<p><strong>ಜೌನಪುರ</strong> <strong>(ಉತ್ತರ ಪ್ರದೇಶ):</strong> ಮೋಟರ್ ಸೈಕಲ್ನಲ್ಲಿ ತೆರಳುತ್ತಿದ್ದ ಫಿಸಿಯೋಥೆರಪಿಸ್ಟ್ ಒಬ್ಬರ ಕೊರಳಿಗೆ ನಿಷೇಧಿತ ‘ಚೈನೀಸ್ ಮಾಂಜಾ’ ಸುತ್ತಿಕೊಂಡಿದ್ದರಿಂದ ಅವರ ಕುತ್ತಿಗೆ ಸೀಳಿ, ಬುಧವಾರ ಮೃತಪಟ್ಟಿದ್ದಾರೆ. </p>.<p>ಮೃತ ವ್ಯಕ್ತಿಯನ್ನು ಕೆರಕತ್ ಕೊತ್ವಾಲಿ ನಗರದ ನಿವಾಸಿ ಮೊಹಮ್ಮದ್ ಶಮೀರ್ ಎಂದು ಗುರುತಿಸಲಾಗಿದೆ. ಪಚಾಟಿಯಾ ಗ್ರಾಮದ ಪ್ರಸಾದ್ ಇಂಟರ್ನ್ಯಾಷನಲ್ ಸ್ಕೂಲ್ ಬಳಿ ಈ ದುರ್ಘಟನೆ ನಡೆದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಆಯುಷ್ ಶ್ರೀವಾಸ್ತವ ಅವರು ಮಾಹಿತಿ ನೀಡಿದ್ದಾರೆ.</p>.ಬೀದರ್| ಬೈಕ್ ಮೇಲೆ ತೆರಳುವಾಗ ಕತ್ತು ಸೀಳಿದ ಗಾಳಿಪಟದ ಮಾಂಜಾ; ವ್ಯಕ್ತಿ ಸಾವು.<p>ಜೌನಪುರದಲ್ಲಿ ವೈದ್ಯರೊಬ್ಬರನ್ನು ಭೇಟಿಯಾಗಲು ಶಮೀರ್ ಬಂದಿದ್ದರು. ಅವರು ಮನೆಗೆ ಹಿಂದಿರುಗುತ್ತಿದ್ದ ಸಂದರ್ಭದಲ್ಲಿ ಶಾಲೆಯ ಬಳಿ ಗಾಳಿಪಟ ಹಾರಿಸಲು ಬಳಸುವ ‘ಚೈನೀಸ್ ಮಾಂಜಾ‘ (ಗಾಜು ಲೇಪಿತ ಸಿಂಥೆಟಿಕ್ ಸೂತ್ರ) ಅವರ ಕುತ್ತಿಗೆಗೆ ಸುತ್ತಿಕೊಂಡು ಸೀಳಿದೆ. </p>.<p>ಟ್ರಾಫಿಕ್ ಇನ್ಸ್ಪೆಕ್ಟರ್ ಸುಶೀಲ್ ಮಿಶ್ರಾ ಅವರು ತಕ್ಷಣವೇ ಸ್ಥಳಕ್ಕೆ ತೆರಳಿ, ಆಂಬುಲೆನ್ಸ್ ಮೂಲಕ ಶಮೀರ್ ಅವರನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದರು. ಆದರೆ, ತೀವ್ರಗಾಯಗೊಂಡಿದ್ದ ಶಮೀರ್ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲಾಗುತ್ತಿದ್ದು, ಅಗತ್ಯ ಕ್ರಮ ಕೈಗೊಳ್ಳುವುದಾಗಿಯೂ ತಿಳಿಸಿದ್ದಾರೆ. </p>.<p><strong>ಆನ್ಲೈನ್ನಲ್ಲಿ ಲಭ್ಯ–ಕಳವಳ: </strong></p>.<p>ಚೈನೀಸ್ ಮಾಂಜಾ ಬಳಕೆಗೆ ನಿಷೇಧವಿದ್ದರೂ ಹಲವು ಕಡೆ ಅವುಗಳನ್ನು ಬಳಸಲಾಗುತ್ತಿದೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಪೊಲೀಸರು ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿದ್ದಾರೆ. ಆದರೆ, ಆನ್ಲೈನ್ ಮೂಲಕ ಅವುಗಳನ್ನು ಮಾರಾಟ ಮಾಡುತ್ತಿರುವುದು ಹೊಸ ಸವಾಲಾಗಿ ಪರಿಣಮಿಸಿದೆ ಎಂದು ಪೊಲೀಸರು ಆತಂಕ ವ್ಯಕ್ತಪಡಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೌನಪುರ</strong> <strong>(ಉತ್ತರ ಪ್ರದೇಶ):</strong> ಮೋಟರ್ ಸೈಕಲ್ನಲ್ಲಿ ತೆರಳುತ್ತಿದ್ದ ಫಿಸಿಯೋಥೆರಪಿಸ್ಟ್ ಒಬ್ಬರ ಕೊರಳಿಗೆ ನಿಷೇಧಿತ ‘ಚೈನೀಸ್ ಮಾಂಜಾ’ ಸುತ್ತಿಕೊಂಡಿದ್ದರಿಂದ ಅವರ ಕುತ್ತಿಗೆ ಸೀಳಿ, ಬುಧವಾರ ಮೃತಪಟ್ಟಿದ್ದಾರೆ. </p>.<p>ಮೃತ ವ್ಯಕ್ತಿಯನ್ನು ಕೆರಕತ್ ಕೊತ್ವಾಲಿ ನಗರದ ನಿವಾಸಿ ಮೊಹಮ್ಮದ್ ಶಮೀರ್ ಎಂದು ಗುರುತಿಸಲಾಗಿದೆ. ಪಚಾಟಿಯಾ ಗ್ರಾಮದ ಪ್ರಸಾದ್ ಇಂಟರ್ನ್ಯಾಷನಲ್ ಸ್ಕೂಲ್ ಬಳಿ ಈ ದುರ್ಘಟನೆ ನಡೆದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಆಯುಷ್ ಶ್ರೀವಾಸ್ತವ ಅವರು ಮಾಹಿತಿ ನೀಡಿದ್ದಾರೆ.</p>.ಬೀದರ್| ಬೈಕ್ ಮೇಲೆ ತೆರಳುವಾಗ ಕತ್ತು ಸೀಳಿದ ಗಾಳಿಪಟದ ಮಾಂಜಾ; ವ್ಯಕ್ತಿ ಸಾವು.<p>ಜೌನಪುರದಲ್ಲಿ ವೈದ್ಯರೊಬ್ಬರನ್ನು ಭೇಟಿಯಾಗಲು ಶಮೀರ್ ಬಂದಿದ್ದರು. ಅವರು ಮನೆಗೆ ಹಿಂದಿರುಗುತ್ತಿದ್ದ ಸಂದರ್ಭದಲ್ಲಿ ಶಾಲೆಯ ಬಳಿ ಗಾಳಿಪಟ ಹಾರಿಸಲು ಬಳಸುವ ‘ಚೈನೀಸ್ ಮಾಂಜಾ‘ (ಗಾಜು ಲೇಪಿತ ಸಿಂಥೆಟಿಕ್ ಸೂತ್ರ) ಅವರ ಕುತ್ತಿಗೆಗೆ ಸುತ್ತಿಕೊಂಡು ಸೀಳಿದೆ. </p>.<p>ಟ್ರಾಫಿಕ್ ಇನ್ಸ್ಪೆಕ್ಟರ್ ಸುಶೀಲ್ ಮಿಶ್ರಾ ಅವರು ತಕ್ಷಣವೇ ಸ್ಥಳಕ್ಕೆ ತೆರಳಿ, ಆಂಬುಲೆನ್ಸ್ ಮೂಲಕ ಶಮೀರ್ ಅವರನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದರು. ಆದರೆ, ತೀವ್ರಗಾಯಗೊಂಡಿದ್ದ ಶಮೀರ್ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲಾಗುತ್ತಿದ್ದು, ಅಗತ್ಯ ಕ್ರಮ ಕೈಗೊಳ್ಳುವುದಾಗಿಯೂ ತಿಳಿಸಿದ್ದಾರೆ. </p>.<p><strong>ಆನ್ಲೈನ್ನಲ್ಲಿ ಲಭ್ಯ–ಕಳವಳ: </strong></p>.<p>ಚೈನೀಸ್ ಮಾಂಜಾ ಬಳಕೆಗೆ ನಿಷೇಧವಿದ್ದರೂ ಹಲವು ಕಡೆ ಅವುಗಳನ್ನು ಬಳಸಲಾಗುತ್ತಿದೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಪೊಲೀಸರು ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿದ್ದಾರೆ. ಆದರೆ, ಆನ್ಲೈನ್ ಮೂಲಕ ಅವುಗಳನ್ನು ಮಾರಾಟ ಮಾಡುತ್ತಿರುವುದು ಹೊಸ ಸವಾಲಾಗಿ ಪರಿಣಮಿಸಿದೆ ಎಂದು ಪೊಲೀಸರು ಆತಂಕ ವ್ಯಕ್ತಪಡಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>