<p><strong>ಕೊಟ್ಟಾಯಂ</strong>: ಕೇರಳದ ಕೊಟ್ಟಾಯಂನ ಸರ್ಕಾರಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಕಟ್ಟಡವೊಂದು ಕುಸಿದು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಗುರುವಾರ ಸಂಜೆ ನಡೆದಿದೆ. ಘಟನೆಯಲ್ಲಿ ಬಾಲಕಿ ಸೇರಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.</p><p>ಮೃತ ಮಹಿಳೆಯನ್ನು ತಳಯೋಲಾಪರಂಬುವಿನ ಬಿಂಧು (52) ಎಂದು ಗುರುತಿಸಲಾಗಿದೆ. ಅಲೀನಾ (11), ಅಮಲ್ ಪ್ರದೀಪ್ (20) ಜಿನು ಸಾಜಿ (38) ಗಾಯಾಳುಗಳು. ಸದ್ಯ ಗಾಯಾಳುಗಳು ಅದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಬಾಲಕಿ ಅಲಿನಾ ಹಾಗೂ ಜಿನು ಸಾಜಿ ಅವರ ಪರಿಸ್ಥಿತಿ ಗಂಭೀರವಾಗಿದೆ.</p><p>ಬಿಂಧು ಅವರು ಮೊಮ್ಮಗಳು ಅಲೀನಾ ಅಪಘಾತವೊಂದರಲ್ಲಿ ಗಾಯಗೊಂಡಿದ್ದಕ್ಕೆ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಇದೇ ವೇಳೆ ಅಮಲ್ ಪ್ರದೀಪ್, ಜಿನು ಸಾಜಿ ಎಂಬುವರು ಅದೇ ಕಟ್ಟಡದಲ್ಲಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.</p><p>ಕಟ್ಟಡ (ವಾರ್ಡುಗಳಿಗೆ ಹೊಂದಿಕೊಂಡಿದ್ದ ಟಾಯ್ಲೆಟ್ ಕಾಂಪ್ಲೆಕ್ಸ್) ಕುಸಿತಕ್ಕೆ ಕಾರಣ ತಿಳಿದು ಬಂದಿಲ್ಲ. ಆದರೆ, ಕುಸಿದ ಕಟ್ಟಡ ಹಲವು ದಶಕಗಳಷ್ಟು ಹಳೆಯದ್ದು ಎಂದು ಪೊಲೀಸರು ತಿಳಿಸಿದ್ದಾರೆ.</p><p>ಕಟ್ಟಡ ಕುಸಿದರೂ 2 ಗಂಟೆಗೂ ಹೆಚ್ಚು ನಿಧಾನವಾಗಿ ಪರಿಹಾರ ಕಾರ್ಯಾಚರಣೆ ಆರಂಭವಾಗಿದ್ದಕ್ಕೆ ಬಿಂಧು ಮೃತಪಟ್ಟಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ. ಘಟನೆಯನ್ನು ಖಂಡಿಸಿ ಸರ್ಕಾರವನ್ನು ವಿಪಕ್ಷಗಳು ತರಾಟೆಗೆ ತೆಗೆದುಕೊಂಡಿವೆ.</p><p>ಕಟ್ಟಡ ಕುಸಿದ ಸ್ಥಳಕ್ಕೆ ಆರೋಗ್ಯ ಸಚಿವೆ ವೀಣಾ ಜಾರ್ಜ್ ದೌಡಾಯಿಸಿ ಪರಿಹಾರ ಕಾರ್ಯಾಚರಣೆ ಬಿರುಸುಗೊಳಿಸುವಂತೆ ಆದೇಶಿಸಿದ್ದರು. ಘಟನೆಯ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.</p>.ತೆಲಂಗಾಣ ಕಾರ್ಖಾನೆ ಸ್ಫೋಟ: ಮೃತರ ಸಂಖ್ಯೆ 38ಕ್ಕೆ ಏರಿಕೆ; ಇನ್ನೂ 9 ಮಂದಿ ನಾಪತ್ತೆ.ತೆಲಂಗಾಣ ಸ್ಫೋಟ: ತಪ್ಪಿತಸ್ಥರ ವಿರುದ್ಧ ಕ್ರಮದ ಭರವಸೆ ನೀಡಿದ ಸಿಎಂ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಟ್ಟಾಯಂ</strong>: ಕೇರಳದ ಕೊಟ್ಟಾಯಂನ ಸರ್ಕಾರಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಕಟ್ಟಡವೊಂದು ಕುಸಿದು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಗುರುವಾರ ಸಂಜೆ ನಡೆದಿದೆ. ಘಟನೆಯಲ್ಲಿ ಬಾಲಕಿ ಸೇರಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.</p><p>ಮೃತ ಮಹಿಳೆಯನ್ನು ತಳಯೋಲಾಪರಂಬುವಿನ ಬಿಂಧು (52) ಎಂದು ಗುರುತಿಸಲಾಗಿದೆ. ಅಲೀನಾ (11), ಅಮಲ್ ಪ್ರದೀಪ್ (20) ಜಿನು ಸಾಜಿ (38) ಗಾಯಾಳುಗಳು. ಸದ್ಯ ಗಾಯಾಳುಗಳು ಅದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಬಾಲಕಿ ಅಲಿನಾ ಹಾಗೂ ಜಿನು ಸಾಜಿ ಅವರ ಪರಿಸ್ಥಿತಿ ಗಂಭೀರವಾಗಿದೆ.</p><p>ಬಿಂಧು ಅವರು ಮೊಮ್ಮಗಳು ಅಲೀನಾ ಅಪಘಾತವೊಂದರಲ್ಲಿ ಗಾಯಗೊಂಡಿದ್ದಕ್ಕೆ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಇದೇ ವೇಳೆ ಅಮಲ್ ಪ್ರದೀಪ್, ಜಿನು ಸಾಜಿ ಎಂಬುವರು ಅದೇ ಕಟ್ಟಡದಲ್ಲಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.</p><p>ಕಟ್ಟಡ (ವಾರ್ಡುಗಳಿಗೆ ಹೊಂದಿಕೊಂಡಿದ್ದ ಟಾಯ್ಲೆಟ್ ಕಾಂಪ್ಲೆಕ್ಸ್) ಕುಸಿತಕ್ಕೆ ಕಾರಣ ತಿಳಿದು ಬಂದಿಲ್ಲ. ಆದರೆ, ಕುಸಿದ ಕಟ್ಟಡ ಹಲವು ದಶಕಗಳಷ್ಟು ಹಳೆಯದ್ದು ಎಂದು ಪೊಲೀಸರು ತಿಳಿಸಿದ್ದಾರೆ.</p><p>ಕಟ್ಟಡ ಕುಸಿದರೂ 2 ಗಂಟೆಗೂ ಹೆಚ್ಚು ನಿಧಾನವಾಗಿ ಪರಿಹಾರ ಕಾರ್ಯಾಚರಣೆ ಆರಂಭವಾಗಿದ್ದಕ್ಕೆ ಬಿಂಧು ಮೃತಪಟ್ಟಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ. ಘಟನೆಯನ್ನು ಖಂಡಿಸಿ ಸರ್ಕಾರವನ್ನು ವಿಪಕ್ಷಗಳು ತರಾಟೆಗೆ ತೆಗೆದುಕೊಂಡಿವೆ.</p><p>ಕಟ್ಟಡ ಕುಸಿದ ಸ್ಥಳಕ್ಕೆ ಆರೋಗ್ಯ ಸಚಿವೆ ವೀಣಾ ಜಾರ್ಜ್ ದೌಡಾಯಿಸಿ ಪರಿಹಾರ ಕಾರ್ಯಾಚರಣೆ ಬಿರುಸುಗೊಳಿಸುವಂತೆ ಆದೇಶಿಸಿದ್ದರು. ಘಟನೆಯ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.</p>.ತೆಲಂಗಾಣ ಕಾರ್ಖಾನೆ ಸ್ಫೋಟ: ಮೃತರ ಸಂಖ್ಯೆ 38ಕ್ಕೆ ಏರಿಕೆ; ಇನ್ನೂ 9 ಮಂದಿ ನಾಪತ್ತೆ.ತೆಲಂಗಾಣ ಸ್ಫೋಟ: ತಪ್ಪಿತಸ್ಥರ ವಿರುದ್ಧ ಕ್ರಮದ ಭರವಸೆ ನೀಡಿದ ಸಿಎಂ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>