<p><strong>ಜಮ್ಮು:</strong> ವಾಯುಪಡೆಯ ಬೆಂಗಾವಲು ಪಡೆ ಮೇಲೆ ನಡೆದಿದ್ದ ದಾಳಿಗೆ ಸಂಬಂಧಿಸಿ ಜಮ್ಮುವಿನ ಗಡಿ ಜಿಲ್ಲೆಗಳಾದ ಪೂಂಚ್ ಮತ್ತು ರಜೌರಿಯಲ್ಲಿ ಭದ್ರತಾ ಪಡೆಗಳು ಶೋಧ ಕಾರ್ಯವನ್ನು ತೀವ್ರಗೊಳಿಸಿವೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.</p>.<p>ಈ ಎರಡು ಜಿಲ್ಲೆಗಳಲ್ಲಿ ಮಾತ್ರವಲ್ಲ, ದೋಡಾ, ಉಧಂಪುರ ಹಾಗೂ ಕಠುವಾ ಜಿಲ್ಲೆಗಳಿಗೂ ಶೋಧಕಾರ್ಯವನ್ನು ಪಡೆಗಳು ವಿಸ್ತರಿಸಿದ್ದು, ಬೆಂಗಾವಲು ಪಡೆ ಮೇಲಿನ ದಾಳಿ ನಡೆಸಿರುವ ಭಯೋತ್ಪಾದಕರ ಎರಡು ಗುಂಪುಗಳ ಪತ್ತೆ ಕಾರ್ಯವನ್ನು ತೀವ್ರಗೊಳಿಸಿವೆ.</p>.<p>ಡ್ರೋನ್ಗಳು, ಮಾದಕವಸ್ತುಗಳು ಮತ್ತು ಸ್ಫೋಟಕಗಳನ್ನು ಪತ್ತೆ ಮಾಡುವ ಶ್ವಾನಗಳನ್ನು ಬಳಸಿ ನಡೆಸುತ್ತಿರುವ ಈ ಕಾರ್ಯಾಚರಣೆ ಮಂಗಳವಾರ ನಾಲ್ಕನೇ ದಿನ ಪೂರೈಸಿತು.</p>.<p>ಘಟನೆಗೆ ಸಂಬಂಧಿಸಿ 22 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈ ಸಂಬಂಧ ಸಿ.ಸಿ.ಟಿವಿ ಕ್ಯಾಮೆರಾಗಳಲ್ಲಿನ ದೃಶ್ಯಗಳನ್ನು ಸಹ ಪರಿಶೀಲಿಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.</p>.<p>ಏಪ್ರಿಲ್ 28ರಂದು ಬಸನ್ಗಡದಲ್ಲಿ ನಡೆದಿದ್ದ ಗುಂಡಿನ ಕಾಳಗದಲ್ಲಿ, ಉಗ್ರರು ಗ್ರಾಮ ರಕ್ಷಣಾ ಸಿಬ್ಬಂದಿಯೊಬ್ಬರನ್ನು (ವಿಡಿಜಿ) ಹತ್ಯೆ ಮಾಡಿದ್ದರು. ಶಾಯಿಸ್ತಾರ್ ಎಂಬಲ್ಲಿ ವಾಯುಪಡೆ ಬೆಂಗಾವಲು ಪಡೆ ಗುರಿಯಾಗಿಸಿ ನಡೆದಿದ್ದ ದಾಳಿಯಲ್ಲಿ ಅಧಿಕಾರಿಯೊಬ್ಬರು ಮೃತಪಟ್ಟು, ಇತರ ನಾಲ್ವರಿಗೆ ಗಾಯಗಳಾಗಿದ್ದವು.</p>.<p>ಪ್ರಮುಖ ಶಂಕಿತರ ಕುರಿತು ಸುಳಿವು ನೀಡಿದವರಿಗೆ ₹20 ಲಕ್ಷ ಬಹುಮಾನ ಘೋಷಿಸಿರುವ ಭದ್ರತಾ ಪಡೆಗಳು, ಈ ಸಂಬಂಧ ಸುರಾನ್ಕೋಟ್ ಪ್ರದೇಶದಲ್ಲಿ ಪೋಸ್ಟರ್ಗಳನ್ನು ಅಂಟಿಸಲಾಗಿದೆ ಎಂದೂ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಮ್ಮು:</strong> ವಾಯುಪಡೆಯ ಬೆಂಗಾವಲು ಪಡೆ ಮೇಲೆ ನಡೆದಿದ್ದ ದಾಳಿಗೆ ಸಂಬಂಧಿಸಿ ಜಮ್ಮುವಿನ ಗಡಿ ಜಿಲ್ಲೆಗಳಾದ ಪೂಂಚ್ ಮತ್ತು ರಜೌರಿಯಲ್ಲಿ ಭದ್ರತಾ ಪಡೆಗಳು ಶೋಧ ಕಾರ್ಯವನ್ನು ತೀವ್ರಗೊಳಿಸಿವೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.</p>.<p>ಈ ಎರಡು ಜಿಲ್ಲೆಗಳಲ್ಲಿ ಮಾತ್ರವಲ್ಲ, ದೋಡಾ, ಉಧಂಪುರ ಹಾಗೂ ಕಠುವಾ ಜಿಲ್ಲೆಗಳಿಗೂ ಶೋಧಕಾರ್ಯವನ್ನು ಪಡೆಗಳು ವಿಸ್ತರಿಸಿದ್ದು, ಬೆಂಗಾವಲು ಪಡೆ ಮೇಲಿನ ದಾಳಿ ನಡೆಸಿರುವ ಭಯೋತ್ಪಾದಕರ ಎರಡು ಗುಂಪುಗಳ ಪತ್ತೆ ಕಾರ್ಯವನ್ನು ತೀವ್ರಗೊಳಿಸಿವೆ.</p>.<p>ಡ್ರೋನ್ಗಳು, ಮಾದಕವಸ್ತುಗಳು ಮತ್ತು ಸ್ಫೋಟಕಗಳನ್ನು ಪತ್ತೆ ಮಾಡುವ ಶ್ವಾನಗಳನ್ನು ಬಳಸಿ ನಡೆಸುತ್ತಿರುವ ಈ ಕಾರ್ಯಾಚರಣೆ ಮಂಗಳವಾರ ನಾಲ್ಕನೇ ದಿನ ಪೂರೈಸಿತು.</p>.<p>ಘಟನೆಗೆ ಸಂಬಂಧಿಸಿ 22 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈ ಸಂಬಂಧ ಸಿ.ಸಿ.ಟಿವಿ ಕ್ಯಾಮೆರಾಗಳಲ್ಲಿನ ದೃಶ್ಯಗಳನ್ನು ಸಹ ಪರಿಶೀಲಿಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.</p>.<p>ಏಪ್ರಿಲ್ 28ರಂದು ಬಸನ್ಗಡದಲ್ಲಿ ನಡೆದಿದ್ದ ಗುಂಡಿನ ಕಾಳಗದಲ್ಲಿ, ಉಗ್ರರು ಗ್ರಾಮ ರಕ್ಷಣಾ ಸಿಬ್ಬಂದಿಯೊಬ್ಬರನ್ನು (ವಿಡಿಜಿ) ಹತ್ಯೆ ಮಾಡಿದ್ದರು. ಶಾಯಿಸ್ತಾರ್ ಎಂಬಲ್ಲಿ ವಾಯುಪಡೆ ಬೆಂಗಾವಲು ಪಡೆ ಗುರಿಯಾಗಿಸಿ ನಡೆದಿದ್ದ ದಾಳಿಯಲ್ಲಿ ಅಧಿಕಾರಿಯೊಬ್ಬರು ಮೃತಪಟ್ಟು, ಇತರ ನಾಲ್ವರಿಗೆ ಗಾಯಗಳಾಗಿದ್ದವು.</p>.<p>ಪ್ರಮುಖ ಶಂಕಿತರ ಕುರಿತು ಸುಳಿವು ನೀಡಿದವರಿಗೆ ₹20 ಲಕ್ಷ ಬಹುಮಾನ ಘೋಷಿಸಿರುವ ಭದ್ರತಾ ಪಡೆಗಳು, ಈ ಸಂಬಂಧ ಸುರಾನ್ಕೋಟ್ ಪ್ರದೇಶದಲ್ಲಿ ಪೋಸ್ಟರ್ಗಳನ್ನು ಅಂಟಿಸಲಾಗಿದೆ ಎಂದೂ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>