<p><strong>ಮುಂಬೈ: </strong>ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಗುರಿಯಾಗಿಸಿಕೊಂಡು ಕುಹಕವಾಡಿದ್ದ (ಟ್ರೋಲ್) ಹಿಂದಿ ಹಾಸ್ಯ ಕಲಾವಿದ ಕುನಾಲ್ ಕಾಮ್ರಾ, ಗುರುವಾರ ಶಾಸಕಾಂಗದ ಹಕ್ಕುಚ್ಯುತಿ ಸಮಿತಿಯ ಮುಂದೆ ಗುರುವಾರ ಸಂಜೆ ಹಾಜರಾಗಿದ್ದರು.</p><p>ಆದರೆ, ತಾವು ಆ ಘಟನೆಗೆ ಸಂಬಂಧಿಸಿದಂತೆ ನೀಡಿದ ಹೇಳಿಕೆಗಳಿಗೆ ಕ್ಷಮೆಯಾಚಿಸುವುದಿಲ್ಲ ಮತ್ತು ಯಾವುದೇ ಪಶ್ಚಾತ್ತಾಪವಿಲ್ಲ ಎಂದು ಹೇಳಿದ್ದಾರೆ.</p><p>ಈ ಕುರಿತು ಎಕ್ಸ್ನಲ್ಲಿ ಬರೆದುಕೊಂಡಿರುವ ಅವರು, ಪ್ರಾಮಾಣಿಕವಲ್ಲದ ಕ್ಷಮೆಯನ್ನು ನಾನು ಕೇಳುವುದಿಲ್ಲ. ಒಂದು ವೇಳೆ ನಾನು ಕ್ಷಮೆ ಕೇಳಿದರೆ ಅದು ಕಲಾವಿದರ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ಎಂದು ತಿಳಿಸಿದ್ದಾರೆ.</p><p>ಪ್ರಕರಣಕ್ಕೆ ಸಂಬಂಧಿಸಿದಂತೆ ಕುನಾಲ್ ಕಾಮ್ರಾ ವಿರುದ್ಧ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಹಕ್ಕುಚ್ಯುತಿ ಪ್ರಕ್ರಿಯೆ ಜಾರಿಯಲ್ಲಿದೆ.</p><p>ಕಳೆದ ವರ್ಷ ಮಾರ್ಚ್ನಲ್ಲಿ ನಡೆದ ಬಜೆಟ್ ಅಧಿವೇಶನದಲ್ಲಿ ಕಾಮ್ರಾ ಮತ್ತು ಸುಷ್ಮಾ ಅಂಧಾರೆ ವಿರುದ್ಧ ಬಿಜೆಪಿ ಶಾಸಕ ಪ್ರವೀಣ್ ದರೇಕರ್ ಅವರು ಹಕ್ಕುಚ್ಯುತಿ ಬಗ್ಗೆ ನಿಲುವಳಿ ಸೂಚನೆ ಮಂಡಿಸಿದ್ದರು.</p><p>ಉಪ ಮುಖ್ಯಮಂತ್ರಿ ಏಕನಾಥ ಶಿಂದೆ ಅವರ ಬಗ್ಗೆ ವೈಯಕ್ತಿಕ ಹಾಗೂ ಅವಹೇಳನಕಾರಿ ಅಂಶಗಳಿರುವ ಹಾಡನ್ನು ಕುನಾಲ್ ಹಾಡಿದ್ದಾರೆ ಅವರು ತಮ್ಮ ಮಾತುಗಳ ಮೂಲಕ ಶಾಸನ ಸಭೆಗಳನ್ನು ಅಗೌರವದಿಂದ ಕಂಡಿದ್ದಾರೆ ಎಂದು ಆರೋಪಿಸಲಾಗಿದೆ.</p><p>ಈ ಪ್ರಕರಣದ ವಿರುದ್ಧ ಕುನಾಲ್ ಕಾಮ್ರಾ ಹೈಕೋರ್ಟ್ ಮೊರೆ ಹೋಗಿದ್ದರು. ಸದ್ಯ ಅವರು ಬಂಧನದ ಭೀತಿಯಿಂದ ಹೊರಗಿದ್ದಾರೆ.</p>.IPL, ಪಂಚರಾಜ್ಯ ಚುನಾವಣೆ, ಮೋದಿ ಭಾಷಣ ಸೇರಿದಂತೆ ಈ ದಿನದ ಪ್ರಮುಖ 10 ಸುದ್ದಿಗಳು.ಪ.ಬಂಗಾಳ ಚುನಾವಣೆ: DGP ಪಾಂಡೆ, ಕೋಲ್ಕತ್ತ ಪೊಲೀಸ್ ಆಯುಕ್ತರ ತೆರವುಗೊಳಿಸಿದ EC.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ: </strong>ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಗುರಿಯಾಗಿಸಿಕೊಂಡು ಕುಹಕವಾಡಿದ್ದ (ಟ್ರೋಲ್) ಹಿಂದಿ ಹಾಸ್ಯ ಕಲಾವಿದ ಕುನಾಲ್ ಕಾಮ್ರಾ, ಗುರುವಾರ ಶಾಸಕಾಂಗದ ಹಕ್ಕುಚ್ಯುತಿ ಸಮಿತಿಯ ಮುಂದೆ ಗುರುವಾರ ಸಂಜೆ ಹಾಜರಾಗಿದ್ದರು.</p><p>ಆದರೆ, ತಾವು ಆ ಘಟನೆಗೆ ಸಂಬಂಧಿಸಿದಂತೆ ನೀಡಿದ ಹೇಳಿಕೆಗಳಿಗೆ ಕ್ಷಮೆಯಾಚಿಸುವುದಿಲ್ಲ ಮತ್ತು ಯಾವುದೇ ಪಶ್ಚಾತ್ತಾಪವಿಲ್ಲ ಎಂದು ಹೇಳಿದ್ದಾರೆ.</p><p>ಈ ಕುರಿತು ಎಕ್ಸ್ನಲ್ಲಿ ಬರೆದುಕೊಂಡಿರುವ ಅವರು, ಪ್ರಾಮಾಣಿಕವಲ್ಲದ ಕ್ಷಮೆಯನ್ನು ನಾನು ಕೇಳುವುದಿಲ್ಲ. ಒಂದು ವೇಳೆ ನಾನು ಕ್ಷಮೆ ಕೇಳಿದರೆ ಅದು ಕಲಾವಿದರ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ಎಂದು ತಿಳಿಸಿದ್ದಾರೆ.</p><p>ಪ್ರಕರಣಕ್ಕೆ ಸಂಬಂಧಿಸಿದಂತೆ ಕುನಾಲ್ ಕಾಮ್ರಾ ವಿರುದ್ಧ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಹಕ್ಕುಚ್ಯುತಿ ಪ್ರಕ್ರಿಯೆ ಜಾರಿಯಲ್ಲಿದೆ.</p><p>ಕಳೆದ ವರ್ಷ ಮಾರ್ಚ್ನಲ್ಲಿ ನಡೆದ ಬಜೆಟ್ ಅಧಿವೇಶನದಲ್ಲಿ ಕಾಮ್ರಾ ಮತ್ತು ಸುಷ್ಮಾ ಅಂಧಾರೆ ವಿರುದ್ಧ ಬಿಜೆಪಿ ಶಾಸಕ ಪ್ರವೀಣ್ ದರೇಕರ್ ಅವರು ಹಕ್ಕುಚ್ಯುತಿ ಬಗ್ಗೆ ನಿಲುವಳಿ ಸೂಚನೆ ಮಂಡಿಸಿದ್ದರು.</p><p>ಉಪ ಮುಖ್ಯಮಂತ್ರಿ ಏಕನಾಥ ಶಿಂದೆ ಅವರ ಬಗ್ಗೆ ವೈಯಕ್ತಿಕ ಹಾಗೂ ಅವಹೇಳನಕಾರಿ ಅಂಶಗಳಿರುವ ಹಾಡನ್ನು ಕುನಾಲ್ ಹಾಡಿದ್ದಾರೆ ಅವರು ತಮ್ಮ ಮಾತುಗಳ ಮೂಲಕ ಶಾಸನ ಸಭೆಗಳನ್ನು ಅಗೌರವದಿಂದ ಕಂಡಿದ್ದಾರೆ ಎಂದು ಆರೋಪಿಸಲಾಗಿದೆ.</p><p>ಈ ಪ್ರಕರಣದ ವಿರುದ್ಧ ಕುನಾಲ್ ಕಾಮ್ರಾ ಹೈಕೋರ್ಟ್ ಮೊರೆ ಹೋಗಿದ್ದರು. ಸದ್ಯ ಅವರು ಬಂಧನದ ಭೀತಿಯಿಂದ ಹೊರಗಿದ್ದಾರೆ.</p>.IPL, ಪಂಚರಾಜ್ಯ ಚುನಾವಣೆ, ಮೋದಿ ಭಾಷಣ ಸೇರಿದಂತೆ ಈ ದಿನದ ಪ್ರಮುಖ 10 ಸುದ್ದಿಗಳು.ಪ.ಬಂಗಾಳ ಚುನಾವಣೆ: DGP ಪಾಂಡೆ, ಕೋಲ್ಕತ್ತ ಪೊಲೀಸ್ ಆಯುಕ್ತರ ತೆರವುಗೊಳಿಸಿದ EC.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>