ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಟಾ: ಶಿವರಾತ್ರಿ ವೇಳೆ ವಿದ್ಯುದಾಘಾತ– ಗಾಯಗೊಂಡಿದ್ದ ಬಾಲಕ ಸಾವು

Published 10 ಮಾರ್ಚ್ 2024, 14:50 IST
Last Updated 10 ಮಾರ್ಚ್ 2024, 14:50 IST
ಅಕ್ಷರ ಗಾತ್ರ

ಕೋಟಾ (ರಾಜಸ್ಥಾನ): ಶಿವರಾತ್ರಿ ಸಂದರ್ಭದಲ್ಲಿ ‘ಶಿವ ಭಾರತ’ ಮೆರವಣಿಗೆಯಲ್ಲಿ ಸಾಗುತ್ತಿದ್ದಾಗ ವಿದ್ಯುದಾಘಾತದಿಂದ ಗಂಭೀರವಾಗಿ ಗಾಯಗೊಂಡಿದದ ಬಾಲಕನೊಬ್ಬ ಮೃತಪಟ್ಟಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶುಗನ್ (13) ಮೃತ ಬಾಲಕ. ಗಾಯಗೊಂಡಿದ್ದ ನಾಲ್ವರು ಮಕ್ಕಳ ಸ್ಥಿತಿ ಇನ್ನೂ ಗಂಭೀರವಾಗಿದ್ದು, ಜೈಪುರದ ಎಸ್‌ಎಂಎಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದರು.

ಈ ಸಾವಿನ ಬೆನ್ನಲ್ಲೇ ಮೆರವಣಿಗೆ ಆಯೋಜಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸುಮಾರು 20 ಜನರು, 18 ಮಕ್ಕಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. 22 ಅಡಿ ಉದ್ದದ ಕಬ್ಬಿಣದ ಧ್ವಜಕಂಬವನ್ನು ಬಾಲಕನೊಬ್ಬ ಹಿಡಿದಿದ್ದ. ಆ ಧ್ವಜದ ಮೇಲ್ಭಾಗವು ಹೈ ಟೆನ್ಷನ್‌ ತಂತಿಗೆ ತಗುಲಿದಾಗ ವಿದ್ಯುದಾಘಾತವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT