<p><strong>ನವದೆಹಲಿ:</strong> ‘ಲೋಕಸಭೆಯಲ್ಲಿ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ ಅವರ ಮಾತುಗಳು ಸಂಪೂರ್ಣ ಸುಳ್ಳುಗಳಿಂದ ಕೂಡಿವೆ’ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಆರೋಪಿಸಿದ್ದು, ‘ಅವರು ಹೇಳಿರುವ ಈ ‘ಸುಳ್ಳು’ಗಳನ್ನು ಕಡತದಿಂದ ತೆಗೆಯುವಂತೆ ಆಡಳಿತಾರೂಢ ಎನ್ಡಿಎ ಒಕ್ಕೂಟ ಮನವಿ ಮಾಡಲಿದೆ’ ಎಂದು ಬುಧವಾರ ಹೇಳಿದ್ದಾರೆ.</p>.<p>ಬಜೆಟ್ ಮೇಲಿನ ಚರ್ಚೆ ವೇಳೆ, ರಾಹುಲ್ ಗಾಂಧಿ ತಮ್ಮ ಮಾತು ಮುಗಿಸುತ್ತಿದ್ದಂತೆಯೇ ಈ ಕುರಿತು ಪ್ರಸ್ತಾಪಿಸಿದ ರಿಜಿಜು,‘ರಾಹುಲ್ ಗಾಂಧಿ ಅವರು ತಾವು ಮಾಡಿರುವ ಆರೋಪಗಳನ್ನು ಸಾಬೀತುಪಡಿಸಬೇಕು ಎಂದು ಕೋರಿ ಎನ್ಡಿಎ ಸಂಸದರು ಸ್ಪೀಕರ್ ಅವರಿಗೆ ನೋಟಿಸ್ ಸಲ್ಲಿಸುವರು’ ಎಂದರು.</p>.<p>‘ತಾವು ಆಡಿರುವ ಮಾತುಗಳನ್ನು ದೃಢೀಕರಿಸುವುದಾಗಿ ರಾಹುಲ್ ಗಾಂಧಿ ಪ್ರಮಾಣ ಮಾಡಿದ್ದಾರೆ. ಆದರೆ, ಅವರು ಸುಳ್ಳು ಹೇಳಿರುವ ಕಾರಣ ತಾವು ಮಾಡಿರುವ ಆರೋಪಗಳನ್ನು ಸಾಬೀತುಪಡಿಸುವುದು ಅವರಿಂದ ಸಾಧ್ಯ ಇಲ್ಲ ಎಂಬುದು ನನಗೆ ಗೊತ್ತು’ ಎಂದು ರಿಜಿಜು ಹೇಳಿದರು.</p>.<p>‘ರಾಹುಲ್ ಗಾಂಧಿ ಅವರು ಪೆಟ್ರೋಲಿಯಂ ಸಚಿವ ಹರದೀಪ್ ಸಿಂಗ್ ವಿರುದ್ಧ ಗುರುತರವಾದ ಆರೋಪ ಮಾಡಿದ್ದಾರೆ. ಈ ಸಂಬಂಧ ಅವರು ಮುಂಚಿತವಾಗಿ ಯಾವುದೇ ನೋಟಿಸ್ಅನ್ನೂ ನೀಡಿರಲಿಲ್ಲ. ಇದು ಗಂಭೀರವಾದ ಹಕ್ಕುಚ್ಯುತಿ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಲೋಕಸಭೆಯಲ್ಲಿ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ ಅವರ ಮಾತುಗಳು ಸಂಪೂರ್ಣ ಸುಳ್ಳುಗಳಿಂದ ಕೂಡಿವೆ’ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಆರೋಪಿಸಿದ್ದು, ‘ಅವರು ಹೇಳಿರುವ ಈ ‘ಸುಳ್ಳು’ಗಳನ್ನು ಕಡತದಿಂದ ತೆಗೆಯುವಂತೆ ಆಡಳಿತಾರೂಢ ಎನ್ಡಿಎ ಒಕ್ಕೂಟ ಮನವಿ ಮಾಡಲಿದೆ’ ಎಂದು ಬುಧವಾರ ಹೇಳಿದ್ದಾರೆ.</p>.<p>ಬಜೆಟ್ ಮೇಲಿನ ಚರ್ಚೆ ವೇಳೆ, ರಾಹುಲ್ ಗಾಂಧಿ ತಮ್ಮ ಮಾತು ಮುಗಿಸುತ್ತಿದ್ದಂತೆಯೇ ಈ ಕುರಿತು ಪ್ರಸ್ತಾಪಿಸಿದ ರಿಜಿಜು,‘ರಾಹುಲ್ ಗಾಂಧಿ ಅವರು ತಾವು ಮಾಡಿರುವ ಆರೋಪಗಳನ್ನು ಸಾಬೀತುಪಡಿಸಬೇಕು ಎಂದು ಕೋರಿ ಎನ್ಡಿಎ ಸಂಸದರು ಸ್ಪೀಕರ್ ಅವರಿಗೆ ನೋಟಿಸ್ ಸಲ್ಲಿಸುವರು’ ಎಂದರು.</p>.<p>‘ತಾವು ಆಡಿರುವ ಮಾತುಗಳನ್ನು ದೃಢೀಕರಿಸುವುದಾಗಿ ರಾಹುಲ್ ಗಾಂಧಿ ಪ್ರಮಾಣ ಮಾಡಿದ್ದಾರೆ. ಆದರೆ, ಅವರು ಸುಳ್ಳು ಹೇಳಿರುವ ಕಾರಣ ತಾವು ಮಾಡಿರುವ ಆರೋಪಗಳನ್ನು ಸಾಬೀತುಪಡಿಸುವುದು ಅವರಿಂದ ಸಾಧ್ಯ ಇಲ್ಲ ಎಂಬುದು ನನಗೆ ಗೊತ್ತು’ ಎಂದು ರಿಜಿಜು ಹೇಳಿದರು.</p>.<p>‘ರಾಹುಲ್ ಗಾಂಧಿ ಅವರು ಪೆಟ್ರೋಲಿಯಂ ಸಚಿವ ಹರದೀಪ್ ಸಿಂಗ್ ವಿರುದ್ಧ ಗುರುತರವಾದ ಆರೋಪ ಮಾಡಿದ್ದಾರೆ. ಈ ಸಂಬಂಧ ಅವರು ಮುಂಚಿತವಾಗಿ ಯಾವುದೇ ನೋಟಿಸ್ಅನ್ನೂ ನೀಡಿರಲಿಲ್ಲ. ಇದು ಗಂಭೀರವಾದ ಹಕ್ಕುಚ್ಯುತಿ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>