<p><strong>ನವದೆಹಲಿ:</strong> ಅಪಹರಣ ಪ್ರಕರಣವೊಂದರ ಸಂಬಂಧ ತಮಿಳುನಾಡಿನ ಐಪಿಎಸ್ ಅಧಿಕಾರಿ, ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಎಚ್.ಎಂ.ಜಯರಾಂ ಅವರ ಅಮಾನತು ಕುರಿತು ಸುಪ್ರೀಂ ಕೋರ್ಟ್, ರಾಜ್ಯ ಸರ್ಕಾರಕ್ಕೆ ತರಾಟೆ ತೆಗೆದುಕೊಂಡಿತು.</p>.<p>ಈ ಮುನ್ನ ಅಧಿಕಾರಿಯನ್ನು ಬಂಧಿಸಲು ಮದ್ರಾಸ್ ಹೈಕೋರ್ಟ್ ಮೌಖಿಕ ಆದೇಶ ನೀಡಿತ್ತು.</p>.<p class="title">‘ಅಧಿಕಾರಿಯನ್ನು ಮಂಗಳವಾರ ವಶಕ್ಕೆ ಪಡೆದಿದ್ದು, ಸಂಜೆ 5 ಗಂಟೆ ವೇಳೆಗೆ ಬಿಡುಗಡೆ ಮಾಡಲಾಯಿತು’ ಎಂದು ನ್ಯಾಯಮೂರ್ತಿಗಳಾದ ಉಜ್ಜಲ್ ಭುಯಾನ್, ಮನಮೋಹನ್ ಅವರಿದ್ದ ‘ಸುಪ್ರೀಂ’ ಪೀಠಕ್ಕೆ ತಮಿಳುನಾಡು ಸರ್ಕಾರದ ಪರ ವಕೀಲರು ತಿಳಿಸಿದರು. </p>.<p class="title">‘ಐಪಿಎಸ್ ಅಧಿಕಾರಿಯನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ. ಆದರೆ, ಸರ್ಕಾರ ಅವರನ್ನು ಅಮಾನತು ಮಾಡಿದೆ’ ಎಂದು ಅಧಿಕಾರಿ ಪರ ವಕೀಲರು ಪೀಠಕ್ಕೆ ತಿಳಿಸಿದರು.</p>.<p class="title">‘ಹಿರಿಯ ಅಧಿಕಾರಿಯನ್ನು ಅಮಾನತಿನಲ್ಲಿ ಇಡುವ ಅಗತ್ಯವೇನಿತ್ತು? ಇಂತಹ ಕ್ರಮಗಳು ನೈತಿಕ ಸ್ಥೈರ್ಯ ಕುಗ್ಗಿಸಲಿದ್ದು, ಆತಂಕ ಮೂಡಿಸುವಂತಹದ್ದಾಗಿದೆ’ ಎಂದು ಪೀಠ ಹೇಳಿತು.</p>.<p>‘ಆರೋಪಿಯ ಹೇಳಿಕೆಯನ್ನೇ ಆಧರಿಸಿ ಕೋರ್ಟ್ ನನ್ನನ್ನು ಬಂಧಿಸುವಂತೆ ಹೈಕೋರ್ಟ್ ಸೂಚಿಸಿದೆ’ ಎಂದು ವಾದಿಸಿದ್ದ ಅಧಿಕಾರಿ ಸುಪ್ರೀಂ ಮೆಟ್ಟಿಲೇರಿದ್ದರು.</p>.<p>ಪ್ರಕರಣದ ವಿಚಾರಣೆಯನ್ನು ಜೂನ್ 19ಕ್ಕೆ ಮುಂದೂಡಿದ ಸುಪ್ರೀಂ ಪೀಠ, ಈ ಕುರಿತು ಹೆಚ್ಚಿನ ವಿವರಗಳೊಂದಿಗೆ ಅಂದು ಹಾಜರಾಗಲು ಸರ್ಕಾರದ ಪರ ವಕೀಲರಿಗೆ ಸೂಚಿಸಿತು.</p>.<p>ಏಪ್ರಿಲ್ 5ರಂದು ಯುವತಿಯ ಅಪಹರಣ ನಡೆದಿದ್ದು, ಅದಕ್ಕಾಗಿ ಜಯರಾಂ ಅವರ ಅಧಿಕೃತ ವಾಹನ ಬಳಕೆ ಆಗಿತ್ತು ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಅಪಹರಣ ಪ್ರಕರಣವೊಂದರ ಸಂಬಂಧ ತಮಿಳುನಾಡಿನ ಐಪಿಎಸ್ ಅಧಿಕಾರಿ, ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಎಚ್.ಎಂ.ಜಯರಾಂ ಅವರ ಅಮಾನತು ಕುರಿತು ಸುಪ್ರೀಂ ಕೋರ್ಟ್, ರಾಜ್ಯ ಸರ್ಕಾರಕ್ಕೆ ತರಾಟೆ ತೆಗೆದುಕೊಂಡಿತು.</p>.<p>ಈ ಮುನ್ನ ಅಧಿಕಾರಿಯನ್ನು ಬಂಧಿಸಲು ಮದ್ರಾಸ್ ಹೈಕೋರ್ಟ್ ಮೌಖಿಕ ಆದೇಶ ನೀಡಿತ್ತು.</p>.<p class="title">‘ಅಧಿಕಾರಿಯನ್ನು ಮಂಗಳವಾರ ವಶಕ್ಕೆ ಪಡೆದಿದ್ದು, ಸಂಜೆ 5 ಗಂಟೆ ವೇಳೆಗೆ ಬಿಡುಗಡೆ ಮಾಡಲಾಯಿತು’ ಎಂದು ನ್ಯಾಯಮೂರ್ತಿಗಳಾದ ಉಜ್ಜಲ್ ಭುಯಾನ್, ಮನಮೋಹನ್ ಅವರಿದ್ದ ‘ಸುಪ್ರೀಂ’ ಪೀಠಕ್ಕೆ ತಮಿಳುನಾಡು ಸರ್ಕಾರದ ಪರ ವಕೀಲರು ತಿಳಿಸಿದರು. </p>.<p class="title">‘ಐಪಿಎಸ್ ಅಧಿಕಾರಿಯನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ. ಆದರೆ, ಸರ್ಕಾರ ಅವರನ್ನು ಅಮಾನತು ಮಾಡಿದೆ’ ಎಂದು ಅಧಿಕಾರಿ ಪರ ವಕೀಲರು ಪೀಠಕ್ಕೆ ತಿಳಿಸಿದರು.</p>.<p class="title">‘ಹಿರಿಯ ಅಧಿಕಾರಿಯನ್ನು ಅಮಾನತಿನಲ್ಲಿ ಇಡುವ ಅಗತ್ಯವೇನಿತ್ತು? ಇಂತಹ ಕ್ರಮಗಳು ನೈತಿಕ ಸ್ಥೈರ್ಯ ಕುಗ್ಗಿಸಲಿದ್ದು, ಆತಂಕ ಮೂಡಿಸುವಂತಹದ್ದಾಗಿದೆ’ ಎಂದು ಪೀಠ ಹೇಳಿತು.</p>.<p>‘ಆರೋಪಿಯ ಹೇಳಿಕೆಯನ್ನೇ ಆಧರಿಸಿ ಕೋರ್ಟ್ ನನ್ನನ್ನು ಬಂಧಿಸುವಂತೆ ಹೈಕೋರ್ಟ್ ಸೂಚಿಸಿದೆ’ ಎಂದು ವಾದಿಸಿದ್ದ ಅಧಿಕಾರಿ ಸುಪ್ರೀಂ ಮೆಟ್ಟಿಲೇರಿದ್ದರು.</p>.<p>ಪ್ರಕರಣದ ವಿಚಾರಣೆಯನ್ನು ಜೂನ್ 19ಕ್ಕೆ ಮುಂದೂಡಿದ ಸುಪ್ರೀಂ ಪೀಠ, ಈ ಕುರಿತು ಹೆಚ್ಚಿನ ವಿವರಗಳೊಂದಿಗೆ ಅಂದು ಹಾಜರಾಗಲು ಸರ್ಕಾರದ ಪರ ವಕೀಲರಿಗೆ ಸೂಚಿಸಿತು.</p>.<p>ಏಪ್ರಿಲ್ 5ರಂದು ಯುವತಿಯ ಅಪಹರಣ ನಡೆದಿದ್ದು, ಅದಕ್ಕಾಗಿ ಜಯರಾಂ ಅವರ ಅಧಿಕೃತ ವಾಹನ ಬಳಕೆ ಆಗಿತ್ತು ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>