<p><strong>ಕೋಲ್ಕತ್ತ</strong>: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ (ಎಸ್ಐಆರ್) ಅರ್ಜಿ ನಮೂನೆ ಸಿಗದ ಕಾರಣ ಭಯಗೊಂಡು ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ 27 ವರ್ಷದ ಮಹಿಳೆಯೊಬ್ಬರು ತಮ್ಮ ಮಗಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಆಕೆಯ ಕುಟುಂಬವು ಆರೋಪಿಸಿದೆ.</p>.<p>‘ಶನಿವಾರ ಆತ್ಮಹತ್ಯೆಗೆ ಯತ್ನಿಸಿದ್ದು, ತಾಯಿ ಮತ್ತು ಮಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರ ದೇಹ ಸ್ಥಿತಿ ಗಂಭೀರವಾಗಿದೆ. ಪ್ರಕರಣದ ಕುರಿತು ತನಿಖೆ ಪ್ರಗತಿಯಲ್ಲಿದೆ’ ಎಂದು ಪೊಲೀಸರು ತಿಳಿಸಿದರು.</p>.<p>‘ಎಸ್ಐಆರ್ ಅರ್ಜಿ ನಮೂನೆಯು ಕುಟುಂಬದ ಇತರರಿಗೆ ಲಭ್ಯವಾಗಿತ್ತು. ಆಕೆಗೆ ಮಾತ್ರ ಸಿಕ್ಕಿರಲಿಲ್ಲ. ಹೀಗಾಗಿ ಆಕೆ ಒತ್ತಡಕ್ಕೆ ಒಳಗಾಗಿದ್ದಳು’ ಎಂದು ಮಹಿಳೆಯ ತಂದೆ ತಿಳಿಸಿದರು.</p>.<p>‘ಆಕೆಯ ಬಳಿ ಯಾವುದೇ ದಾಖಲೆಗಳು ಇರಲಿಲ್ಲ. ಹೀಗಾಗಿ ತನ್ನನ್ನು ಗಡೀಪಾರು ಮಾಡಬಹುದು ಎಂದು ಭಯಗೊಂಡಿದ್ದಳು. ಇದರಿಂದ ಕಂಗಾಲಾಗಿ ಮಗಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ’ ಎಂದು ಹೇಳಿದರು.</p>.<p>ಘಟನೆ ಬೆನ್ನಲ್ಲೇ, ಕಾಂಗ್ರೆಸ್ ಶಾಸಕಿ ಆಸೀಮಾ ಪಾತ್ರಾ ಅವರು, ‘ಎನ್ಆರ್ಸಿ ಕುರಿತು ಇಲ್ಲಸಲ್ಲದ ಹೇಳಿಕೆ ನೀಡುವ ಮೂಲಕ ಬಿಜೆಪಿಯು ಜನರಲ್ಲಿ ಭಯವನ್ನು ಹುಟ್ಟಸುತ್ತಿದೆ’ ಎಂದು ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ</strong>: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ (ಎಸ್ಐಆರ್) ಅರ್ಜಿ ನಮೂನೆ ಸಿಗದ ಕಾರಣ ಭಯಗೊಂಡು ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ 27 ವರ್ಷದ ಮಹಿಳೆಯೊಬ್ಬರು ತಮ್ಮ ಮಗಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಆಕೆಯ ಕುಟುಂಬವು ಆರೋಪಿಸಿದೆ.</p>.<p>‘ಶನಿವಾರ ಆತ್ಮಹತ್ಯೆಗೆ ಯತ್ನಿಸಿದ್ದು, ತಾಯಿ ಮತ್ತು ಮಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರ ದೇಹ ಸ್ಥಿತಿ ಗಂಭೀರವಾಗಿದೆ. ಪ್ರಕರಣದ ಕುರಿತು ತನಿಖೆ ಪ್ರಗತಿಯಲ್ಲಿದೆ’ ಎಂದು ಪೊಲೀಸರು ತಿಳಿಸಿದರು.</p>.<p>‘ಎಸ್ಐಆರ್ ಅರ್ಜಿ ನಮೂನೆಯು ಕುಟುಂಬದ ಇತರರಿಗೆ ಲಭ್ಯವಾಗಿತ್ತು. ಆಕೆಗೆ ಮಾತ್ರ ಸಿಕ್ಕಿರಲಿಲ್ಲ. ಹೀಗಾಗಿ ಆಕೆ ಒತ್ತಡಕ್ಕೆ ಒಳಗಾಗಿದ್ದಳು’ ಎಂದು ಮಹಿಳೆಯ ತಂದೆ ತಿಳಿಸಿದರು.</p>.<p>‘ಆಕೆಯ ಬಳಿ ಯಾವುದೇ ದಾಖಲೆಗಳು ಇರಲಿಲ್ಲ. ಹೀಗಾಗಿ ತನ್ನನ್ನು ಗಡೀಪಾರು ಮಾಡಬಹುದು ಎಂದು ಭಯಗೊಂಡಿದ್ದಳು. ಇದರಿಂದ ಕಂಗಾಲಾಗಿ ಮಗಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ’ ಎಂದು ಹೇಳಿದರು.</p>.<p>ಘಟನೆ ಬೆನ್ನಲ್ಲೇ, ಕಾಂಗ್ರೆಸ್ ಶಾಸಕಿ ಆಸೀಮಾ ಪಾತ್ರಾ ಅವರು, ‘ಎನ್ಆರ್ಸಿ ಕುರಿತು ಇಲ್ಲಸಲ್ಲದ ಹೇಳಿಕೆ ನೀಡುವ ಮೂಲಕ ಬಿಜೆಪಿಯು ಜನರಲ್ಲಿ ಭಯವನ್ನು ಹುಟ್ಟಸುತ್ತಿದೆ’ ಎಂದು ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>