<p><strong>ತಿರುವನಂತಪುರ</strong>: ಕೇರಳದ ಕೊಟ್ಟಾಯಂನ ಸರ್ಕಾರಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಕಟ್ಟಡವೊಂದು ಕುಸಿದು ಮಹಿಳೆಯೊಬ್ಬರು ಮೃತಪಟ್ಟಿದ್ದ ಕುಟುಂಬಸ್ಥರನ್ನು ಆರೋಗ್ಯ ಸಚಿವೆ ವೀಣಾ ಜಾರ್ಜ್ ಭಾನುವಾರ ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ. </p><p>ಮೃತ ಮಹಿಳೆಯ (ಬಿಂದು) ಪತಿ, ತಾಯಿ ಮತ್ತು ಮಕ್ಕಳೊಂದಿಗೆ ವೀಣಾ ಜಾರ್ಜ್ ಮಾತುಕತೆ ನಡೆಸಿದರು. ಸರ್ಕಾರದಿಂದ ಎಲ್ಲಾ ಬೆಂಬಲವನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ.</p>.PSI ಎಂದು ಬರೋಬ್ಬರಿ 2 ವರ್ಷ ವಂಚಿಸಿದ್ದ ರಾಜಸ್ಥಾನದ ಮೋನಾ ಅಲಿಯಾಸ್ ‘ಮೂಲಿ’ ಬಂಧನ.ಸತತ 53 ದಿನ ಕಾರ್ಯಾಚರಣೆ ನಡೆಸಿ ನರಭಕ್ಷಕ ಹುಲಿ ಸೆರೆ ಹಿಡಿದ ಕೇರಳ ಅರಣ್ಯ ಇಲಾಖೆ. <p>ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಂದು ಅವರ ದುರಂತ ಸಾವು ಹೃದಯವಿದ್ರಾವಕ ಮತ್ತು ಅತ್ಯಂತ ನೋವಿನಿಂದ ಕೂಡಿದೆ. ಸರ್ಕಾರವು ಅವರೊಂದಿಗೆ ನಿಲ್ಲುತ್ತದೆ ಎಂದು ಹೇಳಿದ್ದಾರೆ.</p><p>ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಈಗಾಗಲೇ ಈ ಬಗ್ಗೆ ಮಾತನಾಡಿದ್ದಾರೆ. ಸಚಿವ ಸಂಪುಟದ ನಿರ್ಧಾರಗಳ ಆಧಾರದ ಮೇಲೆ ಕುಟುಂಬಕ್ಕೆ ಪರಿಹಾರ ಕ್ರಮಗಳನ್ನು ಘೋಷಿಸಲಾಗುವುದು ಎಂದು ಜಾರ್ಜ್ ತಿಳಿಸಿದ್ದಾರೆ.</p><p>ಕೊಟ್ಟಾಯಂನ ಸರ್ಕಾರಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಕಟ್ಟಡವೊಂದು ಕುಸಿದು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಗುರುವಾರ ಸಂಜೆ ನಡೆದಿತ್ತು. ಘಟನೆಯಲ್ಲಿ ಬಾಲಕಿ ಸೇರಿ ಮೂವರು ಗಂಭೀರವಾಗಿ ಗಾಯಗೊಂಡಿದ್ದರು.</p>.OBC ಸಲಹಾ ಮಂಡಳಿ ಸದಸ್ಯರಲ್ಲಿ ಸಿದ್ದರಾಮಯ್ಯ ಕೂಡಾ ಒಬ್ಬರು: CM ಸಚಿವಾಲಯ ಸ್ಪಷ್ಟನೆ.ತಮಿಳು ಸಿನಿಮಾದಲ್ಲಿ ನಟಿಸಲಿರುವ ಮಾಜಿ ಕ್ರಿಕೆಟಿಗ ಸುರೇಶ್ ರೈನಾ..ಇಲ್ಲಿದೆ ಮಾಹಿತಿ. <p>ಮೃತ ಮಹಿಳೆಯನ್ನು ತಳಯೋಲಾಪರಂಬುವಿನ ಬಿಂದು (52) ಎಂದು ಗುರುತಿಸಲಾಗಿತ್ತು. ಅಲೀನಾ (11), ಅಮಲ್ ಪ್ರದೀಪ್ (20) ಜಿನು ಸಾಜಿ (38) ಗಾಯಾಳುಗಳು. ಸದ್ಯ ಗಾಯಾಳುಗಳು ಅದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p><p>ಕಟ್ಟಡ (ವಾರ್ಡುಗಳಿಗೆ ಹೊಂದಿಕೊಂಡಿದ್ದ ಟಾಯ್ಲೆಟ್ ಕಾಂಪ್ಲೆಕ್ಸ್) ಕುಸಿತಕ್ಕೆ ಕಾರಣ ತಿಳಿದು ಬಂದಿಲ್ಲ. ಆದರೆ, ಕುಸಿದ ಕಟ್ಟಡ ಹಲವು ದಶಕಗಳಷ್ಟು ಹಳೆಯದ್ದು ಎಂದು ಪೊಲೀಸರು ತಿಳಿಸಿದ್ದಾರೆ.</p>.ಸದ್ಯದಲ್ಲೇ CM ಸಿದ್ದರಾಮಯ್ಯ ದೆಹಲಿಗೆ ವರ್ಗ: ಬಿ.ವೈ.ವಿಜಯೇಂದ್ರ.Dhurandhar | ರಣವೀರ್ ಸಿಂಗ್ ನಟನೆಯ ‘ಧುರಂಧರ್’ ಚಿತ್ರದ ಫಸ್ಟ್ ಲುಕ್ ಬಿಡುಗಡೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ</strong>: ಕೇರಳದ ಕೊಟ್ಟಾಯಂನ ಸರ್ಕಾರಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಕಟ್ಟಡವೊಂದು ಕುಸಿದು ಮಹಿಳೆಯೊಬ್ಬರು ಮೃತಪಟ್ಟಿದ್ದ ಕುಟುಂಬಸ್ಥರನ್ನು ಆರೋಗ್ಯ ಸಚಿವೆ ವೀಣಾ ಜಾರ್ಜ್ ಭಾನುವಾರ ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ. </p><p>ಮೃತ ಮಹಿಳೆಯ (ಬಿಂದು) ಪತಿ, ತಾಯಿ ಮತ್ತು ಮಕ್ಕಳೊಂದಿಗೆ ವೀಣಾ ಜಾರ್ಜ್ ಮಾತುಕತೆ ನಡೆಸಿದರು. ಸರ್ಕಾರದಿಂದ ಎಲ್ಲಾ ಬೆಂಬಲವನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ.</p>.PSI ಎಂದು ಬರೋಬ್ಬರಿ 2 ವರ್ಷ ವಂಚಿಸಿದ್ದ ರಾಜಸ್ಥಾನದ ಮೋನಾ ಅಲಿಯಾಸ್ ‘ಮೂಲಿ’ ಬಂಧನ.ಸತತ 53 ದಿನ ಕಾರ್ಯಾಚರಣೆ ನಡೆಸಿ ನರಭಕ್ಷಕ ಹುಲಿ ಸೆರೆ ಹಿಡಿದ ಕೇರಳ ಅರಣ್ಯ ಇಲಾಖೆ. <p>ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಂದು ಅವರ ದುರಂತ ಸಾವು ಹೃದಯವಿದ್ರಾವಕ ಮತ್ತು ಅತ್ಯಂತ ನೋವಿನಿಂದ ಕೂಡಿದೆ. ಸರ್ಕಾರವು ಅವರೊಂದಿಗೆ ನಿಲ್ಲುತ್ತದೆ ಎಂದು ಹೇಳಿದ್ದಾರೆ.</p><p>ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಈಗಾಗಲೇ ಈ ಬಗ್ಗೆ ಮಾತನಾಡಿದ್ದಾರೆ. ಸಚಿವ ಸಂಪುಟದ ನಿರ್ಧಾರಗಳ ಆಧಾರದ ಮೇಲೆ ಕುಟುಂಬಕ್ಕೆ ಪರಿಹಾರ ಕ್ರಮಗಳನ್ನು ಘೋಷಿಸಲಾಗುವುದು ಎಂದು ಜಾರ್ಜ್ ತಿಳಿಸಿದ್ದಾರೆ.</p><p>ಕೊಟ್ಟಾಯಂನ ಸರ್ಕಾರಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಕಟ್ಟಡವೊಂದು ಕುಸಿದು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಗುರುವಾರ ಸಂಜೆ ನಡೆದಿತ್ತು. ಘಟನೆಯಲ್ಲಿ ಬಾಲಕಿ ಸೇರಿ ಮೂವರು ಗಂಭೀರವಾಗಿ ಗಾಯಗೊಂಡಿದ್ದರು.</p>.OBC ಸಲಹಾ ಮಂಡಳಿ ಸದಸ್ಯರಲ್ಲಿ ಸಿದ್ದರಾಮಯ್ಯ ಕೂಡಾ ಒಬ್ಬರು: CM ಸಚಿವಾಲಯ ಸ್ಪಷ್ಟನೆ.ತಮಿಳು ಸಿನಿಮಾದಲ್ಲಿ ನಟಿಸಲಿರುವ ಮಾಜಿ ಕ್ರಿಕೆಟಿಗ ಸುರೇಶ್ ರೈನಾ..ಇಲ್ಲಿದೆ ಮಾಹಿತಿ. <p>ಮೃತ ಮಹಿಳೆಯನ್ನು ತಳಯೋಲಾಪರಂಬುವಿನ ಬಿಂದು (52) ಎಂದು ಗುರುತಿಸಲಾಗಿತ್ತು. ಅಲೀನಾ (11), ಅಮಲ್ ಪ್ರದೀಪ್ (20) ಜಿನು ಸಾಜಿ (38) ಗಾಯಾಳುಗಳು. ಸದ್ಯ ಗಾಯಾಳುಗಳು ಅದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p><p>ಕಟ್ಟಡ (ವಾರ್ಡುಗಳಿಗೆ ಹೊಂದಿಕೊಂಡಿದ್ದ ಟಾಯ್ಲೆಟ್ ಕಾಂಪ್ಲೆಕ್ಸ್) ಕುಸಿತಕ್ಕೆ ಕಾರಣ ತಿಳಿದು ಬಂದಿಲ್ಲ. ಆದರೆ, ಕುಸಿದ ಕಟ್ಟಡ ಹಲವು ದಶಕಗಳಷ್ಟು ಹಳೆಯದ್ದು ಎಂದು ಪೊಲೀಸರು ತಿಳಿಸಿದ್ದಾರೆ.</p>.ಸದ್ಯದಲ್ಲೇ CM ಸಿದ್ದರಾಮಯ್ಯ ದೆಹಲಿಗೆ ವರ್ಗ: ಬಿ.ವೈ.ವಿಜಯೇಂದ್ರ.Dhurandhar | ರಣವೀರ್ ಸಿಂಗ್ ನಟನೆಯ ‘ಧುರಂಧರ್’ ಚಿತ್ರದ ಫಸ್ಟ್ ಲುಕ್ ಬಿಡುಗಡೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>