<p>ದೇವನಹಳ್ಳಿ: ಇಲ್ಲಿನ ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತಾ ತಪಾಸಣೆ ತ್ವರಿತಗೊಳಿಸಲುಡಿಜಿ ಯಾತ್ರಾ (ಮುಖಚರ್ಯೆ ಗುರುತಿಸುವಿಕೆ) ವ್ಯವಸ್ಥೆಯನ್ನು ಹೊಸದಾಗಿ ಅಳವಡಿಸಲಾಗಿದ್ದು, ಅಸಮರ್ಪಕ ಕಾರ್ಯ ನಿರ್ವಹಣೆಯಿಂದಾಗಿ ಪ್ರಯಾಣಿಕರು ಸೋಮವಾರ ಪರದಾಡುವಂತಾಯಿತು.</p>.<p>ಉದ್ದದ ಸಾಲಿನಲ್ಲಿ ಭದ್ರತಾ ತಪಾಸಣೆಗೆ ನಿಂತಿದ್ದ ಪ್ರಯಾಣಿಕರು ಬೆಂಗ ಳೂರು ವಿಮಾನ ನಿಲ್ದಾಣದ ನಿರ್ವಹಣೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.</p>.<p>ಈ ಕುರಿತುಹಲವು ಪ್ರಯಾಣಿಕರು ಸಾಮಾಜಿಕ ಜಾಲತಾಣದಲ್ಲಿ ಬೇಸರ ಹೊರಹಾಕಿದ್ದು, ಸಾಲು ಸಾಲು ಟ್ವೀಟ್ ಮಾಡಿ ವಿಮಾನ ನಿಲ್ದಾಣದ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಸೇವೆ ಪೂರ್ಣ ಪ್ರಮಾಣದಲ್ಲಿ ಕೆಲಸ ಮಾಡುತ್ತಿಲ್ಲ. ಆದಾಗ್ಯೂ, ಡಿಜಿ ಯಾತ್ರಾ ಆ್ಯಪ್ ಬಗ್ಗೆ ಸುಳ್ಳು ಸುದ್ದಿ ನೀಡಲಾಗುತ್ತಿದೆ ಎಂದು ಪ್ರಯಾಣಿಕರು ಏರು<br />ಧ್ವನಿಯಲ್ಲಿ ಪ್ರಶ್ನಿಸಿದರು.</p>.<p>ಬೆಂಗಳೂರಿನ ತೇಜಸ್ ಎಂಬುವರು ಟ್ವೀಟ್ ಮಾಡಿ, ‘ಸೋಮವಾರ ಬೆಳಿಗ್ಗೆ ಇಷ್ಟು ಉದ್ದದ ಸಾಲು ನಿರ್ಮಾಣವಾಗಿದೆ. ಡಿಜಿ ಯಾತ್ರಾ ಆ್ಯಪ್ ಇನ್ನೂ ಜಾರಿಯಾಗದೆ ಅದರ ಅಬ್ಬರದ ಪ್ರಚಾರ ಏಕೆ’ ಎಂದು ಕೇಳಿದ್ದಾರೆ.</p>.<p>‘ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಇನ್ನೂ ಡಿಜಿ ಯಾತ್ರಾ ಆರಂಭವೇ ಆಗಿಲ್ಲ. ಆದರೂ ಕಾರ್ಯ ನಿರ್ವಹಿಸುತ್ತಿದೆ ಎಂದು ಏಕೆ ಸುದ್ದಿ ಹರಡಲಾಗುತ್ತಿದೆ’ ಎಂದು ಪ್ರಯಾಣಿಕ ಇಶಾನ್ ಶರ್ಮಾ ಎಂಬುವರು ಪ್ರಶ್ನಿಸಿದ್ದಾರೆ.</p>.<p>‘ಭದ್ರತಾ ತಪಾಸಣೆಯಲ್ಲಿ ಸರತಿ ಸಾಲು ಸೃಷ್ಟಿಯಾಗಿದೆ. ಶೌಚಾಲಯಗಳಲ್ಲೂ ಭಾರಿ ದಟ್ಟಣೆ ಇದ್ದು, ಬಳಕೆ ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ. ಜನಸಂದಣಿ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು’ ಎಂದುರೋಷನ್ ಎಂಬುವರು ಮನವಿ ಮಾಡಿದ್ದಾರೆ.</p>.<p>ಪ್ರಯಾಣಿಕರ ಸಮಸ್ಯೆಗಳಿಗೆ ಉತ್ತರಿಸಿರುವ ಬೆಂಗಳೂರು ವಿಮಾನ ನಿಲ್ದಾಣ, ‘ಶೀಘ್ರ ಸಮಸ್ಯೆಗಳನ್ನು ಪರಿಹರಿಸಲಾಗುವುದು. ಪ್ರಯಾಣಿಕರ ಸಹಾಯಕ್ಕೆ ಯತ್ನಿಸಲಾಗುತ್ತಿದೆ. ಡಿಜಿ ಯಾತ್ರಾ ಆ್ಯಪ್ ಬಳಕೆಯಾಗದೆ ಹಿಂದಿನಂತೆಯೇ ವ್ಯವಸ್ಥೆ ಇರಲಿದೆ‘ ಎಂದು ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದೇವನಹಳ್ಳಿ: ಇಲ್ಲಿನ ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತಾ ತಪಾಸಣೆ ತ್ವರಿತಗೊಳಿಸಲುಡಿಜಿ ಯಾತ್ರಾ (ಮುಖಚರ್ಯೆ ಗುರುತಿಸುವಿಕೆ) ವ್ಯವಸ್ಥೆಯನ್ನು ಹೊಸದಾಗಿ ಅಳವಡಿಸಲಾಗಿದ್ದು, ಅಸಮರ್ಪಕ ಕಾರ್ಯ ನಿರ್ವಹಣೆಯಿಂದಾಗಿ ಪ್ರಯಾಣಿಕರು ಸೋಮವಾರ ಪರದಾಡುವಂತಾಯಿತು.</p>.<p>ಉದ್ದದ ಸಾಲಿನಲ್ಲಿ ಭದ್ರತಾ ತಪಾಸಣೆಗೆ ನಿಂತಿದ್ದ ಪ್ರಯಾಣಿಕರು ಬೆಂಗ ಳೂರು ವಿಮಾನ ನಿಲ್ದಾಣದ ನಿರ್ವಹಣೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.</p>.<p>ಈ ಕುರಿತುಹಲವು ಪ್ರಯಾಣಿಕರು ಸಾಮಾಜಿಕ ಜಾಲತಾಣದಲ್ಲಿ ಬೇಸರ ಹೊರಹಾಕಿದ್ದು, ಸಾಲು ಸಾಲು ಟ್ವೀಟ್ ಮಾಡಿ ವಿಮಾನ ನಿಲ್ದಾಣದ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಸೇವೆ ಪೂರ್ಣ ಪ್ರಮಾಣದಲ್ಲಿ ಕೆಲಸ ಮಾಡುತ್ತಿಲ್ಲ. ಆದಾಗ್ಯೂ, ಡಿಜಿ ಯಾತ್ರಾ ಆ್ಯಪ್ ಬಗ್ಗೆ ಸುಳ್ಳು ಸುದ್ದಿ ನೀಡಲಾಗುತ್ತಿದೆ ಎಂದು ಪ್ರಯಾಣಿಕರು ಏರು<br />ಧ್ವನಿಯಲ್ಲಿ ಪ್ರಶ್ನಿಸಿದರು.</p>.<p>ಬೆಂಗಳೂರಿನ ತೇಜಸ್ ಎಂಬುವರು ಟ್ವೀಟ್ ಮಾಡಿ, ‘ಸೋಮವಾರ ಬೆಳಿಗ್ಗೆ ಇಷ್ಟು ಉದ್ದದ ಸಾಲು ನಿರ್ಮಾಣವಾಗಿದೆ. ಡಿಜಿ ಯಾತ್ರಾ ಆ್ಯಪ್ ಇನ್ನೂ ಜಾರಿಯಾಗದೆ ಅದರ ಅಬ್ಬರದ ಪ್ರಚಾರ ಏಕೆ’ ಎಂದು ಕೇಳಿದ್ದಾರೆ.</p>.<p>‘ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಇನ್ನೂ ಡಿಜಿ ಯಾತ್ರಾ ಆರಂಭವೇ ಆಗಿಲ್ಲ. ಆದರೂ ಕಾರ್ಯ ನಿರ್ವಹಿಸುತ್ತಿದೆ ಎಂದು ಏಕೆ ಸುದ್ದಿ ಹರಡಲಾಗುತ್ತಿದೆ’ ಎಂದು ಪ್ರಯಾಣಿಕ ಇಶಾನ್ ಶರ್ಮಾ ಎಂಬುವರು ಪ್ರಶ್ನಿಸಿದ್ದಾರೆ.</p>.<p>‘ಭದ್ರತಾ ತಪಾಸಣೆಯಲ್ಲಿ ಸರತಿ ಸಾಲು ಸೃಷ್ಟಿಯಾಗಿದೆ. ಶೌಚಾಲಯಗಳಲ್ಲೂ ಭಾರಿ ದಟ್ಟಣೆ ಇದ್ದು, ಬಳಕೆ ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ. ಜನಸಂದಣಿ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು’ ಎಂದುರೋಷನ್ ಎಂಬುವರು ಮನವಿ ಮಾಡಿದ್ದಾರೆ.</p>.<p>ಪ್ರಯಾಣಿಕರ ಸಮಸ್ಯೆಗಳಿಗೆ ಉತ್ತರಿಸಿರುವ ಬೆಂಗಳೂರು ವಿಮಾನ ನಿಲ್ದಾಣ, ‘ಶೀಘ್ರ ಸಮಸ್ಯೆಗಳನ್ನು ಪರಿಹರಿಸಲಾಗುವುದು. ಪ್ರಯಾಣಿಕರ ಸಹಾಯಕ್ಕೆ ಯತ್ನಿಸಲಾಗುತ್ತಿದೆ. ಡಿಜಿ ಯಾತ್ರಾ ಆ್ಯಪ್ ಬಳಕೆಯಾಗದೆ ಹಿಂದಿನಂತೆಯೇ ವ್ಯವಸ್ಥೆ ಇರಲಿದೆ‘ ಎಂದು ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>