‘ಕಿಶ್ತ್ವಾಡ ಪ್ರದೇಶದಲ್ಲಿ ವಾಸವಿದ್ದು, ಭಾರತ–ಪಾಕಿಸ್ತಾನ ಗಡಿಯುದ್ದಕ್ಕೂ ಉಗ್ರ ಚಟುವಟಿಕೆ ನಡೆಸುತ್ತಿದ್ದ 23 ಭಯೋತ್ಪಾದಕರ ವಿರುದ್ಧ ಜಮ್ಮುವಿನ ವಿಶೇಷ ಎನ್ಐಎ ನ್ಯಾಯಾಲಯವು ಏ.26ರಂದು ಜಾಮೀನುರಹಿತ ವಾರೆಂಟ್ ಜಾರಿ ಮಾಡಿತ್ತು. ಇದಕ್ಕೂ ಮೊದಲು 13 ಭಯೋತ್ಪಾದಕರ ಮೇಲೆ ಇಂಥದ್ದೆ ವಾರೆಂಟ್ ಜಾರಿ ಮಾಡಲಾಗಿತ್ತು’ ಎಂದು ಮಾಹಿತಿ ನೀಡಿದರು.