<p><strong>ಮುಂಬೈ</strong>: ಟಿ–ಶರ್ಟ್ ವಿವಾದಕ್ಕೆ ಸಂಬಂಧಿಸಿದಂತೆ ಸ್ಟ್ಯಾಂಡಪ್ ಕಾಮಿಡಿಯನ್ ಕುನಾಲ್ ಕಾಮ್ರಾ ವಿರುದ್ದ ಕಾನೂನು ಕ್ರಮ ಕೈಗೊಳ್ಳುವುದಾಗಿ ಬಿಜೆಪಿ ಹೇಳಿದೆ.</p><p>ಆರ್ಎಸ್ಎಸ್ ಅನ್ನು ಅಪಹಾಸ್ಯ ಮಾಡುವ ಟಿ–ಶರ್ಟ್ ಧರಿಸಿ ಫೋಟೊ ಕ್ಲಿಕ್ಕಿಸಿಕೊಂಡಿರುವ ಕಾಮ್ರಾ, ಆ ಫೋಟೊವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಟಿ–ಶರ್ಟ್ನಲ್ಲಿ ಆರ್ಎಸ್ಎಸ್ ಎಂದು ಬರೆದಿರುವ ಅಕ್ಷರದ ಮೇಲೆ ನಾಯಿಯೊಂದು ಮೂತ್ರ ಮಾಡುತ್ತಿರುವಂತೆ ಚಿತ್ರಿಸಲಾಗಿದೆ.</p><p>ವಿವಾದದ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ಹಿರಿಯ ನಾಯಕ ಚಂದ್ರಶೇಖರ್ ಬವಾಂಕುಲೆ, ಆಕ್ಷೇಪಾರ್ಹ ವಿಷಯವನ್ನು ಆನ್ಲೈನ್ನಲ್ಲಿ ಪೋಸ್ಟ್ ಮಾಡುವವರ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ ಎಂದು ಹೇಳಿದ್ದಾರೆ. </p>.<p>ಶಿವಸೇನಾ(ಶಿಂದೆ ಬಣ) ನಾಯಕ ಸಂಜಯ್ ಶಿರ್ಸಾತ್ ಪ್ರತಿಕ್ರಿಯಿಸಿ, ‘ಈ ಹಿಂದೆ ಅವರು(ಕಾಮ್ರಾ) ಪ್ರಧಾನಿ ಮೋದಿ ಮತ್ತು ಏಕನಾಥ್ ಶಿಂದೆ ಅವರನ್ನು ಗುರಿಯಾಗಿಸಿಕೊಂಡು ದಾಳಿ ಮಾಡಿದ್ದರು. ಈಗ ಆರ್ಎಸ್ಎಸ್ ಮೇಲೆ ನೇರವಾಗಿ ದಾಳಿ ಮಾಡುವ ಧೈರ್ಯ ಮಾಡಿದ್ದಾರೆ. ಇದಕ್ಕೆ ಬಿಜೆಪಿ ಪ್ರತಿಕ್ರಿಯಿಸಬೇಕಿದೆ’ ಎಂದಿದ್ದಾರೆ.</p><p>ಇದೇ ವರ್ಷ ಮಾರ್ಚ್ನಲ್ಲಿ ನಡೆದ ಹಾಸ್ಯ ಕಾರ್ಯಕ್ರಮವೊಂದರಲ್ಲಿ ಕಾಮ್ರಾ, ಮಹಾರಾಷ್ಟ್ರ ಡಿಸಿಎಂ ಏಕನಾಥ ಶಿಂದೆ ಕುರಿತು ಹಾಸ್ಯ ಮಾಡಿದ್ದರು. ಇದು ವಿವಾದ ರೂಪ ಪಡೆದುಕೊಂಡಿದ್ದು, ಶಿಂದೆ ಬೆಂಬಲಿಗರು ಕಾರ್ಯಕ್ರಮ ನಡೆದ ಸ್ಥಳಕ್ಕೆ ನುಗ್ಗಿ ದಾಂಧಲೆ ನಡೆಸಿದ್ದರು.</p><p>ಏನತ್ಮಧ್ಯೆ, ಹೊಸ ವಿವಾದದ ಕುರಿತು ಪ್ರತಿಕ್ರಿಯಿಸಿರುವ ಕಾಮ್ರಾ, ‘ಇದು ಕಾಮಿಡಿ ಕ್ಲಬ್ನಲ್ಲಿ ಕ್ಲಿಕ್ಕಿಸಿರುವ ಫೋಟೊವಲ್ಲ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಟಿ–ಶರ್ಟ್ ವಿವಾದಕ್ಕೆ ಸಂಬಂಧಿಸಿದಂತೆ ಸ್ಟ್ಯಾಂಡಪ್ ಕಾಮಿಡಿಯನ್ ಕುನಾಲ್ ಕಾಮ್ರಾ ವಿರುದ್ದ ಕಾನೂನು ಕ್ರಮ ಕೈಗೊಳ್ಳುವುದಾಗಿ ಬಿಜೆಪಿ ಹೇಳಿದೆ.</p><p>ಆರ್ಎಸ್ಎಸ್ ಅನ್ನು ಅಪಹಾಸ್ಯ ಮಾಡುವ ಟಿ–ಶರ್ಟ್ ಧರಿಸಿ ಫೋಟೊ ಕ್ಲಿಕ್ಕಿಸಿಕೊಂಡಿರುವ ಕಾಮ್ರಾ, ಆ ಫೋಟೊವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಟಿ–ಶರ್ಟ್ನಲ್ಲಿ ಆರ್ಎಸ್ಎಸ್ ಎಂದು ಬರೆದಿರುವ ಅಕ್ಷರದ ಮೇಲೆ ನಾಯಿಯೊಂದು ಮೂತ್ರ ಮಾಡುತ್ತಿರುವಂತೆ ಚಿತ್ರಿಸಲಾಗಿದೆ.</p><p>ವಿವಾದದ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ಹಿರಿಯ ನಾಯಕ ಚಂದ್ರಶೇಖರ್ ಬವಾಂಕುಲೆ, ಆಕ್ಷೇಪಾರ್ಹ ವಿಷಯವನ್ನು ಆನ್ಲೈನ್ನಲ್ಲಿ ಪೋಸ್ಟ್ ಮಾಡುವವರ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ ಎಂದು ಹೇಳಿದ್ದಾರೆ. </p>.<p>ಶಿವಸೇನಾ(ಶಿಂದೆ ಬಣ) ನಾಯಕ ಸಂಜಯ್ ಶಿರ್ಸಾತ್ ಪ್ರತಿಕ್ರಿಯಿಸಿ, ‘ಈ ಹಿಂದೆ ಅವರು(ಕಾಮ್ರಾ) ಪ್ರಧಾನಿ ಮೋದಿ ಮತ್ತು ಏಕನಾಥ್ ಶಿಂದೆ ಅವರನ್ನು ಗುರಿಯಾಗಿಸಿಕೊಂಡು ದಾಳಿ ಮಾಡಿದ್ದರು. ಈಗ ಆರ್ಎಸ್ಎಸ್ ಮೇಲೆ ನೇರವಾಗಿ ದಾಳಿ ಮಾಡುವ ಧೈರ್ಯ ಮಾಡಿದ್ದಾರೆ. ಇದಕ್ಕೆ ಬಿಜೆಪಿ ಪ್ರತಿಕ್ರಿಯಿಸಬೇಕಿದೆ’ ಎಂದಿದ್ದಾರೆ.</p><p>ಇದೇ ವರ್ಷ ಮಾರ್ಚ್ನಲ್ಲಿ ನಡೆದ ಹಾಸ್ಯ ಕಾರ್ಯಕ್ರಮವೊಂದರಲ್ಲಿ ಕಾಮ್ರಾ, ಮಹಾರಾಷ್ಟ್ರ ಡಿಸಿಎಂ ಏಕನಾಥ ಶಿಂದೆ ಕುರಿತು ಹಾಸ್ಯ ಮಾಡಿದ್ದರು. ಇದು ವಿವಾದ ರೂಪ ಪಡೆದುಕೊಂಡಿದ್ದು, ಶಿಂದೆ ಬೆಂಬಲಿಗರು ಕಾರ್ಯಕ್ರಮ ನಡೆದ ಸ್ಥಳಕ್ಕೆ ನುಗ್ಗಿ ದಾಂಧಲೆ ನಡೆಸಿದ್ದರು.</p><p>ಏನತ್ಮಧ್ಯೆ, ಹೊಸ ವಿವಾದದ ಕುರಿತು ಪ್ರತಿಕ್ರಿಯಿಸಿರುವ ಕಾಮ್ರಾ, ‘ಇದು ಕಾಮಿಡಿ ಕ್ಲಬ್ನಲ್ಲಿ ಕ್ಲಿಕ್ಕಿಸಿರುವ ಫೋಟೊವಲ್ಲ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>