ತಿರುವನಂತಪುರಂ: ಶಬರಿಮಲೆಗೆ ಪ್ರವೇಶಿಸುವ ಮಹಿಳೆಯರ ದೇಹವನ್ನು ಎರಡು ಭಾಗವಾಗಿ ಸೀಳಬೇಕು ಎಂದು ಮಲಯಾಳಂ ಸಿನಿಮಾ ನಟ ಕೊಲ್ಲಂ ತುಳಸಿ ಹೇಳಿದ್ದಾರೆ.ಕೊಲ್ಲಂ ಜಿಲ್ಲೆಯ ಚವರ ಎಂಬಲ್ಲಿ ನಡೆದ ವಿಶ್ವಾಸ ಸಂರಕ್ಷಣಾ ಜಾಥಾದಲ್ಲಿ ತುಳಸಿ ಈ ರೀತಿ ಗುಡುಗಿದ್ದಾರೆ.
ಶಬರಿಮಲೆಗೆ ಹೋಗುವ ಮಹಿಳೆಯರನ್ನು ಎರಡಾಗಿ ಸೀಳಿ ಒಂದು ಭಾಗವನ್ನು ದೆಹಲಿಗೂ ಇನ್ನೊಂದು ಭಾಗವನ್ನು ಪಿಣರಾಯಿ ವಿಜಯನ್ ಅವರ ಕೋಣೆಗೆ ಕಳಿಸಿಕೊಡಬೇಕು. ಶಬರಿಮಲೆಯಲ್ಲಿ ಮಹಿಳೆಯರಿಗೆ ಪ್ರವೇಶ ನೀಡಿದ ನ್ಯಾಯಮೂರ್ತಿಗಳು ಮೂಢರು ಎಂದು ತುಳಸಿ ಹೇಳಿದ್ದಾರೆ.