<p><strong>ಪಟ್ನಾ: </strong>ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ಜೆಡಿಯು ಮುಖಂಡ ಉಪೇಂದ್ರ ಕುಶ್ವಾಹ ಅವರು ಸೋಮವಾರ ಹೇಳಿದ್ದು, ನೂತನ ಪಕ್ಷ ‘ರಾಷ್ಟ್ರೀಯ ಲೋಕ ಜನತಾ ದಳ’ ರಚಿಸಿರುವುದಾಗಿ ಘೋಷಿಸಿದ್ದಾರೆ.</p>.<p>ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನ ಪರಿಷತ್ ಸಭಾಪತಿಯನ್ನು ಭೇಟಿಯಾಗಿ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುವುದಾಗಿ ಹೇಳಿದ್ದಾರೆ.</p>.<p>‘ನಾನು ನನ್ನ ಹಿರಿಯಣ್ಣ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಂದ ಕೆಲವು ಪಾಠಗಳನ್ನು ಕಲಿತಿದ್ದೇನೆ’ ಎಂದೂ ಅವರು ಹೇಳಿದರು.</p>.<p>‘ನಿತೀಶ್ ಕುಮಾರ್ ಅವರು ತನ್ನ ರಾಜಕೀಯ ಬಂಡವಾಳವನ್ನು ‘ಗಿರವಿ’ ಇಟ್ಟಿದ್ದಾರೆ ಎಂದು ಆರೋಪಿಸಿದ ಕುಶ್ವಾಹ, ಉಪಮುಖ್ಯಮಂತ್ರಿ ಹಾಗೂ ಆರ್ಜೆಡಿ ಮುಖಂಡ ತೇಜಸ್ವಿ ಯಾದವ್ ಅವರನ್ನು ಭವಿಷ್ಯದ ನಾಯಕ ಎಂದು ಘೋಷಿಸಿರುವುದಕ್ಕೆ ಅವರ ಹೆಸರು ಉಲ್ಲೇಖಿಸದೆ ಅಸಮಾಧಾನ ವ್ಯಕ್ತಪಡಿಸಿದರು.</p>.<p>2021ರಲ್ಲಿ ಜೆಡಿಯುಗೆ ಮರಳಿದ್ದ ಕುಶ್ವಾಹ ಅವರು, ತಮ್ಮ ರಾಷ್ಟ್ರೀಯ ಲೋಕ ಸಮತಾ ಪಕ್ಷವನ್ನು ಅದರೊಂದಿಗೆ ವಿಲೀನಗೊಳಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ: </strong>ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ಜೆಡಿಯು ಮುಖಂಡ ಉಪೇಂದ್ರ ಕುಶ್ವಾಹ ಅವರು ಸೋಮವಾರ ಹೇಳಿದ್ದು, ನೂತನ ಪಕ್ಷ ‘ರಾಷ್ಟ್ರೀಯ ಲೋಕ ಜನತಾ ದಳ’ ರಚಿಸಿರುವುದಾಗಿ ಘೋಷಿಸಿದ್ದಾರೆ.</p>.<p>ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನ ಪರಿಷತ್ ಸಭಾಪತಿಯನ್ನು ಭೇಟಿಯಾಗಿ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುವುದಾಗಿ ಹೇಳಿದ್ದಾರೆ.</p>.<p>‘ನಾನು ನನ್ನ ಹಿರಿಯಣ್ಣ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಂದ ಕೆಲವು ಪಾಠಗಳನ್ನು ಕಲಿತಿದ್ದೇನೆ’ ಎಂದೂ ಅವರು ಹೇಳಿದರು.</p>.<p>‘ನಿತೀಶ್ ಕುಮಾರ್ ಅವರು ತನ್ನ ರಾಜಕೀಯ ಬಂಡವಾಳವನ್ನು ‘ಗಿರವಿ’ ಇಟ್ಟಿದ್ದಾರೆ ಎಂದು ಆರೋಪಿಸಿದ ಕುಶ್ವಾಹ, ಉಪಮುಖ್ಯಮಂತ್ರಿ ಹಾಗೂ ಆರ್ಜೆಡಿ ಮುಖಂಡ ತೇಜಸ್ವಿ ಯಾದವ್ ಅವರನ್ನು ಭವಿಷ್ಯದ ನಾಯಕ ಎಂದು ಘೋಷಿಸಿರುವುದಕ್ಕೆ ಅವರ ಹೆಸರು ಉಲ್ಲೇಖಿಸದೆ ಅಸಮಾಧಾನ ವ್ಯಕ್ತಪಡಿಸಿದರು.</p>.<p>2021ರಲ್ಲಿ ಜೆಡಿಯುಗೆ ಮರಳಿದ್ದ ಕುಶ್ವಾಹ ಅವರು, ತಮ್ಮ ರಾಷ್ಟ್ರೀಯ ಲೋಕ ಸಮತಾ ಪಕ್ಷವನ್ನು ಅದರೊಂದಿಗೆ ವಿಲೀನಗೊಳಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>