<p><strong>ಕೋಲ್ಕತ್ತ</strong>: ನಗರದ ಕಾನೂನು ಕಾಲೇಜು ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಚಿಸಿದ್ದ ನಾಲ್ವರು ಸದಸ್ಯರ 'ಸತ್ಯಶೋಧನಾ ತಂಡ‘ ನಗರಕ್ಕೆ ಆಗಮಿಸಿದೆ.</p><p>ತಂಡದಲ್ಲಿ ಮಾಜಿ ಕೇಂದ್ರ ಸಚಿವರಾದ ಸತ್ಪಾಲ್ ಸಿಂಗ್, ಮೀನಾಕ್ಷಿ ಲೇಖಿ ಮತ್ತು ಸಂಸದರಾದ ಬಿಪ್ಲಬ್ ಕುಮಾರ್ ದೇಬ್ ಹಾಗೂ ಮನನ್ ಕುಮಾರ್ ಮಿಶ್ರಾ ಇದ್ದಾರೆ.</p><p>ಮಹಿಳಾ ಮುಖ್ಯಮಂತ್ರಿ ಆಡಳಿತ ನಡೆಸುತ್ತಿರುವ ರಾಜ್ಯದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಪಶ್ಚಿಮ ಬಂಗಾಳ ರಾಜ್ಯವು ಕಾಲೇಜುಗಳು ಮತ್ತು ವೈದ್ಯಕೀಯ ಕಾಲೇಜುಗಳಲ್ಲಿ ಒಂದರ ನಂತರ ಒಂದರಂತೆ ಭೀಕರ ಘಟನೆಗಳಿಗೆ ಸಾಕ್ಷಿಯಾಗಿದೆ ಎಂದು ದೇಬ್ ಹೇಳಿದ್ದಾರೆ.</p>.ತೆಲಂಗಾಣ | ಔಷಧ ಕಾರ್ಖಾನೆಯಲ್ಲಿ ಸ್ಫೋಟ: 13 ಮಂದಿ ಸಾವು.₹100 ಕೋಟಿ ದಾಟಿದ ಅಮೀರ್ ಖಾನ್ ಅಭಿನಯದ 'ಸಿತಾರೆ ಜಮೀನ್ ಪರ್' . <p>‘ಪಶ್ಚಿಮ ಬಂಗಾಳದಲ್ಲಿ ಮಹಿಳೆಯರು ಸುರಕ್ಷಿತವಾಗಿಲ್ಲ, ಕಾನೂನು ವಿದ್ಯಾರ್ಥಿನಿಯೂ ಸಹ‘ ಎಂದು ಅವರು ಕಿಡಿಕಾರಿದ್ದಾರೆ </p><p>ದಕ್ಷಿಣ ಕೋಲ್ಕತ್ತ ಕಾನೂನು ಕಾಲೇಜಿಗೆ ಭೇಟಿ ನೀಡಲು ಮತ್ತು ಮುಖ್ಯ ಕಾರ್ಯದರ್ಶಿಯೊಂದಿಗೆ ವಿಚಾರಣೆ ನಡೆಸಲು ತಂಡಕ್ಕೆ ಅನುಮತಿ ಸಿಗಲಿಲ್ಲ ಎಂದು ದೇಬ್ ಆರೋಪಿಸಿದ್ದಾರೆ.</p><p>ಭೇಟಿ ಬಳಿಕ ಸತ್ಯಶೋಧನಾ ತಂಡವು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ವರದಿ ಸಲ್ಲಿಸಲಿದೆ.</p>.ಇನ್ಮುಂದೆ ರೈಲು ಟಿಕೆಟ್ ಬುಕಿಂಗ್ ವೇಳೆ ಸೀಟ್ ಆಯ್ಕೆ! 8ಗಂಟೆ ಮೊದಲೇ ಚಾರ್ಟ್ ರೆಡಿ.ಉತ್ತರಪ್ರದೇಶ: ಮೋಸ್ಟ್ ವಾಂಟೆಡ್ ಹೈವೇ ದರೋಡೆಕೋರ ಪೊಲೀಸ್ ಎನ್ಕೌಂಟರ್ಗೆ ಬಲಿ. <p>ಜೂನ್ 25 ರಂದು ದಕ್ಷಿಣ ಕೋಲ್ಕತ್ತ ಕಾನೂನು ಕಾಲೇಜು ಕಸ್ಬಾ ಕ್ಯಾಂಪಸ್ನಲ್ಲಿ ಈ ಘಟನೆ ನಡೆದಿದೆ. ಬಂಧಿತ ಮೂವರಲ್ಲಿ ಇಬ್ಬರು ಅದೇ ಕಾಲೇಜಿನ ವಿದ್ಯಾರ್ಥಿಗಳಾಗಿದ್ದು, ಒಬ್ಬ ಹಳೆಯ ವಿದ್ಯಾರ್ಥಿ ಎಂದು ತಿಳಿದು ಬಂದಿದೆ.</p><p>ಪ್ರಕರಣದ ಪ್ರಮುಖ ಆರೋಪಿಯಾಗಿರುವ ಕಾಲೇಜಿನ ಹಳೆಯ ವಿದ್ಯಾರ್ಥಿಯು ಅದೇ ಕಾಲೇಜಿನಲ್ಲಿ ಗುತ್ತಿಗೆ ಆಧಾರದಲ್ಲಿ ಬೋಧಕೇತರ ಸಿಬ್ಬಂದಿಯಾಗಿದ್ದ. ಅಲ್ಲದೇ, ಅಲಿಪೋರ್ ಪೊಲೀಸ್ ಹಾಗೂ ಸೆಷನ್ ಕೋರ್ಟ್ನಲ್ಲಿ ಕ್ರಿಮಿನಲ್ ವಕೀಲನಾಗಿ ಕಾರ್ಯನಿರ್ವಹಿಸುತ್ತಿದ್ದಾನೆಂದು ಕಾಲೇಜು ಮೂಲಗಳು ತಿಳಿಸಿವೆ.</p> .ಟ್ರಂಪ್, ನೆತನ್ಯಾಹು ಪಶ್ಚಾತ್ತಾಪ ಪಡುವಂತೆ ಮಾಡಿ: ಇರಾನ್ ಧರ್ಮಗುರು ಫತ್ವಾ.ಎಐಎಡಿಎಂಕೆ ಪಕ್ಷದ ಮೇಲೆ ಯಾರೂ ಪ್ರಾಬಲ್ಯ ಸಾಧಿಸಲಾಗದು; ಎಡಪ್ಪಾಡಿ ಪಳನಿಸ್ವಾಮಿ.ಮಣಿಪುರ: ನಿಷೇಧಿತ ಸಂಘಟನೆಗಳ ಮೂವರು ಉಗ್ರರ ಬಂಧನ .ಉತ್ತರಾಖಂಡದಲ್ಲಿ ತಗ್ಗಿದ ಮಳೆ: ಚಾರ್ಧಾಮ್ ಯಾತ್ರೆ ಪುನರಾರಂಭ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ</strong>: ನಗರದ ಕಾನೂನು ಕಾಲೇಜು ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಚಿಸಿದ್ದ ನಾಲ್ವರು ಸದಸ್ಯರ 'ಸತ್ಯಶೋಧನಾ ತಂಡ‘ ನಗರಕ್ಕೆ ಆಗಮಿಸಿದೆ.</p><p>ತಂಡದಲ್ಲಿ ಮಾಜಿ ಕೇಂದ್ರ ಸಚಿವರಾದ ಸತ್ಪಾಲ್ ಸಿಂಗ್, ಮೀನಾಕ್ಷಿ ಲೇಖಿ ಮತ್ತು ಸಂಸದರಾದ ಬಿಪ್ಲಬ್ ಕುಮಾರ್ ದೇಬ್ ಹಾಗೂ ಮನನ್ ಕುಮಾರ್ ಮಿಶ್ರಾ ಇದ್ದಾರೆ.</p><p>ಮಹಿಳಾ ಮುಖ್ಯಮಂತ್ರಿ ಆಡಳಿತ ನಡೆಸುತ್ತಿರುವ ರಾಜ್ಯದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಪಶ್ಚಿಮ ಬಂಗಾಳ ರಾಜ್ಯವು ಕಾಲೇಜುಗಳು ಮತ್ತು ವೈದ್ಯಕೀಯ ಕಾಲೇಜುಗಳಲ್ಲಿ ಒಂದರ ನಂತರ ಒಂದರಂತೆ ಭೀಕರ ಘಟನೆಗಳಿಗೆ ಸಾಕ್ಷಿಯಾಗಿದೆ ಎಂದು ದೇಬ್ ಹೇಳಿದ್ದಾರೆ.</p>.ತೆಲಂಗಾಣ | ಔಷಧ ಕಾರ್ಖಾನೆಯಲ್ಲಿ ಸ್ಫೋಟ: 13 ಮಂದಿ ಸಾವು.₹100 ಕೋಟಿ ದಾಟಿದ ಅಮೀರ್ ಖಾನ್ ಅಭಿನಯದ 'ಸಿತಾರೆ ಜಮೀನ್ ಪರ್' . <p>‘ಪಶ್ಚಿಮ ಬಂಗಾಳದಲ್ಲಿ ಮಹಿಳೆಯರು ಸುರಕ್ಷಿತವಾಗಿಲ್ಲ, ಕಾನೂನು ವಿದ್ಯಾರ್ಥಿನಿಯೂ ಸಹ‘ ಎಂದು ಅವರು ಕಿಡಿಕಾರಿದ್ದಾರೆ </p><p>ದಕ್ಷಿಣ ಕೋಲ್ಕತ್ತ ಕಾನೂನು ಕಾಲೇಜಿಗೆ ಭೇಟಿ ನೀಡಲು ಮತ್ತು ಮುಖ್ಯ ಕಾರ್ಯದರ್ಶಿಯೊಂದಿಗೆ ವಿಚಾರಣೆ ನಡೆಸಲು ತಂಡಕ್ಕೆ ಅನುಮತಿ ಸಿಗಲಿಲ್ಲ ಎಂದು ದೇಬ್ ಆರೋಪಿಸಿದ್ದಾರೆ.</p><p>ಭೇಟಿ ಬಳಿಕ ಸತ್ಯಶೋಧನಾ ತಂಡವು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ವರದಿ ಸಲ್ಲಿಸಲಿದೆ.</p>.ಇನ್ಮುಂದೆ ರೈಲು ಟಿಕೆಟ್ ಬುಕಿಂಗ್ ವೇಳೆ ಸೀಟ್ ಆಯ್ಕೆ! 8ಗಂಟೆ ಮೊದಲೇ ಚಾರ್ಟ್ ರೆಡಿ.ಉತ್ತರಪ್ರದೇಶ: ಮೋಸ್ಟ್ ವಾಂಟೆಡ್ ಹೈವೇ ದರೋಡೆಕೋರ ಪೊಲೀಸ್ ಎನ್ಕೌಂಟರ್ಗೆ ಬಲಿ. <p>ಜೂನ್ 25 ರಂದು ದಕ್ಷಿಣ ಕೋಲ್ಕತ್ತ ಕಾನೂನು ಕಾಲೇಜು ಕಸ್ಬಾ ಕ್ಯಾಂಪಸ್ನಲ್ಲಿ ಈ ಘಟನೆ ನಡೆದಿದೆ. ಬಂಧಿತ ಮೂವರಲ್ಲಿ ಇಬ್ಬರು ಅದೇ ಕಾಲೇಜಿನ ವಿದ್ಯಾರ್ಥಿಗಳಾಗಿದ್ದು, ಒಬ್ಬ ಹಳೆಯ ವಿದ್ಯಾರ್ಥಿ ಎಂದು ತಿಳಿದು ಬಂದಿದೆ.</p><p>ಪ್ರಕರಣದ ಪ್ರಮುಖ ಆರೋಪಿಯಾಗಿರುವ ಕಾಲೇಜಿನ ಹಳೆಯ ವಿದ್ಯಾರ್ಥಿಯು ಅದೇ ಕಾಲೇಜಿನಲ್ಲಿ ಗುತ್ತಿಗೆ ಆಧಾರದಲ್ಲಿ ಬೋಧಕೇತರ ಸಿಬ್ಬಂದಿಯಾಗಿದ್ದ. ಅಲ್ಲದೇ, ಅಲಿಪೋರ್ ಪೊಲೀಸ್ ಹಾಗೂ ಸೆಷನ್ ಕೋರ್ಟ್ನಲ್ಲಿ ಕ್ರಿಮಿನಲ್ ವಕೀಲನಾಗಿ ಕಾರ್ಯನಿರ್ವಹಿಸುತ್ತಿದ್ದಾನೆಂದು ಕಾಲೇಜು ಮೂಲಗಳು ತಿಳಿಸಿವೆ.</p> .ಟ್ರಂಪ್, ನೆತನ್ಯಾಹು ಪಶ್ಚಾತ್ತಾಪ ಪಡುವಂತೆ ಮಾಡಿ: ಇರಾನ್ ಧರ್ಮಗುರು ಫತ್ವಾ.ಎಐಎಡಿಎಂಕೆ ಪಕ್ಷದ ಮೇಲೆ ಯಾರೂ ಪ್ರಾಬಲ್ಯ ಸಾಧಿಸಲಾಗದು; ಎಡಪ್ಪಾಡಿ ಪಳನಿಸ್ವಾಮಿ.ಮಣಿಪುರ: ನಿಷೇಧಿತ ಸಂಘಟನೆಗಳ ಮೂವರು ಉಗ್ರರ ಬಂಧನ .ಉತ್ತರಾಖಂಡದಲ್ಲಿ ತಗ್ಗಿದ ಮಳೆ: ಚಾರ್ಧಾಮ್ ಯಾತ್ರೆ ಪುನರಾರಂಭ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>