<p><strong>ನವದೆಹಲಿ</strong>: ಕೃಷ್ಣಾ ಜಲವಿವಾದ ನ್ಯಾಯಮಂಡಳಿ-2ರ (ಕೆಡಬ್ಲ್ಯೂಡಿಟಿ) ಅಂತಿಮ ತೀರ್ಪಿನ ಅಧಿಸೂಚನೆಗೆ ಸಂಬಂಧಿಸಿ ಈ ಹಿಂದೆ ವಿಚಾರಣೆ ನಡೆಸಿದ್ದ ನ್ಯಾಯಪೀಠವೇ ಜನವರಿ 20ರಿಂದ ವಿಚಾರಣೆ ಮುಂದುವರಿಸುವಂತೆ ಕೋರಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಒಪ್ಪಿಗೆ ನೀಡಿದೆ.</p>.<p>ಕರ್ನಾಟಕದ ಪರವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದ ಹಿರಿಯ ವಕೀಲರಾದ ಶ್ಯಾಮ್ ದಿವಾನ್ ಮತ್ತು ಮೋಹನ್ ಕಾತರಕಿ ಅವರು ಹಿಂದೆ ವಿಚಾರಣೆ ನಡೆಸಿದ್ದ ಪೀಠವನ್ನೇ ಮತ್ತೆ ರಚಿಸುವ ಅಗತ್ಯದ ಬಗ್ಗೆ ಮುಖ್ಯನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರ ನೇತೃತ್ವದ ಪೀಠಕ್ಕೆ ಮನವರಿಕೆ ಮಾಡಿದರು. </p>.<p>ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ವಿ.ರಾಮಸುಬ್ರಮಣಿಯನ್ ಅವರನ್ನೊಳಗೊಂಡ ನ್ಯಾಯಪೀಠವನ್ನು ಮತ್ತೆ ರಚಿಸಲು ಡಿ.ವೈ. ಚಂದ್ರಚೂಡ್ ಅವರು ಒಪ್ಪಿಗೆ ನೀಡಿದ್ದಾರೆ. ಇದೇ ನ್ಯಾಯಮೂರ್ತಿಗಳಿದ್ದ ನ್ಯಾಯಪೀಠವು ಹಿಂದೆ ಕೃಷ್ಣಾ ಜಲನಯನ ಪ್ರದೇಶದ ರಾಜ್ಯಗಳಾದ ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕೃಷ್ಣಾ ಜಲವಿವಾದ ನ್ಯಾಯಮಂಡಳಿ-2ರ (ಕೆಡಬ್ಲ್ಯೂಡಿಟಿ) ಅಂತಿಮ ತೀರ್ಪಿನ ಅಧಿಸೂಚನೆಗೆ ಸಂಬಂಧಿಸಿ ಈ ಹಿಂದೆ ವಿಚಾರಣೆ ನಡೆಸಿದ್ದ ನ್ಯಾಯಪೀಠವೇ ಜನವರಿ 20ರಿಂದ ವಿಚಾರಣೆ ಮುಂದುವರಿಸುವಂತೆ ಕೋರಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಒಪ್ಪಿಗೆ ನೀಡಿದೆ.</p>.<p>ಕರ್ನಾಟಕದ ಪರವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದ ಹಿರಿಯ ವಕೀಲರಾದ ಶ್ಯಾಮ್ ದಿವಾನ್ ಮತ್ತು ಮೋಹನ್ ಕಾತರಕಿ ಅವರು ಹಿಂದೆ ವಿಚಾರಣೆ ನಡೆಸಿದ್ದ ಪೀಠವನ್ನೇ ಮತ್ತೆ ರಚಿಸುವ ಅಗತ್ಯದ ಬಗ್ಗೆ ಮುಖ್ಯನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರ ನೇತೃತ್ವದ ಪೀಠಕ್ಕೆ ಮನವರಿಕೆ ಮಾಡಿದರು. </p>.<p>ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ವಿ.ರಾಮಸುಬ್ರಮಣಿಯನ್ ಅವರನ್ನೊಳಗೊಂಡ ನ್ಯಾಯಪೀಠವನ್ನು ಮತ್ತೆ ರಚಿಸಲು ಡಿ.ವೈ. ಚಂದ್ರಚೂಡ್ ಅವರು ಒಪ್ಪಿಗೆ ನೀಡಿದ್ದಾರೆ. ಇದೇ ನ್ಯಾಯಮೂರ್ತಿಗಳಿದ್ದ ನ್ಯಾಯಪೀಠವು ಹಿಂದೆ ಕೃಷ್ಣಾ ಜಲನಯನ ಪ್ರದೇಶದ ರಾಜ್ಯಗಳಾದ ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>