ನವದೆಹಲಿ: ನಕ್ಸಲರಿಗೆ ನೆರವು ಮತ್ತುಭೀಮಾ ಕೋರೆಗಾಂವ್ ಹಿಂಸಾಚಾರಕ್ಕೆ ಕುಮ್ಮಕ್ಕು ನೀಡಿದ ಆರೋಪದ ಮೇಲೆ ಬಂಧಿತರಾಗಿದ್ದ ಐವರುಸಾಮಾಜಿಕ ಹೋರಾಟಗಾರರ ಪೈಕಿ ಗೌತಮ್ ನವಲಖಾ ಒಬ್ಬರನ್ನುದೆಹಲಿ ಹೈಕೋರ್ಟ್ ಸೋಮವಾರ ಗೃಹ ಬಂಧನದಿಂದ ಬಿಡುಗಡೆಗೊಳಿಸಿದೆ.
ಸಾಮಾಜಿಕ ಕಾರ್ಯಕರ್ತರಾದ ಕವಿ ವರವರ ರಾವ್, ಅರುಣ್ ಪೆರೇರಾ, ವರ್ನನ್ ಗೊನ್ಸಾಲ್ವೆಸ್, ಸುಧಾ ಭಾರದ್ವಾಜ್ ಮತ್ತು ಗೌತಮ್ ನವ್ಲೇಖಾ ಅವರನ್ನು ಆಗಸ್ಟ್ 29ರಂದು ಬಂಧಿಸಲಾಗಿತ್ತು. ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಬಳಿಕ ಇವರನ್ನು ಗೃಹ ಬಂಧನಕ್ಕೆ ಕಳುಹಿಸಲಾಗಿತ್ತು. ಐವರು ಬಂಧಿತರನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಎಂಬ ಕೋರಿಕೆಯನ್ನೂ ಪೀಠವು ತಿರಸ್ಕರಿಸಿತ್ತು.