<p class="title"><strong>ನವದೆಹಲಿ</strong>: ಲೋಕಪಾಲ್ ಆಯ್ಕೆ ಸಮಿತಿ ಸಭೆ ಬಹಿಷ್ಕರಿಸಿರುವುದಾಗಿ ಲೋಕಸಭೆಯಲ್ಲಿನ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.</p>.<p class="title">‘ಲೋಕಪಾಲ್ ಕಾಯ್ದೆ 2013ರಲ್ಲಿ ಲೋಕಸಭೆಯಲ್ಲಿನ ಅತಿ ದೊಡ್ಡ ವಿರೋಧ ಪಕ್ಷದ ನಾಯಕನಿಗೆ ಲೋಕಪಾಲ್ ಆಯ್ಕೆ ಸಮಿತಿಯಲ್ಲಿ ಪೂರ್ಣ ಪ್ರಮಾಣದ ಸದಸ್ಯತ್ವದ ಸ್ಥಾನಮಾನ ನೀಡಬೇಕೆನ್ನುವುದು ಇದೆ. ಈ ಸ್ಥಾನಮಾನ ನೀಡುವವರೆಗೂ ಆಯ್ಕೆ ಸಮಿತಿ ಸಭೆಯಲ್ಲಿ ಭಾಗವಹಿಸುವುದಿಲ್ಲ ಎನ್ನುವುದನ್ನು ನಾನು ಮತ್ತೊಮ್ಮೆ ನಿಮಗೆ ಗೌರವಯುತವಾಗಿ ತಿಳಿಸುತ್ತಿದ್ದೇನೆ’ ಎಂದು ಪತ್ರದಲ್ಲಿ ಸ್ಪಷ್ಟಪಡಿಸಿದ್ದಾರೆ.</p>.<p>ಸಭೆಗೆ ‘ವಿಶೇಷ ಆಹ್ವಾನಿತರು’ ಎಂದು ಆಹ್ವಾನ ನೀಡಿರುವುದಕ್ಕೆ ಮಲ್ಲಿಕಾರ್ಜುನ ಖರ್ಗೆ ಪತ್ರದಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕಾಯ್ದೆಯ ಸೆಕ್ಷನ್ 4ರಲ್ಲಿ ಇದಕ್ಕೆ ಅಂತಹ ಯಾವುದೇ ನಿಬಂಧನೆಗಳು ಇಲ್ಲ ಸರ್ಕಾರಕ್ಕೂ ಚೆನ್ನಾಗಿ ಗೊತ್ತಿರಬೇಕಲ್ಲ ಎಂದು ಎನ್ಡಿಎ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>‘ನಿಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಇಲ್ಲಿಗೆ ನಾಲ್ಕು ವರ್ಷಗಳಾಗಿವೆ. ಈ ನೇಮಕ ಪ್ರಕ್ರಿಯೆಯಲ್ಲಿ ವಿರೋಧ ಪಕ್ಷಗಳ ಧ್ವನಿಯನ್ನು ಪರಿಗಣಿಸಬೇಕೆನ್ನುವುದು ಸರ್ಕಾರಕ್ಕೂ ಪ್ರಾಮಾಣಿಕವಾಗಿ ಅನಿಸಿದ್ದರೆ, ಇದಕ್ಕಾಗಿ ಈಗಾಗಲೇ ಅಗತ್ಯ ತಿದ್ದುಪಡಿ ತರಬೇಕಿತ್ತು’ ಎಂದು ಪತ್ರದಲ್ಲಿ ತಿಳಿಸಿದ್ದಾರೆ.</p>.<p>ಇದೇ ವಿಷಯ ಮುಂದಿಟ್ಟುಕೊಂಡು ಖರ್ಗೆಯವರು ಈ ಹಿಂದೆಯೂ ಲೋಕಪಾಲ್ ಆಯ್ಕೆ ಸಮಿತಿ ಸಭೆ ಬಹಿಷ್ಕರಿಸಿದ್ದರು. ಈ ಹಿಂದೆ ಬರೆದಿದ್ದ ಪತ್ರಗಳ ವಿಚಾರಗಳ ಬಗ್ಗೆಯೂ ಅವರು ಪ್ರಧಾನಿಗೆ ನೆನಪು ಮಾಡಿಕೊಟ್ಟಿದ್ದಾರೆ. ಲೋಕಪಾಲ್ ಆಯ್ಕೆ ಸಮಿತಿ ಸಭೆ ಗುರುವಾರ ಸಂಜೆಗೆ ನಿಗದಿಯಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ</strong>: ಲೋಕಪಾಲ್ ಆಯ್ಕೆ ಸಮಿತಿ ಸಭೆ ಬಹಿಷ್ಕರಿಸಿರುವುದಾಗಿ ಲೋಕಸಭೆಯಲ್ಲಿನ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.</p>.<p class="title">‘ಲೋಕಪಾಲ್ ಕಾಯ್ದೆ 2013ರಲ್ಲಿ ಲೋಕಸಭೆಯಲ್ಲಿನ ಅತಿ ದೊಡ್ಡ ವಿರೋಧ ಪಕ್ಷದ ನಾಯಕನಿಗೆ ಲೋಕಪಾಲ್ ಆಯ್ಕೆ ಸಮಿತಿಯಲ್ಲಿ ಪೂರ್ಣ ಪ್ರಮಾಣದ ಸದಸ್ಯತ್ವದ ಸ್ಥಾನಮಾನ ನೀಡಬೇಕೆನ್ನುವುದು ಇದೆ. ಈ ಸ್ಥಾನಮಾನ ನೀಡುವವರೆಗೂ ಆಯ್ಕೆ ಸಮಿತಿ ಸಭೆಯಲ್ಲಿ ಭಾಗವಹಿಸುವುದಿಲ್ಲ ಎನ್ನುವುದನ್ನು ನಾನು ಮತ್ತೊಮ್ಮೆ ನಿಮಗೆ ಗೌರವಯುತವಾಗಿ ತಿಳಿಸುತ್ತಿದ್ದೇನೆ’ ಎಂದು ಪತ್ರದಲ್ಲಿ ಸ್ಪಷ್ಟಪಡಿಸಿದ್ದಾರೆ.</p>.<p>ಸಭೆಗೆ ‘ವಿಶೇಷ ಆಹ್ವಾನಿತರು’ ಎಂದು ಆಹ್ವಾನ ನೀಡಿರುವುದಕ್ಕೆ ಮಲ್ಲಿಕಾರ್ಜುನ ಖರ್ಗೆ ಪತ್ರದಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕಾಯ್ದೆಯ ಸೆಕ್ಷನ್ 4ರಲ್ಲಿ ಇದಕ್ಕೆ ಅಂತಹ ಯಾವುದೇ ನಿಬಂಧನೆಗಳು ಇಲ್ಲ ಸರ್ಕಾರಕ್ಕೂ ಚೆನ್ನಾಗಿ ಗೊತ್ತಿರಬೇಕಲ್ಲ ಎಂದು ಎನ್ಡಿಎ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>‘ನಿಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಇಲ್ಲಿಗೆ ನಾಲ್ಕು ವರ್ಷಗಳಾಗಿವೆ. ಈ ನೇಮಕ ಪ್ರಕ್ರಿಯೆಯಲ್ಲಿ ವಿರೋಧ ಪಕ್ಷಗಳ ಧ್ವನಿಯನ್ನು ಪರಿಗಣಿಸಬೇಕೆನ್ನುವುದು ಸರ್ಕಾರಕ್ಕೂ ಪ್ರಾಮಾಣಿಕವಾಗಿ ಅನಿಸಿದ್ದರೆ, ಇದಕ್ಕಾಗಿ ಈಗಾಗಲೇ ಅಗತ್ಯ ತಿದ್ದುಪಡಿ ತರಬೇಕಿತ್ತು’ ಎಂದು ಪತ್ರದಲ್ಲಿ ತಿಳಿಸಿದ್ದಾರೆ.</p>.<p>ಇದೇ ವಿಷಯ ಮುಂದಿಟ್ಟುಕೊಂಡು ಖರ್ಗೆಯವರು ಈ ಹಿಂದೆಯೂ ಲೋಕಪಾಲ್ ಆಯ್ಕೆ ಸಮಿತಿ ಸಭೆ ಬಹಿಷ್ಕರಿಸಿದ್ದರು. ಈ ಹಿಂದೆ ಬರೆದಿದ್ದ ಪತ್ರಗಳ ವಿಚಾರಗಳ ಬಗ್ಗೆಯೂ ಅವರು ಪ್ರಧಾನಿಗೆ ನೆನಪು ಮಾಡಿಕೊಟ್ಟಿದ್ದಾರೆ. ಲೋಕಪಾಲ್ ಆಯ್ಕೆ ಸಮಿತಿ ಸಭೆ ಗುರುವಾರ ಸಂಜೆಗೆ ನಿಗದಿಯಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>