ತಾಡೋಬಾ ಅಂಧಾರಿ ಹುಲಿ ಸಂರಕ್ಷಿತ (ಟಿಎಟಿಆರ್) ಯೋಜನೆಯ ಕ್ಷೇತ್ರ ನಿರ್ದೇಶಕ ಡಾ. ಜಿತೇಂದ್ರ ರಾಮ್ಗಾಂವ್ಕರ್ ಮೇಲ್ವಿಚಾರಣೆಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ, ಖಡ್ಸಂಗಿ ಅರಣ್ಯ ವಲಯ 59ರಲ್ಲಿ ಹುಲಿಯನ್ನು ಸೆರೆ ಹಿಡಿದು, ನಾಗ್ಪುರದ ಗೋರೆವಾಡ ವನ್ಯಜೀವಿ ರಕ್ಷಣಾ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.