<p class="content"><strong>ನವದೆಹಲಿ:</strong> ತಮ್ಮ ಉತ್ಪನ್ನಗಳನ್ನು ನಗರ ಪ್ರದೇಶಗಳಲ್ಲಿಯೂ ಮಾರಾಟ ಮಾಡಲು ಸಾಧ್ಯವಾಗುವುದರಿಂದಕಿಸಾನ್ ರೈಲು ಯೋಜನೆಯುದೇಶದಾದ್ಯಂತ ಇರುವ ರೈತರಿಗೆ ನರವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.</p>.<p class="content">ಮಹಾರಾಷ್ಟ್ರ ಹಾಗೂ ಬಿಹಾರ ನಡುವೆ ದೇಶದ ಮೊದಲ ಕಿಸಾನ್ ರೈಲು ಆರಂಭವಾಗಿದೆ. ಈ ಬಗ್ಗೆ ಮಾತನಾಡಿರುವ ಪ್ರಧಾನಿ ಮೋದಿ,‘ದೇಶದ ಅತಿಸಣ್ಣ ರೈತರನ್ನೂ ಒಳಗೊಂಡಂತೆ 2 ದಿನಗಳ ಹಿಂದೆ ದೊಡ್ಡ ಯೋಜನೆಯನ್ನು ಆರಂಭಿಸಲಾಗಿದೆ. ಮಹಾರಾಷ್ಟ್ರ ಹಾಗೂ ಬಿಹಾರ ರಾಜ್ಯಗಳ ನಡುವೆ ಕಿಸಾನ್ ರೈಲು ಸಂಚಾರ ಆರಂಭವಾಗಿದೆ’ ಎಂದು ತಿಳಿಸಿದ್ದಾರೆ.</p>.<p>‘ರೈತರು ಮುಂಬೈ ಮತ್ತು ಪುಣೆ ನಗರಗಳೊಂದಿಗೆ ನೇರವಾಗಿ ಸಂಪರ್ಕ ಸಾಧಿಸಲಿದ್ದಾರೆ. ಈ ರೈಲು ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶದ ಮೂಲಕ ಹಾದುಹೋಗುವುದರಿಂದ ಅಲ್ಲಿನ ರೈತರಿಗೂ ನೆರವಾಗಲಿದೆ. ಇದು ಹವಾನಿಯಂತ್ರಿತ ರೈಲು ಆಗಿದ್ದು, ತರಕಾರಿ ಪದಾರ್ಥಗಳನ್ನು ಸಂಗ್ರಹಿಸಿಡಲು ಶೈತ್ಯಾಗರ ವ್ಯವಸ್ಥೆಯನ್ನೂ ಹೊಂದಿದೆ. ಟ್ರಕ್ಗಳಿಗೆ ಹೋಲಿಸಿದರೆ ರೈಲಿನ ಶುಲ್ಕವೂ ಕಡಿಮೆ’ ಎಂದಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/district/belagavi/flag-off-for-first-kisan-rail-751443.html" target="_blank">ದೇಶದ ಮೊದಲ ಕಿಸಾನ್ ರೈಲಿಗೆ ಚಾಲನೆ</a></p>.<p>ದೇಶದ ಮೊಟ್ಟ ಮೊದಲ ಕಿಸಾನ್ ರೈಲು ಸಂಚಾರಕ್ಕೆ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹಾಗೂ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರು ಶುಕ್ರವಾರ ಹಸಿರುನಿಶಾನೆ ತೋರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="content"><strong>ನವದೆಹಲಿ:</strong> ತಮ್ಮ ಉತ್ಪನ್ನಗಳನ್ನು ನಗರ ಪ್ರದೇಶಗಳಲ್ಲಿಯೂ ಮಾರಾಟ ಮಾಡಲು ಸಾಧ್ಯವಾಗುವುದರಿಂದಕಿಸಾನ್ ರೈಲು ಯೋಜನೆಯುದೇಶದಾದ್ಯಂತ ಇರುವ ರೈತರಿಗೆ ನರವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.</p>.<p class="content">ಮಹಾರಾಷ್ಟ್ರ ಹಾಗೂ ಬಿಹಾರ ನಡುವೆ ದೇಶದ ಮೊದಲ ಕಿಸಾನ್ ರೈಲು ಆರಂಭವಾಗಿದೆ. ಈ ಬಗ್ಗೆ ಮಾತನಾಡಿರುವ ಪ್ರಧಾನಿ ಮೋದಿ,‘ದೇಶದ ಅತಿಸಣ್ಣ ರೈತರನ್ನೂ ಒಳಗೊಂಡಂತೆ 2 ದಿನಗಳ ಹಿಂದೆ ದೊಡ್ಡ ಯೋಜನೆಯನ್ನು ಆರಂಭಿಸಲಾಗಿದೆ. ಮಹಾರಾಷ್ಟ್ರ ಹಾಗೂ ಬಿಹಾರ ರಾಜ್ಯಗಳ ನಡುವೆ ಕಿಸಾನ್ ರೈಲು ಸಂಚಾರ ಆರಂಭವಾಗಿದೆ’ ಎಂದು ತಿಳಿಸಿದ್ದಾರೆ.</p>.<p>‘ರೈತರು ಮುಂಬೈ ಮತ್ತು ಪುಣೆ ನಗರಗಳೊಂದಿಗೆ ನೇರವಾಗಿ ಸಂಪರ್ಕ ಸಾಧಿಸಲಿದ್ದಾರೆ. ಈ ರೈಲು ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶದ ಮೂಲಕ ಹಾದುಹೋಗುವುದರಿಂದ ಅಲ್ಲಿನ ರೈತರಿಗೂ ನೆರವಾಗಲಿದೆ. ಇದು ಹವಾನಿಯಂತ್ರಿತ ರೈಲು ಆಗಿದ್ದು, ತರಕಾರಿ ಪದಾರ್ಥಗಳನ್ನು ಸಂಗ್ರಹಿಸಿಡಲು ಶೈತ್ಯಾಗರ ವ್ಯವಸ್ಥೆಯನ್ನೂ ಹೊಂದಿದೆ. ಟ್ರಕ್ಗಳಿಗೆ ಹೋಲಿಸಿದರೆ ರೈಲಿನ ಶುಲ್ಕವೂ ಕಡಿಮೆ’ ಎಂದಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/district/belagavi/flag-off-for-first-kisan-rail-751443.html" target="_blank">ದೇಶದ ಮೊದಲ ಕಿಸಾನ್ ರೈಲಿಗೆ ಚಾಲನೆ</a></p>.<p>ದೇಶದ ಮೊಟ್ಟ ಮೊದಲ ಕಿಸಾನ್ ರೈಲು ಸಂಚಾರಕ್ಕೆ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹಾಗೂ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರು ಶುಕ್ರವಾರ ಹಸಿರುನಿಶಾನೆ ತೋರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>