<p><strong>ಹೈದರಾಬಾದ್</strong>: ಹೈದರಾಬಾದ್ನಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಸಂಸ್ಥೆಯ ಸ್ಲೀಪರ್ ಎಸಿ ಬಸ್ ಬೆಂಕಿ ಹೊತ್ತಿಕೊಂಡು 19 ಪ್ರಯಾಣಿಕರ ಸಜೀವ ದಹನಕ್ಕೆ ಕಾರಣವಾಗಿದ್ದ ಬೈಕ್ ಸವಾರ ಮದ್ಯದ ಅಮಲಿನಲ್ಲಿದ್ದನು ಎಂದು ವಿಧಿ ವಿಜ್ಞಾನ ವರದಿ ಬಹಿರಂಗಪಡಿಸಿವೆ.</p><p>ಮೃತಪಟ್ಟ ಬೈಕ್ ಸವಾರನ ಸಹಚರ ಯೆರ್ರಿಸ್ವಾಮಿ, ಹಿಂಬದಿ ಸವಾರನಾಗಿದ್ದು, ಇಬ್ಬರೂ ಮದ್ಯ ಸೇವಿಸಿದ್ದಾಗಿ ಕರ್ನೂಲ್ ಪೊಲೀಸರ ಬಳಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ.</p>.Women's World Cup: INDW vs BNGW; ಟಾಸ್ ಗೆದ್ದ ಭಾರತ, ಫೀಲ್ಡಿಂಗ್ ಆಯ್ಕೆ.ಭಾರತೀಯ ಕರಾವಳಿ ರಕ್ಷಣಾ ಪಡೆಯಿಂದ 31 ಮೀನುಗಾರರ ರಕ್ಷಣೆ. <p>ಮೃತ ವ್ಯಕ್ತಿಯ ಮರಣೋತ್ತರ ಪರೀಕ್ಷೆ ವೇಳೆ ಮದ್ಯ ಸೇವಿಸಿರುವುದು ಪತ್ತೆಯಾಗಿದೆ. ಈ ಕಾರಣದಿಂದಾಗಿ ಈ ದುರಂತ ಸಂಭವಿಸಿದೆ. ಈ ಬಗ್ಗೆ ಕರ್ನೂಲ್ನ ಪ್ರಾದೇಶಿಕ ವಿಧಿವಿಜ್ಞಾನ ವಿಜ್ಞಾನ ಪ್ರಯೋಗಾಲಯ (ಆರ್ಎಫ್ಎಸ್ಎಲ್) ವಿಶ್ಲೇಷಣಾ ವರದಿಯನ್ನು ಸಲ್ಲಿಸಿದೆ ಎಂದು ಕರ್ನೂಲ್ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಾಂತ್ ಪಾಟೀಲ್ ಭಾನುವಾರ ತಿಳಿಸಿದ್ದಾರೆ.</p><p>ಈ ಅಪಘಾತಕ್ಕೂ ಮೊದಲೇ ಬೈಕ್ ಸವಾರ ‘ಸ್ಕಿಡ್’ ಆಗಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಮೃತಪಟ್ಟಿದ್ದ ಎಂಬುದು ಗೊತ್ತಾಗಿದೆ. ಆ ನಂತರ ಬಸ್ ಈ ಬೈಕಿಗೆ ಡಿಕ್ಕಿ ಹೊಡೆದು, ಕೆಲ ದೂರ ಎಳೆದೊಯ್ದಿದೆ. ಅದೇ ವೇಳೆ ಬೈಕ್ನ ಪೆಟ್ರೋಲ್ ಟ್ಯಾಂಕ್ ಸೋರಿಕೆಯಾಗಿದೆ. ಈ ಸಂದರ್ಭದಲ್ಲಿ ಆದ ಘರ್ಷಣೆಯಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಪೊಲೀಸರು ವಿವರಿಸಿದ್ದಾರೆ. </p><p>ಏತನ್ಮಧ್ಯೆ, ಪ್ರಯಾಣಿಕನೊಬ್ಬರ ದೂರಿನ ಆಧಾರದ ಮೇಲೆ ಕಾವೇರಿ ಟ್ರಾವೆಲ್ಸ್ನ ಚಾಲಕ ಮತ್ತು ಮಾಲೀಕರ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p>.ನಾಲ್ಕು ವರ್ಷಗಳ ಬಳಿಕ ಭಾರತ–ಚೀನಾ ನೇರ ವಿಮಾನ ಹಾರಾಟ ಆರಂಭ.‘ಇಂಡಿಯಾ’ ಬಣ ಅಧಿಕಾರಕ್ಕೆ ಬಂದರೆ ವಕ್ಫ್ ಕಾಯ್ದೆ ಕಸದ ಬುಟ್ಟಿಗೆ: ತೇಜಸ್ವಿ.ಕರ್ನಾಟಕ ಸೇರಿ ದೇಶದ ವಿವಿಧೆಡೆ ಬೆಳೆಯುವ ಕಾಫಿಯನ್ನು ಕೊಂಡಾಡಿದ ಮೋದಿ.ಕಾಳಿ ನದಿ: ರಕ್ಷಣೆಗೆ ಹಾಕಿದ್ದ ತಂತಿಬೇಲಿ ದಾಟಿ ಬಂದ ಮೊಸಳೆ!.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್</strong>: ಹೈದರಾಬಾದ್ನಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಸಂಸ್ಥೆಯ ಸ್ಲೀಪರ್ ಎಸಿ ಬಸ್ ಬೆಂಕಿ ಹೊತ್ತಿಕೊಂಡು 19 ಪ್ರಯಾಣಿಕರ ಸಜೀವ ದಹನಕ್ಕೆ ಕಾರಣವಾಗಿದ್ದ ಬೈಕ್ ಸವಾರ ಮದ್ಯದ ಅಮಲಿನಲ್ಲಿದ್ದನು ಎಂದು ವಿಧಿ ವಿಜ್ಞಾನ ವರದಿ ಬಹಿರಂಗಪಡಿಸಿವೆ.</p><p>ಮೃತಪಟ್ಟ ಬೈಕ್ ಸವಾರನ ಸಹಚರ ಯೆರ್ರಿಸ್ವಾಮಿ, ಹಿಂಬದಿ ಸವಾರನಾಗಿದ್ದು, ಇಬ್ಬರೂ ಮದ್ಯ ಸೇವಿಸಿದ್ದಾಗಿ ಕರ್ನೂಲ್ ಪೊಲೀಸರ ಬಳಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ.</p>.Women's World Cup: INDW vs BNGW; ಟಾಸ್ ಗೆದ್ದ ಭಾರತ, ಫೀಲ್ಡಿಂಗ್ ಆಯ್ಕೆ.ಭಾರತೀಯ ಕರಾವಳಿ ರಕ್ಷಣಾ ಪಡೆಯಿಂದ 31 ಮೀನುಗಾರರ ರಕ್ಷಣೆ. <p>ಮೃತ ವ್ಯಕ್ತಿಯ ಮರಣೋತ್ತರ ಪರೀಕ್ಷೆ ವೇಳೆ ಮದ್ಯ ಸೇವಿಸಿರುವುದು ಪತ್ತೆಯಾಗಿದೆ. ಈ ಕಾರಣದಿಂದಾಗಿ ಈ ದುರಂತ ಸಂಭವಿಸಿದೆ. ಈ ಬಗ್ಗೆ ಕರ್ನೂಲ್ನ ಪ್ರಾದೇಶಿಕ ವಿಧಿವಿಜ್ಞಾನ ವಿಜ್ಞಾನ ಪ್ರಯೋಗಾಲಯ (ಆರ್ಎಫ್ಎಸ್ಎಲ್) ವಿಶ್ಲೇಷಣಾ ವರದಿಯನ್ನು ಸಲ್ಲಿಸಿದೆ ಎಂದು ಕರ್ನೂಲ್ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಾಂತ್ ಪಾಟೀಲ್ ಭಾನುವಾರ ತಿಳಿಸಿದ್ದಾರೆ.</p><p>ಈ ಅಪಘಾತಕ್ಕೂ ಮೊದಲೇ ಬೈಕ್ ಸವಾರ ‘ಸ್ಕಿಡ್’ ಆಗಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಮೃತಪಟ್ಟಿದ್ದ ಎಂಬುದು ಗೊತ್ತಾಗಿದೆ. ಆ ನಂತರ ಬಸ್ ಈ ಬೈಕಿಗೆ ಡಿಕ್ಕಿ ಹೊಡೆದು, ಕೆಲ ದೂರ ಎಳೆದೊಯ್ದಿದೆ. ಅದೇ ವೇಳೆ ಬೈಕ್ನ ಪೆಟ್ರೋಲ್ ಟ್ಯಾಂಕ್ ಸೋರಿಕೆಯಾಗಿದೆ. ಈ ಸಂದರ್ಭದಲ್ಲಿ ಆದ ಘರ್ಷಣೆಯಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಪೊಲೀಸರು ವಿವರಿಸಿದ್ದಾರೆ. </p><p>ಏತನ್ಮಧ್ಯೆ, ಪ್ರಯಾಣಿಕನೊಬ್ಬರ ದೂರಿನ ಆಧಾರದ ಮೇಲೆ ಕಾವೇರಿ ಟ್ರಾವೆಲ್ಸ್ನ ಚಾಲಕ ಮತ್ತು ಮಾಲೀಕರ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p>.ನಾಲ್ಕು ವರ್ಷಗಳ ಬಳಿಕ ಭಾರತ–ಚೀನಾ ನೇರ ವಿಮಾನ ಹಾರಾಟ ಆರಂಭ.‘ಇಂಡಿಯಾ’ ಬಣ ಅಧಿಕಾರಕ್ಕೆ ಬಂದರೆ ವಕ್ಫ್ ಕಾಯ್ದೆ ಕಸದ ಬುಟ್ಟಿಗೆ: ತೇಜಸ್ವಿ.ಕರ್ನಾಟಕ ಸೇರಿ ದೇಶದ ವಿವಿಧೆಡೆ ಬೆಳೆಯುವ ಕಾಫಿಯನ್ನು ಕೊಂಡಾಡಿದ ಮೋದಿ.ಕಾಳಿ ನದಿ: ರಕ್ಷಣೆಗೆ ಹಾಕಿದ್ದ ತಂತಿಬೇಲಿ ದಾಟಿ ಬಂದ ಮೊಸಳೆ!.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>