<p><strong>ಕೋಲ್ಕತ್ತ</strong>: ಸೆಪ್ಟೆಂಬರ್ ತಿಂಗಳಾಂತ್ಯದವರೆಗೆ ಅಥವಾ ಮುಂದಿನ ಆದೇಶದವರೆಗೆ ಪಶ್ಚಿಮ ಬಂಗಾಳದ ಸರ್ಕಾರಿ ಪ್ರಾಯೋಜಿತ ಹಾಗೂ ಅನುದಾನಿತ ಪ್ರಾಥಮಿಕ ಶಾಲೆಗಳ ಸುಮಾರು 32 ಸಾವಿರ ಶಿಕ್ಷಕರನ್ನು ವಜಾಗೊಳಿಸಿ ಏಕಸದಸ್ಯ ಪೀಠವು ನೀಡಿದ್ದ ಆದೇಶಕ್ಕೆ ಕಲ್ಕತ್ತಾ ಹೈಕೋರ್ಟ್ ಶುಕ್ರವಾರ ಮಧ್ಯಂತರ ತಡೆ ನೀಡಿದೆ.</p>.<p>2014ರ ಶಿಕ್ಷಕರ ಅರ್ಹತಾ ಪರೀಕ್ಷೆ ಆಧಾರದ ಮೇಲೆ, 2016ರಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರಾಗಿ ನೇಮಕಗೊಂಡ, ತರಬೇತಿ ಪೂರ್ಣಗೊಳಿಸದ ಸುಮಾರು 32 ಸಾವಿರ ಶಿಕ್ಷಕರನ್ನು ವಜಾಗೊಳಿಸಿ ಏಕಸದಸ್ಯ ಪೀಠವು ಮೇ 12ರಂದು ಆದೇಶ ಹೊರಡಿಸಿತ್ತು.</p>.<p>ಆದರೆ ಈ ಆದೇಶಕ್ಕೆ ನ್ಯಾಯಮೂರ್ತಿಗಳಾದ ಸುಬ್ರತಾ ತಾಲೂಕ್ದಾರ್ ಹಾಗೂ ಸುಪ್ರತಿಮ್ ಭಟ್ಟಾಚಾರ್ಯ ಅವರಿದ್ದ ವಿಭಾಗೀಯ ಪೀಠವು ತಡೆಯಾಜ್ಞೆ ನೀಡಿದೆ.</p>.<p>‘ಪಶ್ಚಿಮ ಬಂಗಾಳ ಪ್ರಾಥಮಿಕ ಶಿಕ್ಷಣ ಮಂಡಳಿ ಹಾಗೂ ಕೆಲವು ಬಾಧಿತ ಶಿಕ್ಷಕರು ಸಲ್ಲಿಸಿದ ಅರ್ಜಿಯ ಆಧಾರ ಮೇಲೆ, ತಮ್ಮ ಸಮರ್ಥನೆಗೂ ನ್ಯಾಯಯುತ ಅವಕಾಶ ಕೊಡದೇ ಶಿಕ್ಷಕರನ್ನು ವಜಾಗೊಳಿಸಿರುವ ಪ್ರಕ್ರಿಯೆಯು ನ್ಯಾಯಾಂಗದ ಮಧ್ಯಸ್ಥಿಕೆಯನ್ನು ಕೋರುತ್ತದೆ’ ಎಂದು ವಿಭಾಗೀಯ ಪೀಠ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ</strong>: ಸೆಪ್ಟೆಂಬರ್ ತಿಂಗಳಾಂತ್ಯದವರೆಗೆ ಅಥವಾ ಮುಂದಿನ ಆದೇಶದವರೆಗೆ ಪಶ್ಚಿಮ ಬಂಗಾಳದ ಸರ್ಕಾರಿ ಪ್ರಾಯೋಜಿತ ಹಾಗೂ ಅನುದಾನಿತ ಪ್ರಾಥಮಿಕ ಶಾಲೆಗಳ ಸುಮಾರು 32 ಸಾವಿರ ಶಿಕ್ಷಕರನ್ನು ವಜಾಗೊಳಿಸಿ ಏಕಸದಸ್ಯ ಪೀಠವು ನೀಡಿದ್ದ ಆದೇಶಕ್ಕೆ ಕಲ್ಕತ್ತಾ ಹೈಕೋರ್ಟ್ ಶುಕ್ರವಾರ ಮಧ್ಯಂತರ ತಡೆ ನೀಡಿದೆ.</p>.<p>2014ರ ಶಿಕ್ಷಕರ ಅರ್ಹತಾ ಪರೀಕ್ಷೆ ಆಧಾರದ ಮೇಲೆ, 2016ರಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರಾಗಿ ನೇಮಕಗೊಂಡ, ತರಬೇತಿ ಪೂರ್ಣಗೊಳಿಸದ ಸುಮಾರು 32 ಸಾವಿರ ಶಿಕ್ಷಕರನ್ನು ವಜಾಗೊಳಿಸಿ ಏಕಸದಸ್ಯ ಪೀಠವು ಮೇ 12ರಂದು ಆದೇಶ ಹೊರಡಿಸಿತ್ತು.</p>.<p>ಆದರೆ ಈ ಆದೇಶಕ್ಕೆ ನ್ಯಾಯಮೂರ್ತಿಗಳಾದ ಸುಬ್ರತಾ ತಾಲೂಕ್ದಾರ್ ಹಾಗೂ ಸುಪ್ರತಿಮ್ ಭಟ್ಟಾಚಾರ್ಯ ಅವರಿದ್ದ ವಿಭಾಗೀಯ ಪೀಠವು ತಡೆಯಾಜ್ಞೆ ನೀಡಿದೆ.</p>.<p>‘ಪಶ್ಚಿಮ ಬಂಗಾಳ ಪ್ರಾಥಮಿಕ ಶಿಕ್ಷಣ ಮಂಡಳಿ ಹಾಗೂ ಕೆಲವು ಬಾಧಿತ ಶಿಕ್ಷಕರು ಸಲ್ಲಿಸಿದ ಅರ್ಜಿಯ ಆಧಾರ ಮೇಲೆ, ತಮ್ಮ ಸಮರ್ಥನೆಗೂ ನ್ಯಾಯಯುತ ಅವಕಾಶ ಕೊಡದೇ ಶಿಕ್ಷಕರನ್ನು ವಜಾಗೊಳಿಸಿರುವ ಪ್ರಕ್ರಿಯೆಯು ನ್ಯಾಯಾಂಗದ ಮಧ್ಯಸ್ಥಿಕೆಯನ್ನು ಕೋರುತ್ತದೆ’ ಎಂದು ವಿಭಾಗೀಯ ಪೀಠ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>