<p><strong>ಮುಂಬೈ:</strong> ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂದೆ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಹಾಸ್ಯ ಕಲಾವಿದ ಕುನಾಲ್ ಕಾಮ್ರಾ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ಕಾಮ್ರಾ ಅವರು ಶುಕ್ರವಾರ ಮದ್ರಾಸ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.</p>.<p>ಶಿಂದೆ ವಿರುದ್ಧ ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ಮಾರ್ಚ್ 31ರಂದು ವಿಚಾರಣೆಗೆ ಹಾಜರಾಗುವಂತೆ ಕುನಾಲ್ ಅವರಿಗೆ ಪೊಲೀಸರು ಗುರುವಾರ ಸಮನ್ಸ್ ನೀಡಿದ್ದರು.</p>.ಆಕ್ಷೇಪಾರ್ಹ ಹೇಳಿಕೆ: ವಿಚಾರಣೆಗೆ ಹಾಜರಾಗಲು 1 ವಾರ ಕಾಲಾವಕಾಶ ಕೋರಿದ ಕಾಮ್ರಾ.<h2>ಏನಿದು ಪ್ರಕರಣ?</h2><p>ಮುಂಬೈನ ಹ್ಯಾಬಿಟ್ಯಾಟ್ ಸ್ಟುಡಿಯೊದಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ ‘ದಿಲ್ ತೊ ಪಾಗಲ್ ಹೈ’ ಚಿತ್ರದ ಜನಪ್ರಿಯ ಹಾಡೊಂದನ್ನು ತುಸು ಬದಲಿಸಿ ಕಾಮ್ರಾ ಅವರು, ಶಿಂದೆ ಅವರನ್ನು ಗುರಿಯಾಗಿಸಿ ‘ವಂಚಕ’ ಎಂದಿದ್ದಾರೆ ಎಂಬ ಆರೋಪವು ಮಹಾರಾಷ್ಟ್ರದಲ್ಲಿ ವಿವಾದ ಸೃಷ್ಟಿಸಿತ್ತು.</p>.<p>ಇದಕ್ಕೆ ಶಿವಸೇನಾ ಬೆಂಬಲಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಸ್ಟುಡಿಯೊ ಮತ್ತು ಅದು ಇರುವ ಹೋಟೆಲ್ ಅನ್ನು ಧ್ವಂಸಗೊಳಿಸಿದ್ದರು.</p>.<p>ಶಿವಸೇನಾ ಶಾಸಕ ಮುರ್ಜಿ ಪಟೇಲ್ ಅವರ ದೂರಿನ ಮೇರೆಗೆ ಖಾರ್ ಪೊಲೀಸರು ಕಾಮ್ರಾ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.</p>.ಶಿಂದೆ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕುನಾಲ್ ಕಾಮ್ರಾಗೆ 2ನೇ ನೋಟಿಸ್ ಜಾರಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂದೆ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಹಾಸ್ಯ ಕಲಾವಿದ ಕುನಾಲ್ ಕಾಮ್ರಾ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ಕಾಮ್ರಾ ಅವರು ಶುಕ್ರವಾರ ಮದ್ರಾಸ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.</p>.<p>ಶಿಂದೆ ವಿರುದ್ಧ ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ಮಾರ್ಚ್ 31ರಂದು ವಿಚಾರಣೆಗೆ ಹಾಜರಾಗುವಂತೆ ಕುನಾಲ್ ಅವರಿಗೆ ಪೊಲೀಸರು ಗುರುವಾರ ಸಮನ್ಸ್ ನೀಡಿದ್ದರು.</p>.ಆಕ್ಷೇಪಾರ್ಹ ಹೇಳಿಕೆ: ವಿಚಾರಣೆಗೆ ಹಾಜರಾಗಲು 1 ವಾರ ಕಾಲಾವಕಾಶ ಕೋರಿದ ಕಾಮ್ರಾ.<h2>ಏನಿದು ಪ್ರಕರಣ?</h2><p>ಮುಂಬೈನ ಹ್ಯಾಬಿಟ್ಯಾಟ್ ಸ್ಟುಡಿಯೊದಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ ‘ದಿಲ್ ತೊ ಪಾಗಲ್ ಹೈ’ ಚಿತ್ರದ ಜನಪ್ರಿಯ ಹಾಡೊಂದನ್ನು ತುಸು ಬದಲಿಸಿ ಕಾಮ್ರಾ ಅವರು, ಶಿಂದೆ ಅವರನ್ನು ಗುರಿಯಾಗಿಸಿ ‘ವಂಚಕ’ ಎಂದಿದ್ದಾರೆ ಎಂಬ ಆರೋಪವು ಮಹಾರಾಷ್ಟ್ರದಲ್ಲಿ ವಿವಾದ ಸೃಷ್ಟಿಸಿತ್ತು.</p>.<p>ಇದಕ್ಕೆ ಶಿವಸೇನಾ ಬೆಂಬಲಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಸ್ಟುಡಿಯೊ ಮತ್ತು ಅದು ಇರುವ ಹೋಟೆಲ್ ಅನ್ನು ಧ್ವಂಸಗೊಳಿಸಿದ್ದರು.</p>.<p>ಶಿವಸೇನಾ ಶಾಸಕ ಮುರ್ಜಿ ಪಟೇಲ್ ಅವರ ದೂರಿನ ಮೇರೆಗೆ ಖಾರ್ ಪೊಲೀಸರು ಕಾಮ್ರಾ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.</p>.ಶಿಂದೆ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕುನಾಲ್ ಕಾಮ್ರಾಗೆ 2ನೇ ನೋಟಿಸ್ ಜಾರಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>