<p><strong>ಚುರಚಾಂದಪುರ/ ಇಂಫಾಲ್</strong>: ಮೈಥೇಯಿ ಮತ್ತು ಕುಕಿ ಸಮುದಾಯಗಳ ನಡುವಿನ ಹಿಂಸಾಚಾರದಿಂದ ತತ್ತರಿಸಿರುವ ಮಣಿಪುರದಲ್ಲಿ ಶಾಂತಿ ಮರು ಸ್ಥಾಪಿಸಲು ಪರಿಹಾರ ಮಾರ್ಗಕ್ಕೆ ಒತ್ತಾಯಿಸಿ ಕುಕಿ ಸಮುದಾಯದ ಸಾವಿರಾರು ಮಂದಿ ವಿವಿಧ ಜಿಲ್ಲೆಗಳಲ್ಲಿ ಸೋಮವಾರ ಸರಣಿ ರ್ಯಾಲಿಗಳನ್ನು ನಡೆಸಿದರು. </p>.<p>ಈ ಪ್ರತಿಭಟನಾ ಮೆರವಣಿಗೆಯಲ್ಲಿ ಚುರಚಾಂದಪುರ, ಕಾಂಗ್ಪೊಕ್ಪಿ ಹಾಗೂ ತೆಂಗ್ನೌಪಾಲ್ ಜಿಲ್ಲೆಗಳ ಸಾವಿರಾರು ಮಂದಿ ಪಾಲ್ಗೊಂಡಿದ್ದರು.</p>.<p>ಸಮುದಾಯದ ಸಾವಿರಾರು ಮಂದಿ, ತಮ್ಮ ಸಮುದಾಯಕ್ಕೆ ಪ್ರತ್ಯೇಕ ಆಡಳಿತ ವ್ಯವಸ್ಥೆ ರೂಪಿಸಬೇಕು ಒತ್ತಾಯಿಸಿದರು. ಜೊತೆಗೆ ಭಾರತ–ಮ್ಯಾನ್ಮಾರ್ ಗಡಿಯಲ್ಲಿರುವ ಮುಕ್ತ ಸಂಚಾರ ವ್ಯವಸ್ಥೆ ರದ್ದತಿ ಬಗ್ಗೆ ಬೇಸರ ವ್ಯಕ್ತಪಡಿಸಿದರು. </p>.<p>ಪ್ರತಿಭಟನಾ ಮೆರವಣಿಗೆ ಬಳಿಕ ಸಮುದಾಯವು, ರಾಜ್ಯದಲ್ಲಿ ಶಾಂತಿ ಪುನರ್ ಸ್ಥಾಪನೆಯ ಕುರಿತಾದ ಪತ್ರವನ್ನು ಚುರಚಾಂದಪುರದ ಆಯುಕ್ತರ ಮೂಲಕ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಸಲ್ಲಿಸಿತು. </p>.<p>ಪ್ರತಿಭಟನಾ ಮೆರವಣಿಗೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಪ್ರಮುಖ ಸ್ಥಳಗಳಲ್ಲಿ ಕೇಂದ್ರೀಯ ಮತ್ತು ರಾಜ್ಯ ಭದ್ರತಾ ಪಡೆಗಳ ಮೂಲಕ ಭದ್ರತೆ ಕಲ್ಪಿಸಲಾಗಿತ್ತು. </p>.<p>ಭಾರತ–ಮ್ಯಾನ್ಮಾರ್ನ 1,600 ಕಿ.ಮೀ ವ್ಯಾಪ್ತಿಯಲ್ಲಿ ಬೇಲಿ ನಿರ್ಮಿಸಲು ನಿರ್ಧರಿಸಿರುವ ಭಾರತ ಸರ್ಕಾರವು, ಉಭಯ ದೇಶಗಳ ನಡುವಿನ ಮುಕ್ತ ಸಂಚಾರ ವ್ಯವಸ್ಥೆಯನ್ನು ರದ್ದುಪಡಿಸಿದೆ.</p>.<p>ಅರುಣಾಚಲ ಪ್ರದೇಶ, ಮಣಿಪುರ, ಮೇಘಾಲಯ ಮತ್ತು ನಾಗಾಲ್ಯಾಂಡ್ ರಾಜ್ಯಗಳು ಮ್ಯಾನ್ಮಾರ್ನೊಂದಿಗೆ ಗಡಿಗಳನ್ನು ಹೊಂದಿವೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚುರಚಾಂದಪುರ/ ಇಂಫಾಲ್</strong>: ಮೈಥೇಯಿ ಮತ್ತು ಕುಕಿ ಸಮುದಾಯಗಳ ನಡುವಿನ ಹಿಂಸಾಚಾರದಿಂದ ತತ್ತರಿಸಿರುವ ಮಣಿಪುರದಲ್ಲಿ ಶಾಂತಿ ಮರು ಸ್ಥಾಪಿಸಲು ಪರಿಹಾರ ಮಾರ್ಗಕ್ಕೆ ಒತ್ತಾಯಿಸಿ ಕುಕಿ ಸಮುದಾಯದ ಸಾವಿರಾರು ಮಂದಿ ವಿವಿಧ ಜಿಲ್ಲೆಗಳಲ್ಲಿ ಸೋಮವಾರ ಸರಣಿ ರ್ಯಾಲಿಗಳನ್ನು ನಡೆಸಿದರು. </p>.<p>ಈ ಪ್ರತಿಭಟನಾ ಮೆರವಣಿಗೆಯಲ್ಲಿ ಚುರಚಾಂದಪುರ, ಕಾಂಗ್ಪೊಕ್ಪಿ ಹಾಗೂ ತೆಂಗ್ನೌಪಾಲ್ ಜಿಲ್ಲೆಗಳ ಸಾವಿರಾರು ಮಂದಿ ಪಾಲ್ಗೊಂಡಿದ್ದರು.</p>.<p>ಸಮುದಾಯದ ಸಾವಿರಾರು ಮಂದಿ, ತಮ್ಮ ಸಮುದಾಯಕ್ಕೆ ಪ್ರತ್ಯೇಕ ಆಡಳಿತ ವ್ಯವಸ್ಥೆ ರೂಪಿಸಬೇಕು ಒತ್ತಾಯಿಸಿದರು. ಜೊತೆಗೆ ಭಾರತ–ಮ್ಯಾನ್ಮಾರ್ ಗಡಿಯಲ್ಲಿರುವ ಮುಕ್ತ ಸಂಚಾರ ವ್ಯವಸ್ಥೆ ರದ್ದತಿ ಬಗ್ಗೆ ಬೇಸರ ವ್ಯಕ್ತಪಡಿಸಿದರು. </p>.<p>ಪ್ರತಿಭಟನಾ ಮೆರವಣಿಗೆ ಬಳಿಕ ಸಮುದಾಯವು, ರಾಜ್ಯದಲ್ಲಿ ಶಾಂತಿ ಪುನರ್ ಸ್ಥಾಪನೆಯ ಕುರಿತಾದ ಪತ್ರವನ್ನು ಚುರಚಾಂದಪುರದ ಆಯುಕ್ತರ ಮೂಲಕ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಸಲ್ಲಿಸಿತು. </p>.<p>ಪ್ರತಿಭಟನಾ ಮೆರವಣಿಗೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಪ್ರಮುಖ ಸ್ಥಳಗಳಲ್ಲಿ ಕೇಂದ್ರೀಯ ಮತ್ತು ರಾಜ್ಯ ಭದ್ರತಾ ಪಡೆಗಳ ಮೂಲಕ ಭದ್ರತೆ ಕಲ್ಪಿಸಲಾಗಿತ್ತು. </p>.<p>ಭಾರತ–ಮ್ಯಾನ್ಮಾರ್ನ 1,600 ಕಿ.ಮೀ ವ್ಯಾಪ್ತಿಯಲ್ಲಿ ಬೇಲಿ ನಿರ್ಮಿಸಲು ನಿರ್ಧರಿಸಿರುವ ಭಾರತ ಸರ್ಕಾರವು, ಉಭಯ ದೇಶಗಳ ನಡುವಿನ ಮುಕ್ತ ಸಂಚಾರ ವ್ಯವಸ್ಥೆಯನ್ನು ರದ್ದುಪಡಿಸಿದೆ.</p>.<p>ಅರುಣಾಚಲ ಪ್ರದೇಶ, ಮಣಿಪುರ, ಮೇಘಾಲಯ ಮತ್ತು ನಾಗಾಲ್ಯಾಂಡ್ ರಾಜ್ಯಗಳು ಮ್ಯಾನ್ಮಾರ್ನೊಂದಿಗೆ ಗಡಿಗಳನ್ನು ಹೊಂದಿವೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>