‘ಮಾರ್ಚ್ 21ರಿಂದಲೇ ರಾಜ್ಯ ಸರ್ಕಾರ ಸಂಪೂರ್ಣ ಲಾಕ್ಡೌನ್ ಘೋಷಣೆ ಮಾಡಿದ್ದರಿಂದ ಯಾವುದೇ ಸಾರಿಗೆ ಸಂಪರ್ಕಗಳ ವ್ಯವಸ್ಥೆ ಇಲ್ಲ. ಕಾಲ್ನಡಿಗೆಯಲ್ಲಿ ಊರು ಸೇರುವುದು ಹೊರತುಪಡಿಸಿ ನಮಗೆ ಬೇರೆ ಆಯ್ಕೆ ಇಲ್ಲ. ಡಾಬಾಗಳೆಲ್ಲ ಮುಚ್ಚಿದ್ದು,ಊಟ ಸಿಗುವುದು ಕಷ್ಟವಾಗಿದೆ. ಸಿಕ್ಕಿದ್ದನ್ನು ತಿಂದು ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದೇವೆ. ಐದು ದಿನಗಳವರೆಗೆ ನಡೆದು, ಈಗ ಉತ್ತರಪ್ರದೇಶ ತಲುಪುತ್ತಿದ್ದೇವೆ’ ಎಂದು ಕಾರ್ಮಿಕ ಸುಧೀರ್ ತಿಳಿಸಿದರು.