ಆಳಪ್ಪುಳ (ಕೇರಳ): ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ವೊಂದಕ್ಕೆ ಬೆಂಕಿ ಹೊತ್ತಿಕೊಂಡ ಘಟನೆ ಇಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ. ಸುದೈವವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ.
ಕಾಯಕ್ಕುಳಂ – ಆಳಪ್ಪುಳ ನಡುವೆ ಸಂಚರಿಸುವಾಗ ಘಟನೆ ನಡೆದಿದೆ. ಸುಟ್ಟ ವಾಸನೆ ಬಂದಿದ್ದರಿಂದ ಪ್ರಯಾಣಿಕರನ್ನು ಕೆಳಗಿಳಿಯುವಂತೆ ಚಾಲಕ ಸೂಚಿಸಿದ್ದ. ಹೀಗಾಗಿ ಯಾರಿಗೂ ಗಾಯವಾಗಿಲ್ಲ ಎಂದು ಪೊಲೀಸರು ಹೇಳಿದ್ದಾರೆ.