<p><strong>ನವದೆಹಲಿ</strong>: ಭವಿಷ್ಯದಲ್ಲಿ ಚುನಾವಣಾ ಫಲಿತಾಂಶಗಳಿಗೆ ಪಕ್ಷದ ಉನ್ನತ ನಾಯಕರನ್ನು ಹೊಣೆಗಾರರನ್ನಾಗಿಸಲಾಗುತ್ತದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಚ್ಚರಿಕೆ ನೀಡಿದ್ದಾರೆ.</p><p>ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಕಳಪೆ ಸಾಧನೆ ಪ್ರಸ್ತಾಪಿಸಿರುವ ಅವರು, ಪಕ್ಷಾಂತರ ಮಾಡಿ, ಕಾಂಗ್ರೆಸ್ಗೆ ಸೇರ್ಪಡೆಯಾಗಿರುವವರ ಬಗ್ಗೆಯೂ ಎಚ್ಚರಿಕೆಯಿಂದ ಇರಬೇಕು ಎಂದೂ ಸೂಚಿಸಿದ್ದಾರೆ.</p> <p>ಪಕ್ಷದ ಕೇಂದ್ರ ಕಚೇರಿ ಇಂದಿರಾ ಭವನದಲ್ಲಿ ಹೊಸ ಪದಾಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಪಕ್ಷವನ್ನು ಮೂಲದಿಂದ ಕಟ್ಟಲು ಮತ್ತು ಬೂತ್ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸಲು ಕೆಲಸ ಮಾಡುವಂತೆ ಪಕ್ಷದ ನಾಯಕರಿಗೆ ಒತ್ತಾಯಿಸಿದರು. ಸೈದ್ಧಾಂತಿಕವಾಗಿ ಪಕ್ಷಕ್ಕೆ ಬದ್ಧವಾಗಿರುವಂತಹವರನ್ನು ಉತ್ತೇಜಿಸಿ ಎಂದರು.</p><p>ಪಕ್ಷದ ಸಂಘಟನೆಯಲ್ಲಿ ಕೆಲವೊಂದು ಬದಲಾವಣೆ ಮಾಡಲಾಗಿದ್ದು, ಇನ್ನಷ್ಟು ಬದಲಾವಣೆಗಳನ್ನು ತರಲಾಗುವುದು ಎಂದು ಹೇಳಿದರು.</p><p>'ಚುನಾವಣಾ ಫಲಿತಾಂಶಗಳ ಜವಾಬ್ದಾರಿಯ ಕುರಿತಾದ ಪ್ರಮುಖ ವಿಷಯದ ಬಗ್ಗೆ ನಾನು ನಿಮ್ಮೊಂದಿಗೆ ಮಾತನಾಡಲು ಬಯಸುತ್ತೇನೆ. ರಾಜ್ಯಗಳಲ್ಲಿನ ಸಂಘಟನೆಗೆ ಪುನಶ್ಚೇತನ ನೀಡಲು ಮುಂದಿನ ಎಲ್ಲ ಚುನಾವಣಾ ಫಲಿತಾಂಶಗಳಿಗೆ ನಿಮ್ಮೆಲ್ಲರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು’ ಎಂದು ಪದಾಧಿಕಾರಿಗಳಿಗೆ ಹೇಳಿದರು.</p><p>ಪಕ್ಷವು ಸಂಘಟನೆಯಲ್ಲಿ ಇತ್ತೀಚೆಗೆ ಮಾಡಿದ ಕೆಲ ಬದಲಾವಣೆಗಳಲ್ಲಿ ಹೊಸ ಪದಾಧಿಕಾರಿಗಳನ್ನು ಕರೆತಂದಿದೆ ಎಂದರು.</p><p>ಸಭೆಯಲ್ಲಿ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಎಲ್ಲ ಪ್ರಧಾನ ಕಾರ್ಯದರ್ಶಿಗಳು ಮತ್ತು ವಿವಿಧ ರಾಜ್ಯಗಳ ಉಸ್ತುವಾರಿಗಳು ಇದ್ದರು.</p><p>ಬೂತ್ನಿಂದ ಕೇಂದ್ರ ಕಚೇರಿವರೆಗೆ ತಳಮಟ್ಟದಲ್ಲಿ ಸಂಘಟನೆಯನ್ನು ಬಲಪಡಿಸುವ ಜವಾಬ್ದಾರಿ ನಿಮ್ಮ ಮೇಲಿದೆ. ಕಷ್ಟಕಾಲದಲ್ಲಿ ಪಕ್ಷದ ಬೆನ್ನಿಗೆ ಬಂಡೆಯಂತೆ ನಿಲ್ಲುವ ಸೈದ್ಧಾಂತಿಕ ಬದ್ಧತೆ ಇರುವವರನ್ನು ಕರೆತರಬೇಕು ಎಂದು ಖರ್ಗೆ ಹೇಳಿದರು.</p><p>‘ಕೆಲವೊಮ್ಮೆ ಸಂಘಟನೆಯನ್ನು ಬಲಪಡಿಸಲು ಪ್ರಯತ್ನಿಸುವಾಗ, ತರಾತುರಿಯಲ್ಲಿ ಕೆಲವರನ್ನು ಕರೆತಂದಾಗ ಕಷ್ಟದ ಸಮಯದಲ್ಲಿ ಅವರು ಓಡಿಹೋಗುತ್ತಾರೆ. ಅಂತಹವರಿಂದ ನಾವು ದೂರವಿರಬೇಕು,’ ಎಂದು ಪಕ್ಷದ ಮುಖಂಡರಿಗೆ ತಿಳಿಹೇಳಿದರು.</p><p><strong>ಖರ್ಗೆ ಮಾತಿನ ಪ್ರಮುಖಾಂಶಗಳು</strong></p><p> * ದೆಹಲಿ ಮತದಾರರು ಬದಲಾವಣೆಗಾಗಿ ಮತ ಚಲಾಯಿಸಿದ್ದಾರೆ. ಸೀಮಿತ ಸಂಪನ್ಮೂಲಗಳ ಹೊರತಾಗಿಯೂ ಪಕ್ಷವು ಉತ್ತಮ ಸಾಧನೆ ಮಾಡಿದೆ. ಪಕ್ಷದ ರಾಜ್ಯ ಘಟಕದ ನಾಯಕತ್ವದ ಪ್ರಯತ್ನ ಶ್ಲಾಘನೀಯ </p><p>* ಮುಂದಿನ ಐದು ವರ್ಷ ದೆಹಲಿಯ ಜನರ ಹಿತಾಸಕ್ತಿ ಒಳಗೊಂಡ ವಿಚಾರಗಳನ್ನು ಮುಂದಿಟ್ಟುಕೊಂಡು ಪಕ್ಷದ ನಾಯಕರು ಹೋರಾಟ ನಡೆಸುವ ಮೂಲಕ ಪಕ್ಷವು ಪ್ರಮುಖ ವಿರೋಧ ಪಕ್ಷವಾಗಿ ಹೊರಹೊಮ್ಮುವಂತೆ ಮಾಡಲು ಶ್ರಮಿಸಬೇಕು. </p><p> * ನಾಯಕರು ಬೂತ್ಗಳಿಗೆ ತೆರಳಿ ಕಾರ್ಯಕರ್ತರೊಂದಿಗೆ ಸಂವಾದ ನಡೆಸಬೇಕು. ಪಕ್ಷದ ವಿವಿಧ ಘಟಕಗಳನ್ನು ತೊಡಗಿಸಿಕೊಳ್ಳಬೇಕು. ವಿಶೇಷವಾಗಿ ಪಕ್ಷ ಸಂಘಟನೆಯಲ್ಲಿ ಇಂಟಕ್ ಅನ್ನು ತೊಡಗಿಸಿಕೊಳ್ಳಬೇಕು </p><p>* ‘ಸಂವಿಧಾನ ಉಳಿಸಿ ಅಭಿಯಾಣ’ ಮುಂದಿನ ವರ್ಷದ ವರೆಗೆ ಮುಂದುವರಿಯಲಿದೆ. ಈ ಅಭಿಯಾನದ ಭಾಗವಾಗಿ ಪಾದಯಾತ್ರೆ ಸಂವಾದ ಬೀದಿ ಬದಿ ಸಭೆಗಳನ್ನು ನಡೆಸಬೇಕು. ಇಂತಹ ಪ್ರತಿ ಕಾರ್ಯಕ್ರಮದ ಗುರಿ ಸಂಘಟನೆ ಬಲಪಡಿಸುವುದೇ ಆಗಿರಬೇಕು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಭವಿಷ್ಯದಲ್ಲಿ ಚುನಾವಣಾ ಫಲಿತಾಂಶಗಳಿಗೆ ಪಕ್ಷದ ಉನ್ನತ ನಾಯಕರನ್ನು ಹೊಣೆಗಾರರನ್ನಾಗಿಸಲಾಗುತ್ತದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಚ್ಚರಿಕೆ ನೀಡಿದ್ದಾರೆ.</p><p>ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಕಳಪೆ ಸಾಧನೆ ಪ್ರಸ್ತಾಪಿಸಿರುವ ಅವರು, ಪಕ್ಷಾಂತರ ಮಾಡಿ, ಕಾಂಗ್ರೆಸ್ಗೆ ಸೇರ್ಪಡೆಯಾಗಿರುವವರ ಬಗ್ಗೆಯೂ ಎಚ್ಚರಿಕೆಯಿಂದ ಇರಬೇಕು ಎಂದೂ ಸೂಚಿಸಿದ್ದಾರೆ.</p> <p>ಪಕ್ಷದ ಕೇಂದ್ರ ಕಚೇರಿ ಇಂದಿರಾ ಭವನದಲ್ಲಿ ಹೊಸ ಪದಾಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಪಕ್ಷವನ್ನು ಮೂಲದಿಂದ ಕಟ್ಟಲು ಮತ್ತು ಬೂತ್ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸಲು ಕೆಲಸ ಮಾಡುವಂತೆ ಪಕ್ಷದ ನಾಯಕರಿಗೆ ಒತ್ತಾಯಿಸಿದರು. ಸೈದ್ಧಾಂತಿಕವಾಗಿ ಪಕ್ಷಕ್ಕೆ ಬದ್ಧವಾಗಿರುವಂತಹವರನ್ನು ಉತ್ತೇಜಿಸಿ ಎಂದರು.</p><p>ಪಕ್ಷದ ಸಂಘಟನೆಯಲ್ಲಿ ಕೆಲವೊಂದು ಬದಲಾವಣೆ ಮಾಡಲಾಗಿದ್ದು, ಇನ್ನಷ್ಟು ಬದಲಾವಣೆಗಳನ್ನು ತರಲಾಗುವುದು ಎಂದು ಹೇಳಿದರು.</p><p>'ಚುನಾವಣಾ ಫಲಿತಾಂಶಗಳ ಜವಾಬ್ದಾರಿಯ ಕುರಿತಾದ ಪ್ರಮುಖ ವಿಷಯದ ಬಗ್ಗೆ ನಾನು ನಿಮ್ಮೊಂದಿಗೆ ಮಾತನಾಡಲು ಬಯಸುತ್ತೇನೆ. ರಾಜ್ಯಗಳಲ್ಲಿನ ಸಂಘಟನೆಗೆ ಪುನಶ್ಚೇತನ ನೀಡಲು ಮುಂದಿನ ಎಲ್ಲ ಚುನಾವಣಾ ಫಲಿತಾಂಶಗಳಿಗೆ ನಿಮ್ಮೆಲ್ಲರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು’ ಎಂದು ಪದಾಧಿಕಾರಿಗಳಿಗೆ ಹೇಳಿದರು.</p><p>ಪಕ್ಷವು ಸಂಘಟನೆಯಲ್ಲಿ ಇತ್ತೀಚೆಗೆ ಮಾಡಿದ ಕೆಲ ಬದಲಾವಣೆಗಳಲ್ಲಿ ಹೊಸ ಪದಾಧಿಕಾರಿಗಳನ್ನು ಕರೆತಂದಿದೆ ಎಂದರು.</p><p>ಸಭೆಯಲ್ಲಿ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಎಲ್ಲ ಪ್ರಧಾನ ಕಾರ್ಯದರ್ಶಿಗಳು ಮತ್ತು ವಿವಿಧ ರಾಜ್ಯಗಳ ಉಸ್ತುವಾರಿಗಳು ಇದ್ದರು.</p><p>ಬೂತ್ನಿಂದ ಕೇಂದ್ರ ಕಚೇರಿವರೆಗೆ ತಳಮಟ್ಟದಲ್ಲಿ ಸಂಘಟನೆಯನ್ನು ಬಲಪಡಿಸುವ ಜವಾಬ್ದಾರಿ ನಿಮ್ಮ ಮೇಲಿದೆ. ಕಷ್ಟಕಾಲದಲ್ಲಿ ಪಕ್ಷದ ಬೆನ್ನಿಗೆ ಬಂಡೆಯಂತೆ ನಿಲ್ಲುವ ಸೈದ್ಧಾಂತಿಕ ಬದ್ಧತೆ ಇರುವವರನ್ನು ಕರೆತರಬೇಕು ಎಂದು ಖರ್ಗೆ ಹೇಳಿದರು.</p><p>‘ಕೆಲವೊಮ್ಮೆ ಸಂಘಟನೆಯನ್ನು ಬಲಪಡಿಸಲು ಪ್ರಯತ್ನಿಸುವಾಗ, ತರಾತುರಿಯಲ್ಲಿ ಕೆಲವರನ್ನು ಕರೆತಂದಾಗ ಕಷ್ಟದ ಸಮಯದಲ್ಲಿ ಅವರು ಓಡಿಹೋಗುತ್ತಾರೆ. ಅಂತಹವರಿಂದ ನಾವು ದೂರವಿರಬೇಕು,’ ಎಂದು ಪಕ್ಷದ ಮುಖಂಡರಿಗೆ ತಿಳಿಹೇಳಿದರು.</p><p><strong>ಖರ್ಗೆ ಮಾತಿನ ಪ್ರಮುಖಾಂಶಗಳು</strong></p><p> * ದೆಹಲಿ ಮತದಾರರು ಬದಲಾವಣೆಗಾಗಿ ಮತ ಚಲಾಯಿಸಿದ್ದಾರೆ. ಸೀಮಿತ ಸಂಪನ್ಮೂಲಗಳ ಹೊರತಾಗಿಯೂ ಪಕ್ಷವು ಉತ್ತಮ ಸಾಧನೆ ಮಾಡಿದೆ. ಪಕ್ಷದ ರಾಜ್ಯ ಘಟಕದ ನಾಯಕತ್ವದ ಪ್ರಯತ್ನ ಶ್ಲಾಘನೀಯ </p><p>* ಮುಂದಿನ ಐದು ವರ್ಷ ದೆಹಲಿಯ ಜನರ ಹಿತಾಸಕ್ತಿ ಒಳಗೊಂಡ ವಿಚಾರಗಳನ್ನು ಮುಂದಿಟ್ಟುಕೊಂಡು ಪಕ್ಷದ ನಾಯಕರು ಹೋರಾಟ ನಡೆಸುವ ಮೂಲಕ ಪಕ್ಷವು ಪ್ರಮುಖ ವಿರೋಧ ಪಕ್ಷವಾಗಿ ಹೊರಹೊಮ್ಮುವಂತೆ ಮಾಡಲು ಶ್ರಮಿಸಬೇಕು. </p><p> * ನಾಯಕರು ಬೂತ್ಗಳಿಗೆ ತೆರಳಿ ಕಾರ್ಯಕರ್ತರೊಂದಿಗೆ ಸಂವಾದ ನಡೆಸಬೇಕು. ಪಕ್ಷದ ವಿವಿಧ ಘಟಕಗಳನ್ನು ತೊಡಗಿಸಿಕೊಳ್ಳಬೇಕು. ವಿಶೇಷವಾಗಿ ಪಕ್ಷ ಸಂಘಟನೆಯಲ್ಲಿ ಇಂಟಕ್ ಅನ್ನು ತೊಡಗಿಸಿಕೊಳ್ಳಬೇಕು </p><p>* ‘ಸಂವಿಧಾನ ಉಳಿಸಿ ಅಭಿಯಾಣ’ ಮುಂದಿನ ವರ್ಷದ ವರೆಗೆ ಮುಂದುವರಿಯಲಿದೆ. ಈ ಅಭಿಯಾನದ ಭಾಗವಾಗಿ ಪಾದಯಾತ್ರೆ ಸಂವಾದ ಬೀದಿ ಬದಿ ಸಭೆಗಳನ್ನು ನಡೆಸಬೇಕು. ಇಂತಹ ಪ್ರತಿ ಕಾರ್ಯಕ್ರಮದ ಗುರಿ ಸಂಘಟನೆ ಬಲಪಡಿಸುವುದೇ ಆಗಿರಬೇಕು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>