<p><strong>ನವದೆಹಲಿ:</strong> ‘ಪಕ್ಷ ಸಂಘಟನೆ ಬಲಪಡಿಸುವ ಸಲುವಾಗಿ ಕೆಳಹಂತದಿಂದ ಹಿಡಿದು ಉನ್ನತ ಮಟ್ಟದವರೆಗೆ ಉತ್ತರಾಯಿತ್ವ ಅಗತ್ಯ’ ಎಂದು ಪ್ರತಿಪಾದಿಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ‘ವಹಿಸಿದ ಜವಾಬ್ದಾರಿಯನ್ನು ನಿರ್ವವಹಿಸಲು ವಿಫಲರಾದವರು ಹುದ್ದೆ ತೊರೆಯಿರಿ. ಬೇರೆಯವರಿಗೆ ಜವಾಬ್ದಾರಿಯನ್ನು ವಹಿಸಲಾಗುವುದು’ ಎಂದು ಹೇಳಿದರು.</p>.<p>ಪಕ್ಷದ ಅಧ್ಯಕ್ಷರಾದ ನಂತರ ಭಾನುವಾರ ಇಲ್ಲಿ ನಡೆದ ಕಾಂಗ್ರೆಸ್ ಚಾಲನಾ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಪಕ್ಷ ಸಂಘಟನೆ ಮಾಡಿದರೂ ಬಂತು, ಮಾಡದಿದ್ದರೂ ಬಂತು. ವರಿಷ್ಠರು ಇದನ್ನೆಲ್ಲಾ ಗಮನಿಸುವುದಿಲ್ಲ ಎಂಬ ಮನೋಭಾವ ಕೆಲವರಲ್ಲಿದೆ. ಇಂಥ ಧೋರಣೆ ಸರಿ ಅಲ್ಲ ಹಾಗೂ ಒಪ್ಪತಕ್ಕದ್ದೂ ಅಲ್ಲ’ ಎಂದು ಕಟುವಾಗಿ ಹೇಳಿದರು.</p>.<p>‘ಕಾಂಗ್ರೆಸ್ ಪಕ್ಷದ ಸಂಘಟನೆ ಪ್ರಬಲವಾಗಿದ್ದು, ಉತ್ತರದಾಯಿತ್ವ ಹೊಂದಿದಾಗ ಮಾತ್ರ ಜನರ ನಿರೀಕ್ಷೆಗೆ ತಕ್ಕಂತೆ ಕಾರ್ಯನಿರ್ವಹಿಸಬಹುದು. ಮುಂಬರುವ ಚುನಾವಣೆಗಳಲ್ಲಿ ಗೆದ್ದು, ಜನರ ಹಾಗೂ ದೇಶದ ಸೇವೆ ಮಾಡಲು ಸಾಧ್ಯವಾಗುತ್ತದೆ’ ಎಂದು ಹೇಳಿದರು.</p>.<p>‘ಜನಪರ ವಿಷಯಗಳನ್ನು ಮುಂದಿಟ್ಟುಕೊಂಡು 30 ರಿಂದ 90 ದಿನಗಳ ಕಾಲ ಹೋರಾಟ ನಡೆಸಬೇಕು. ಈ ಸಂಬಂಧ ರೂಪುರೇಷೆಗಳನ್ನು ಸಿದ್ಧಪಡಿಸಬೇಕು’ ಎಂದು ಅವರು ರಾಜ್ಯಗಳ ಉಸ್ತುವಾರಿಗಳಿಗೆ ಸೂಚಿಸಿದರು.</p>.<p>2024ರ ಲೋಕಸಭಾ ಚುನಾವಣೆಗೆ ಸಂಬಂಧಿಸಿ ನೀಲನಕ್ಷೆಯನ್ನು ಸಿದ್ಧಪಡಿಸುವಂತೆಯೂ ಖರ್ಗೆ ಅವರು ಪಕ್ಷದ ಪ್ರಧಾನ ಕಾರ್ಯದರ್ಶಿಗಳಿಗೆ ಹಾಗೂ ರಾಜ್ಯ ಉಸ್ತುವಾರಿಗಳಿಗೆ ಸೂಚಿಸಿದರು.</p>.<p>ಎಐಸಿಸಿ ಆದೇಶದಂತೆ ಬ್ಲಾಕ್, ಜಿಲ್ಲೆ ಹಾಗೂ ರಾಜ್ಯ ಮಟ್ಟದಲ್ಲಿ ಎಷ್ಟು ಬಾರಿ ಹೋರಾಟಗಳನ್ನು ಮಾಡಲಾಗಿದೆ?, ಮುಂದಿನ ವರ್ಷ ಹಾಗೂ 2024ರಲ್ಲಿ ವಿಧಾನಸಭೆಗಳಿಗೆ ಚುನಾವಣೆ ನಡೆಯಲಿರುವ ರಾಜ್ಯಗಳಲ್ಲಿ ಸಂಬಂಧಪಟ್ಟ ಘಟಕಗಳು ಮಾಡಿಕೊಂಡಿರುವ ಸಿದ್ಧತೆಗಳೇನು’ ಎಂದು ಅವರು ಪ್ರಶ್ನಿಸಿದರು.</p>.<p>‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಜನರ ಹಕ್ಕುಗಳನ್ನು ದಮನ ಮಾಡುತ್ತಿದೆ. ಅವುಗಳ ರಕ್ಷಣೆಗಾಗಿ ಹೋರಾಟ ನಡೆಸುವುದು ಕಾಂಗ್ರೆಸ್ನ ಜವಾಬ್ದಾರಿ’ ಎಂದೂ ಖರ್ಗೆ ಹೇಳಿದರು.</p>.<p>ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಹಿರಿಯ ನಾಯಕರು ಪಾಲ್ಗೊಂಡಿದ್ದರು.</p>.<p class="Briefhead"><strong>ಫೆಬ್ರುವರಿಯಲ್ಲಿ ಸರ್ವ ಸದಸ್ಯರ ಸಭೆ</strong></p>.<p>ಛತ್ತೀಸಗಡ ರಾಜಧಾನಿ ರಾಯಪುರದಲ್ಲಿ ಫೆಬ್ರುವರಿ ಎರಡನೇ ವಾರದಲ್ಲಿ ಮೂರು ದಿನಗಳ ಕಾಲ ಕಾಂಗ್ರೆಸ್ನ 85ನೇ ಸರ್ವಸದಸ್ಯರ ಸಭೆಯನ್ನು ಆಯೋಜಿಸಲು ಚಾಲನಾ ಸಮಿತಿ ಸಭೆಯಲ್ಲಿ ನಿರ್ಧರಿಸಲಾಯಿತು.</p>.<p>ಸಭೆ ಬಳಿಕ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ‘ಈ ಮೂರು ದಿನಗಳ ಸರ್ವಸದಸ್ಯರ ಸಭೆಯಲ್ಲಿ ಹಲವಾರು ವಿಷಯಗಳ ಬಗ್ಗೆ ಚರ್ಚೆ ನಡೆಸಲಾಗುವುದು. ನಂತರ ಬೃಹತ್ ಸಾರ್ವಜನಿಕ ಸಭೆಯನ್ನು ಸಹ ಆಯೋಜಿಸಲಾಗುವುದು’ ಎಂದರು.</p>.<p>‘ಭಾರತ್ ಜೋಡೊ ಯಾತ್ರೆಯ ಮುಂದುವರಿದ ಭಾಗವಾಗಿ ಜನವರಿ 26ರಿಂದ ಎರಡು ತಿಂಗಳ ಕಾಲ ‘ಹಾಥ್ ಸೆ ಹಾಥ್ ಜೋಡೊ ಅಭಿಯಾನ್’ ನಡೆಸಲು ಸಹ ತೀರ್ಮಾನಿಸಲಾಯಿತು. ಭಾರತ್ ಜೋಡೊ ಯಾತ್ರೆಯ ಪರಾಮರ್ಶೆಯೂ ಸಭೆಯಲ್ಲಿ ನಡೆಯಿತು’ ಎಂದು ತಿಳಿಸಿದರು.</p>.<p>‘ಕನ್ಯಾಕುಮಾರಿಯಿಂದ ಆರಂಭವಾಗಿರುವ ಯಾತ್ರೆಯನ್ನು ಜನವರಿ 26ರಂದು ಶ್ರೀನಗರದಲ್ಲಿ ಮುಕ್ತಾಯಗೊಳಿಸುವ ಗುರಿ ಹೊಂದಲಾಗಿದೆ. ಯಾತ್ರೆಯು ಡಿ. 24ರಂದು ದೆಹಲಿ ಪ್ರವೇಶಿಸಲಿದೆ’ ಎಂದು ಪಕ್ಷದ ಸಂವಹನ ವಿಭಾಗದ ಮುಖ್ಯಸ್ಥ ಜೈರಾಮ್ ರಮೇಶ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಪಕ್ಷ ಸಂಘಟನೆ ಬಲಪಡಿಸುವ ಸಲುವಾಗಿ ಕೆಳಹಂತದಿಂದ ಹಿಡಿದು ಉನ್ನತ ಮಟ್ಟದವರೆಗೆ ಉತ್ತರಾಯಿತ್ವ ಅಗತ್ಯ’ ಎಂದು ಪ್ರತಿಪಾದಿಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ‘ವಹಿಸಿದ ಜವಾಬ್ದಾರಿಯನ್ನು ನಿರ್ವವಹಿಸಲು ವಿಫಲರಾದವರು ಹುದ್ದೆ ತೊರೆಯಿರಿ. ಬೇರೆಯವರಿಗೆ ಜವಾಬ್ದಾರಿಯನ್ನು ವಹಿಸಲಾಗುವುದು’ ಎಂದು ಹೇಳಿದರು.</p>.<p>ಪಕ್ಷದ ಅಧ್ಯಕ್ಷರಾದ ನಂತರ ಭಾನುವಾರ ಇಲ್ಲಿ ನಡೆದ ಕಾಂಗ್ರೆಸ್ ಚಾಲನಾ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಪಕ್ಷ ಸಂಘಟನೆ ಮಾಡಿದರೂ ಬಂತು, ಮಾಡದಿದ್ದರೂ ಬಂತು. ವರಿಷ್ಠರು ಇದನ್ನೆಲ್ಲಾ ಗಮನಿಸುವುದಿಲ್ಲ ಎಂಬ ಮನೋಭಾವ ಕೆಲವರಲ್ಲಿದೆ. ಇಂಥ ಧೋರಣೆ ಸರಿ ಅಲ್ಲ ಹಾಗೂ ಒಪ್ಪತಕ್ಕದ್ದೂ ಅಲ್ಲ’ ಎಂದು ಕಟುವಾಗಿ ಹೇಳಿದರು.</p>.<p>‘ಕಾಂಗ್ರೆಸ್ ಪಕ್ಷದ ಸಂಘಟನೆ ಪ್ರಬಲವಾಗಿದ್ದು, ಉತ್ತರದಾಯಿತ್ವ ಹೊಂದಿದಾಗ ಮಾತ್ರ ಜನರ ನಿರೀಕ್ಷೆಗೆ ತಕ್ಕಂತೆ ಕಾರ್ಯನಿರ್ವಹಿಸಬಹುದು. ಮುಂಬರುವ ಚುನಾವಣೆಗಳಲ್ಲಿ ಗೆದ್ದು, ಜನರ ಹಾಗೂ ದೇಶದ ಸೇವೆ ಮಾಡಲು ಸಾಧ್ಯವಾಗುತ್ತದೆ’ ಎಂದು ಹೇಳಿದರು.</p>.<p>‘ಜನಪರ ವಿಷಯಗಳನ್ನು ಮುಂದಿಟ್ಟುಕೊಂಡು 30 ರಿಂದ 90 ದಿನಗಳ ಕಾಲ ಹೋರಾಟ ನಡೆಸಬೇಕು. ಈ ಸಂಬಂಧ ರೂಪುರೇಷೆಗಳನ್ನು ಸಿದ್ಧಪಡಿಸಬೇಕು’ ಎಂದು ಅವರು ರಾಜ್ಯಗಳ ಉಸ್ತುವಾರಿಗಳಿಗೆ ಸೂಚಿಸಿದರು.</p>.<p>2024ರ ಲೋಕಸಭಾ ಚುನಾವಣೆಗೆ ಸಂಬಂಧಿಸಿ ನೀಲನಕ್ಷೆಯನ್ನು ಸಿದ್ಧಪಡಿಸುವಂತೆಯೂ ಖರ್ಗೆ ಅವರು ಪಕ್ಷದ ಪ್ರಧಾನ ಕಾರ್ಯದರ್ಶಿಗಳಿಗೆ ಹಾಗೂ ರಾಜ್ಯ ಉಸ್ತುವಾರಿಗಳಿಗೆ ಸೂಚಿಸಿದರು.</p>.<p>ಎಐಸಿಸಿ ಆದೇಶದಂತೆ ಬ್ಲಾಕ್, ಜಿಲ್ಲೆ ಹಾಗೂ ರಾಜ್ಯ ಮಟ್ಟದಲ್ಲಿ ಎಷ್ಟು ಬಾರಿ ಹೋರಾಟಗಳನ್ನು ಮಾಡಲಾಗಿದೆ?, ಮುಂದಿನ ವರ್ಷ ಹಾಗೂ 2024ರಲ್ಲಿ ವಿಧಾನಸಭೆಗಳಿಗೆ ಚುನಾವಣೆ ನಡೆಯಲಿರುವ ರಾಜ್ಯಗಳಲ್ಲಿ ಸಂಬಂಧಪಟ್ಟ ಘಟಕಗಳು ಮಾಡಿಕೊಂಡಿರುವ ಸಿದ್ಧತೆಗಳೇನು’ ಎಂದು ಅವರು ಪ್ರಶ್ನಿಸಿದರು.</p>.<p>‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಜನರ ಹಕ್ಕುಗಳನ್ನು ದಮನ ಮಾಡುತ್ತಿದೆ. ಅವುಗಳ ರಕ್ಷಣೆಗಾಗಿ ಹೋರಾಟ ನಡೆಸುವುದು ಕಾಂಗ್ರೆಸ್ನ ಜವಾಬ್ದಾರಿ’ ಎಂದೂ ಖರ್ಗೆ ಹೇಳಿದರು.</p>.<p>ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಹಿರಿಯ ನಾಯಕರು ಪಾಲ್ಗೊಂಡಿದ್ದರು.</p>.<p class="Briefhead"><strong>ಫೆಬ್ರುವರಿಯಲ್ಲಿ ಸರ್ವ ಸದಸ್ಯರ ಸಭೆ</strong></p>.<p>ಛತ್ತೀಸಗಡ ರಾಜಧಾನಿ ರಾಯಪುರದಲ್ಲಿ ಫೆಬ್ರುವರಿ ಎರಡನೇ ವಾರದಲ್ಲಿ ಮೂರು ದಿನಗಳ ಕಾಲ ಕಾಂಗ್ರೆಸ್ನ 85ನೇ ಸರ್ವಸದಸ್ಯರ ಸಭೆಯನ್ನು ಆಯೋಜಿಸಲು ಚಾಲನಾ ಸಮಿತಿ ಸಭೆಯಲ್ಲಿ ನಿರ್ಧರಿಸಲಾಯಿತು.</p>.<p>ಸಭೆ ಬಳಿಕ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ‘ಈ ಮೂರು ದಿನಗಳ ಸರ್ವಸದಸ್ಯರ ಸಭೆಯಲ್ಲಿ ಹಲವಾರು ವಿಷಯಗಳ ಬಗ್ಗೆ ಚರ್ಚೆ ನಡೆಸಲಾಗುವುದು. ನಂತರ ಬೃಹತ್ ಸಾರ್ವಜನಿಕ ಸಭೆಯನ್ನು ಸಹ ಆಯೋಜಿಸಲಾಗುವುದು’ ಎಂದರು.</p>.<p>‘ಭಾರತ್ ಜೋಡೊ ಯಾತ್ರೆಯ ಮುಂದುವರಿದ ಭಾಗವಾಗಿ ಜನವರಿ 26ರಿಂದ ಎರಡು ತಿಂಗಳ ಕಾಲ ‘ಹಾಥ್ ಸೆ ಹಾಥ್ ಜೋಡೊ ಅಭಿಯಾನ್’ ನಡೆಸಲು ಸಹ ತೀರ್ಮಾನಿಸಲಾಯಿತು. ಭಾರತ್ ಜೋಡೊ ಯಾತ್ರೆಯ ಪರಾಮರ್ಶೆಯೂ ಸಭೆಯಲ್ಲಿ ನಡೆಯಿತು’ ಎಂದು ತಿಳಿಸಿದರು.</p>.<p>‘ಕನ್ಯಾಕುಮಾರಿಯಿಂದ ಆರಂಭವಾಗಿರುವ ಯಾತ್ರೆಯನ್ನು ಜನವರಿ 26ರಂದು ಶ್ರೀನಗರದಲ್ಲಿ ಮುಕ್ತಾಯಗೊಳಿಸುವ ಗುರಿ ಹೊಂದಲಾಗಿದೆ. ಯಾತ್ರೆಯು ಡಿ. 24ರಂದು ದೆಹಲಿ ಪ್ರವೇಶಿಸಲಿದೆ’ ಎಂದು ಪಕ್ಷದ ಸಂವಹನ ವಿಭಾಗದ ಮುಖ್ಯಸ್ಥ ಜೈರಾಮ್ ರಮೇಶ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>