<p><strong>ಮುಂಬೈ</strong>: ‘ಹಾಸ್ಯ ಕಲಾವಿದ ಕುನಾಲ್ ಕಾಮ್ರಾ ಮುಂಬೈಗೆ ಕಾಲಿಟ್ಟರೆ, ಅವರನ್ನು ಶಿವಸೇನಾ ಶೈಲಿಯಲ್ಲಿ ಸ್ವಾಗತ ಮಾಡಲಾಗುವುದು’ ಎಂದು ಶಿವಸೇನಾ ಮುಖಂಡ ರಾಹುಲ್ ಕನಾಲ್ ಎಚ್ಚರಿಕೆ ನೀಡಿದ್ದಾರೆ.</p>.<p>ಕಾರ್ಯಕ್ರಮವೊಂದರಲ್ಲಿ ಕಾಮ್ರಾ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಏಕನಾಥ ಶಿಂದೆ ಅವರನ್ನು ‘ವಂಚಕ’ ಎಂದು ಕರೆದಿದ್ದರು. ಇದರಿಂದ ಸಿಟ್ಟಿಗೆದ್ದಿದ್ದ ಶಿವಸೈನಿಕರ ಗುಂಪೊಂದು ರಾಹುಲ್ ಕನಾಲ್ ನೇತೃತ್ವದಲ್ಲಿ ಮಾರ್ಚ್ 23ರಂದು ಕಾಮ್ರಾ ಕಾರ್ಯಕ್ರಮ ನೀಡಿದ್ದ ಸ್ಟುಡಿಯೊವನ್ನು ಧ್ವಂಸ ಮಾಡಿತ್ತು.</p>.<p>‘ಶಿವಸೈನಿಕರು ಪ್ರತಿ ಸೋಮವಾರ ಹಾಗೂ ಗುರುವಾರ ಪೊಲೀಸ್ ಠಾಣೆಯ ಮುಂದೆ ಹಾಜರಾಗುತ್ತಿದ್ದಾರೆ. ಕಾಮ್ರಾ ಪ್ರಕರಣದ ಸ್ಥಿತಿಗತಿ ಕುರಿತು ವಿಚಾರಿಸುತ್ತಿದ್ದೇವೆ. ಆದಷ್ಟು ಬೇಗ ಅವರನ್ನು ಮುಂಬೈ ಪೊಲೀಸರು ಕರೆತರಲಿದ್ದಾರೆ’ ಎಂದು ತಿಳಿಸಿದರು.</p>.<p class="bodytext">‘ಮುಂಬೈ ನಗರವು ‘ಅತಿಥಿ ದೇವೋಭವ’ ತತ್ವವನ್ನು ಪಾಲಿಸುತ್ತದೆ. ನಾವು ಶಿವಸೇನಾ ಶೈಲಿಯಲ್ಲಿಯೇ, ಮುಂಬೈಗೆ ಬಂದರೆ ಕಾಮ್ರಾ ಅವರನ್ನು ಸ್ವಾಗತಿಸಲಿದ್ದೇವೆ’ ಎಂದು ಕನಾಲ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ‘ಹಾಸ್ಯ ಕಲಾವಿದ ಕುನಾಲ್ ಕಾಮ್ರಾ ಮುಂಬೈಗೆ ಕಾಲಿಟ್ಟರೆ, ಅವರನ್ನು ಶಿವಸೇನಾ ಶೈಲಿಯಲ್ಲಿ ಸ್ವಾಗತ ಮಾಡಲಾಗುವುದು’ ಎಂದು ಶಿವಸೇನಾ ಮುಖಂಡ ರಾಹುಲ್ ಕನಾಲ್ ಎಚ್ಚರಿಕೆ ನೀಡಿದ್ದಾರೆ.</p>.<p>ಕಾರ್ಯಕ್ರಮವೊಂದರಲ್ಲಿ ಕಾಮ್ರಾ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಏಕನಾಥ ಶಿಂದೆ ಅವರನ್ನು ‘ವಂಚಕ’ ಎಂದು ಕರೆದಿದ್ದರು. ಇದರಿಂದ ಸಿಟ್ಟಿಗೆದ್ದಿದ್ದ ಶಿವಸೈನಿಕರ ಗುಂಪೊಂದು ರಾಹುಲ್ ಕನಾಲ್ ನೇತೃತ್ವದಲ್ಲಿ ಮಾರ್ಚ್ 23ರಂದು ಕಾಮ್ರಾ ಕಾರ್ಯಕ್ರಮ ನೀಡಿದ್ದ ಸ್ಟುಡಿಯೊವನ್ನು ಧ್ವಂಸ ಮಾಡಿತ್ತು.</p>.<p>‘ಶಿವಸೈನಿಕರು ಪ್ರತಿ ಸೋಮವಾರ ಹಾಗೂ ಗುರುವಾರ ಪೊಲೀಸ್ ಠಾಣೆಯ ಮುಂದೆ ಹಾಜರಾಗುತ್ತಿದ್ದಾರೆ. ಕಾಮ್ರಾ ಪ್ರಕರಣದ ಸ್ಥಿತಿಗತಿ ಕುರಿತು ವಿಚಾರಿಸುತ್ತಿದ್ದೇವೆ. ಆದಷ್ಟು ಬೇಗ ಅವರನ್ನು ಮುಂಬೈ ಪೊಲೀಸರು ಕರೆತರಲಿದ್ದಾರೆ’ ಎಂದು ತಿಳಿಸಿದರು.</p>.<p class="bodytext">‘ಮುಂಬೈ ನಗರವು ‘ಅತಿಥಿ ದೇವೋಭವ’ ತತ್ವವನ್ನು ಪಾಲಿಸುತ್ತದೆ. ನಾವು ಶಿವಸೇನಾ ಶೈಲಿಯಲ್ಲಿಯೇ, ಮುಂಬೈಗೆ ಬಂದರೆ ಕಾಮ್ರಾ ಅವರನ್ನು ಸ್ವಾಗತಿಸಲಿದ್ದೇವೆ’ ಎಂದು ಕನಾಲ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>