15 ಮಂದಿಗೆ ಗಾಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>