ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸೆ. 17 ರಂದು ಹೈದರಾಬಾದ್‌ ವಿಮೋಚನಾ ದಿನಾಚರಣೆ: ಕೇಂದ್ರದ ನಿರ್ಧಾರಕ್ಕೆ ಶ್ಲಾಘನೆ

Published 13 ಮಾರ್ಚ್ 2024, 15:59 IST
Last Updated 13 ಮಾರ್ಚ್ 2024, 15:59 IST
ಅಕ್ಷರ ಗಾತ್ರ

ಹೈದರಾಬಾದ್‌: ಪ್ರತಿವರ್ಷ ಸೆಪ್ಟೆಂಬರ್‌ 17ನ್ನು ‘ಹೈದರಾಬಾದ್‌ ವಿಮೋಚನಾ ದಿನಾಚರಣೆ’ಯನ್ನಾಗಿ ಆಚರಿಸಲು ಕೇಂದ್ರ ಗೃಹ ಸಚಿವಾಲಯ ಅಧಿಸೂಚನೆಯನ್ನು  ಹೊರಡಿಸಿದೆ.

ಕೇಂದ್ರ ಸಚಿವ ಮತ್ತು ತೆಲಂಗಾಣ ಬಿಜೆಪಿ ಅಧ್ಯಕ್ಷ ಜಿ. ಕಿಶನ್‌ ರೆಡ್ಡಿ ಮತ್ತು ಮಹಾರಾಷ್ಟ್ರದ ಮಾಜಿ ರಾಜ್ಯಪಾಲ ಸಿ. ವಿದ್ಯಾಸಾಗರ್‌ ರಾವ್‌ ಅವರು ಈ ನಿರ್ಧಾರವನ್ನು ಶ್ಲಾಘಿಸಿದ್ದಾರೆ.

ಈ ನಿರ್ಧಾರವನ್ನು ಕೈಗೊಂಡ ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ ಕಿಶನ್‌ ರೆಡ್ಡಿ ಮತ್ತು ವಿದ್ಯಾಸಾಗರ್‌ ಅವರು ಧನ್ಯವಾದ ತಿಳಿಸಿದ್ದಾರೆ.

‘ಕೇಂದ್ರ ಸರ್ಕಾರದ ಈ ನಿರ್ಧಾರವು ತೆಲಂಗಾಣದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಮಾಡಿವರಿಗೆ ಸಲ್ಲಿಸಿದ ಗೌರವವಾಗಿದೆ’ ಎಂದು ಕಿಶನ್‌ ರೆಡ್ಡಿ ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT