<p class="title"><strong>ಅಮರಾವತಿ:</strong> ‘ಕೃಷ್ಣಾ ನದಿ ನಿರ್ವಹಣಾ ಮಂಡಳಿಯು ಪಕ್ಷಪಾತ ಧೋರಣೆ ತಳೆದಿದ್ದು, ತೆಲಂಗಾಣ ರಾಜ್ಯದ ಪರವಾಗಿದೆ’ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್.ಜಗನ್ಮೋಹನ್ ರೆಡ್ಡಿ ಆರೋಪಿಸಿದ್ದಾರೆ.</p>.<p class="title">‘ಅಲ್ಲದೆ, ತೆಲಂಗಾಣ ಸರ್ಕಾರವು ‘ಆಂಧ್ರಪ್ರದೇಶ ಪುನರ್ವಿಂಗಡಣಾ ಕಾಯ್ದೆ 2014‘ಯ ನಿಯಮಗಳನ್ನು ಉಲ್ಲಂಘಿಸುತ್ತಿದ್ದು, ವಿಚಿತ್ರವಾಗಿ ವರ್ತಿಸುತ್ತಿದೆ. ಇದರಿಂದ ಆಂಧ್ರಕ್ಕೆ ತೊಂದರೆಯಾಗಿದೆ‘ ಎಂದು ಟೀಕಿಸಿದ್ದಾರೆ.</p>.<p>ಕೇಂದ್ರ ಜಲಶಕ್ತಿ ಸಚಿವರಿಗೆ ನಾಲ್ಕು ಪುಟಗಳ ಪತ್ರ ಬರೆದಿರುವ ಅವರು, ’ಜಲವಿದ್ಯುತ್ ಯೋಜನೆಗಾಗಿ ಮನಸೋಇಚ್ಛೆ ನೀರು ಪಡೆಯುವ ಕ್ರಮವನ್ನು ನಿಲ್ಲಿಸಲು ತೆಲಂಗಾಣಕ್ಕೆ ಸೂಚಿಸಬೇಕು’ ಎಂದು ಕೋರಿದ್ದಾರೆ.</p>.<p>ಆಂಧ್ರಪ್ರದೇಶದ ನೀರಿನ ಹಕ್ಕು ಕಸಿದುಕೊಳ್ಳುವ ಏಕಮಾತ್ರ ಉದ್ದೇಶದಿಂದ ನಿಯಮ ಉಲ್ಲಂಘಿಸುವ ತೆಲಂಗಾಣ ಸರ್ಕಾರದ ಧೋರಣೆ ಬಗ್ಗೆ ಈಗಾಗಲೇ ಜಲಶಕ್ತಿ ಸಚಿವಾಲಯಕ್ಕೆ ಹಲವು ಬಾರಿ ದೂರು ನೀಡಿದ್ದೇವೆ ಎಂದಿದ್ದಾರೆ.</p>.<p>ಕೃಷ್ಣಾ ನದಿಪಾತ್ರದಲ್ಲಿ ತೆಲಂಗಾಣದಲ್ಲಿ ಅನಧಿಕೃತವಾಗಿ ಅನೇಕ ಯೋಜನೆಗಳನ್ನು ಕಾರ್ಯಗತಗೊಳಿಸಲಾಗುತ್ತಿದೆ ಎಂಬುದನ್ನು ಜಲಶಕ್ತಿ ಸಚಿವಾಲಯದ ಗಮನಕ್ಕೆ ತರಲಾಗಿದೆ ಎಂದು ತಿಳಿಸಿದ್ದಾರೆ.</p>.<p>ಕೇಂದ್ರ ಜಲ ಆಯೋಗದ ಪರಿಶೀಲನೆಗೆ ಒಳಪಡದೇ ನೀರಾವರಿ ಯೋಜನೆಗಳನ್ನು ಜಾರಿಗೊಳಿಸಬಾರದು ಎಂದು ನಿರ್ದೇಶನ ನೀಡಲು ಹಲವು ಬಾರಿ ದೂರು ಸಲ್ಲಿಸಿದರೂ ಕೇಂದ್ರ ಸರ್ಕಾರ ಯಾವುದೇ ಕ್ರಮ ಜರುಗಿಸಿಲ್ಲ ಎಂದು ಮುಖ್ಯಮಂತ್ರಿ ಅವರು ಪತ್ರದಲ್ಲಿ ವಿಷಾದಿಸಿದ್ದಾರೆ.</p>.<p>ಉಭಯ ರಾಜ್ಯಗಳ ನಡುವಣ ಸಾಮಾನ್ಯ ಜಲಾಶಯದ ಬಳಿ ಪರಿಣಾಮಕಾರಿ ನಿರ್ವಹಣೆಗಾಗಿ ಸಿಐಎಸ್ಎಫ್ ತುಕಡಿಗಳನ್ನು ನಿಯೋಜನೆಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಅಮರಾವತಿ:</strong> ‘ಕೃಷ್ಣಾ ನದಿ ನಿರ್ವಹಣಾ ಮಂಡಳಿಯು ಪಕ್ಷಪಾತ ಧೋರಣೆ ತಳೆದಿದ್ದು, ತೆಲಂಗಾಣ ರಾಜ್ಯದ ಪರವಾಗಿದೆ’ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್.ಜಗನ್ಮೋಹನ್ ರೆಡ್ಡಿ ಆರೋಪಿಸಿದ್ದಾರೆ.</p>.<p class="title">‘ಅಲ್ಲದೆ, ತೆಲಂಗಾಣ ಸರ್ಕಾರವು ‘ಆಂಧ್ರಪ್ರದೇಶ ಪುನರ್ವಿಂಗಡಣಾ ಕಾಯ್ದೆ 2014‘ಯ ನಿಯಮಗಳನ್ನು ಉಲ್ಲಂಘಿಸುತ್ತಿದ್ದು, ವಿಚಿತ್ರವಾಗಿ ವರ್ತಿಸುತ್ತಿದೆ. ಇದರಿಂದ ಆಂಧ್ರಕ್ಕೆ ತೊಂದರೆಯಾಗಿದೆ‘ ಎಂದು ಟೀಕಿಸಿದ್ದಾರೆ.</p>.<p>ಕೇಂದ್ರ ಜಲಶಕ್ತಿ ಸಚಿವರಿಗೆ ನಾಲ್ಕು ಪುಟಗಳ ಪತ್ರ ಬರೆದಿರುವ ಅವರು, ’ಜಲವಿದ್ಯುತ್ ಯೋಜನೆಗಾಗಿ ಮನಸೋಇಚ್ಛೆ ನೀರು ಪಡೆಯುವ ಕ್ರಮವನ್ನು ನಿಲ್ಲಿಸಲು ತೆಲಂಗಾಣಕ್ಕೆ ಸೂಚಿಸಬೇಕು’ ಎಂದು ಕೋರಿದ್ದಾರೆ.</p>.<p>ಆಂಧ್ರಪ್ರದೇಶದ ನೀರಿನ ಹಕ್ಕು ಕಸಿದುಕೊಳ್ಳುವ ಏಕಮಾತ್ರ ಉದ್ದೇಶದಿಂದ ನಿಯಮ ಉಲ್ಲಂಘಿಸುವ ತೆಲಂಗಾಣ ಸರ್ಕಾರದ ಧೋರಣೆ ಬಗ್ಗೆ ಈಗಾಗಲೇ ಜಲಶಕ್ತಿ ಸಚಿವಾಲಯಕ್ಕೆ ಹಲವು ಬಾರಿ ದೂರು ನೀಡಿದ್ದೇವೆ ಎಂದಿದ್ದಾರೆ.</p>.<p>ಕೃಷ್ಣಾ ನದಿಪಾತ್ರದಲ್ಲಿ ತೆಲಂಗಾಣದಲ್ಲಿ ಅನಧಿಕೃತವಾಗಿ ಅನೇಕ ಯೋಜನೆಗಳನ್ನು ಕಾರ್ಯಗತಗೊಳಿಸಲಾಗುತ್ತಿದೆ ಎಂಬುದನ್ನು ಜಲಶಕ್ತಿ ಸಚಿವಾಲಯದ ಗಮನಕ್ಕೆ ತರಲಾಗಿದೆ ಎಂದು ತಿಳಿಸಿದ್ದಾರೆ.</p>.<p>ಕೇಂದ್ರ ಜಲ ಆಯೋಗದ ಪರಿಶೀಲನೆಗೆ ಒಳಪಡದೇ ನೀರಾವರಿ ಯೋಜನೆಗಳನ್ನು ಜಾರಿಗೊಳಿಸಬಾರದು ಎಂದು ನಿರ್ದೇಶನ ನೀಡಲು ಹಲವು ಬಾರಿ ದೂರು ಸಲ್ಲಿಸಿದರೂ ಕೇಂದ್ರ ಸರ್ಕಾರ ಯಾವುದೇ ಕ್ರಮ ಜರುಗಿಸಿಲ್ಲ ಎಂದು ಮುಖ್ಯಮಂತ್ರಿ ಅವರು ಪತ್ರದಲ್ಲಿ ವಿಷಾದಿಸಿದ್ದಾರೆ.</p>.<p>ಉಭಯ ರಾಜ್ಯಗಳ ನಡುವಣ ಸಾಮಾನ್ಯ ಜಲಾಶಯದ ಬಳಿ ಪರಿಣಾಮಕಾರಿ ನಿರ್ವಹಣೆಗಾಗಿ ಸಿಐಎಸ್ಎಫ್ ತುಕಡಿಗಳನ್ನು ನಿಯೋಜನೆಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>