<p><strong>ನವದೆಹಲಿ</strong>: ಕರ್ನಾಟಕ ಮೂಲದ ನ್ಯಾಯಮೂರ್ತಿ ಎಸ್.ಅಬ್ದುಲ್ ನಜೀರ್ ಅವರು ಸುಪ್ರೀಂ ಕೋರ್ಟ್ನಿಂದ ಬುಧವಾರ ನಿವೃತ್ತರಾದರು.</p>.<p>‘ನ್ಯಾಯಾಂಗದಲ್ಲಿ ಮಹಿಳೆಯರಿಗೆ ಸಾಕಷ್ಟು ಪ್ರಾತಿನಿಧ್ಯದ ಕೊರತೆ ಇದೆ ಮತ್ತು ನ್ಯಾಯಾಂಗವು ಲಿಂಗ ಅಸಮಾನತೆಗಳಿಂದ ಮುಕ್ತವಾಗಿದೆ ಎಂದು ಕರೆಯುವುದು ವಾಸ್ತವದಿಂದ ದೂರವಾಗಿತ್ತು’ ಎಂದು ಅವರು ಬೇಸರ ವ್ಯಕ್ತಪಡಿಸಿದರು.</p>.<p>ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ (ಎಸ್ಸಿಬಿಎ) ಆಯೋಜಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದ ನಜೀರ್, ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರ ಮಾರ್ಗದರ್ಶನದಲ್ಲಿ ಇಂದಿನ ಕ್ರಿಯಾತ್ಮಕ ಸನ್ನಿವೇಶದ ಸವಾಲುಗಳನ್ನು ಎದುರಿಸಲು ಸುಪ್ರೀಂ ಸಜ್ಜಾಗಿದೆ. ಆದರೆ, ಸುಧಾರಣೆಗೆ ಅವಕಾಶವಿತ್ತು ಎಂದರು. </p>.<p>‘ಸುಪ್ರೀಂ ಕೋರ್ಟ್ ಯಾವಾಗಲೂ ಉತ್ಕೃಷ್ಟತೆಗಾಗಿ ಶ್ರಮಿಸಿದೆ. ಸುಧಾರಣೆ ಮತ್ತು ಬದಲಾವಣೆಗಳಿಗೆ ಯಾವಾಗಲೂ ಅವಕಾಶವಿದೆ. ಉದಾಹರಣೆಗೆ, ಸಮಾಜದಲ್ಲಿ ಅಸ್ತಿತ್ವದಲ್ಲಿರುವ ಲಿಂಗ ಅಸಮಾನತೆಗಳಿಂದ ಭಾರತೀಯ ನ್ಯಾಯಾಂಗ ಮುಕ್ತವಾಗಿದೆ ಎಂದು ಹೇಳಿ<br />ದರೆ, ನಾನು ವಾಸ್ತವದಿಂದ ದೂರ<br />ವಿರಲು ಸಾಧ್ಯವಿಲ್ಲ. ನ್ಯಾಯಾಂಗದಲ್ಲಿ ಮಹಿಳೆಯರ ಪ್ರಾತಿನಿಧ್ಯ ಇನ್ನೂ ಕಡಿಮೆ ಇದೆ’ ಎಂದರು.</p>.<p>ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ‘ನಜೀರ್ ಅವರು ಯಾವಾಗಲೂ ನ್ಯಾಯದ ಪರವಾಗಿದ್ದರು ಹಾಗೂ ಸೂಕ್ತ ನ್ಯಾಯದಾನ ಒದಗಿಸುವುದನ್ನು ಖಾತರಿಪಡಿಸಿಕೊಳ್ಳುತ್ತಿದ್ದರು’ ಎಂದರು.</p>.<p class="Subhead"><strong>ಹಲವು ಮಹತ್ವದ ತೀರ್ಪು:</strong> ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿದ್ದ ಅವಧಿಯಲ್ಲಿ ನಜೀರ್ ಅವರು ಹಲವು ಮಹತ್ವದ ತೀರ್ಪು<br />ಗಳನ್ನು ಪ್ರಕಟಿಸಿದ್ದಾರೆ. ರಾಜಕೀಯ ಸೂಕ್ಷ್ಮತೆ ಹೊಂದಿದ್ದ ಅಯೋಧ್ಯೆ ಭೂವಿವಾದ, ತ್ರಿವಳಿ ತಲಾಕ್ ಹಾಗೂ ಖಾಸಗಿತನದ ಹಕ್ಕು ಕೂಡ ಮೂಲಭೂತ ಹಕ್ಕು ಎಂದು ಘೋಷಿಸಿದ ತೀರ್ಪು ಸೇರಿದಂತೆ ಹಲವು ಮಹತ್ವದ ಆದೇಶಗಳನ್ನು ಪ್ರಕಟಿಸಿದ್ದಾರೆ. </p>.<p>2018ರ ಫೆಬ್ರುವರಿ 17ರಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ಬಡ್ತಿ ಪಡೆದ ನಜೀರ್ ಅವರು, ಹಲವು ಸಾಂವಿಧಾನದ ಪೀಠಗಳ ಭಾಗವಾಗಿದ್ದರು. ₹500, ₹1000 ನೋಟುಗಳ ಅಮಾನ್ಯೀಕರಣ ಕಾನೂನುಬದ್ಧವಾಗಿದೆ ಎಂದು ತೀರ್ಪು ಕೊಟ್ಟ ಪಂಚ ಸದಸ್ಯರ ಸಾಂವಿಧಾನಿಕ ಪೀಠದಲ್ಲಿ ಇವರು ಒಬ್ಬರಾಗಿದ್ದರು.</p>.<p><strong>ಬದಲಿ ನಿವೇಶನ ವಾಪಸ್ಗೆ ಆದೇಶ</strong></p>.<p>ಮರು ಸ್ವಾಧೀನ ಪಡೆದಿರುವ ಅಥವಾ ಪೂರ್ಣ ಅಭಿವೃದ್ಧಿ ಹೊಂದಿದ ಬಡಾವಣೆಗಳಲ್ಲಿ ಸಾರ್ವಜನಿಕ ಹರಾಜಿನ ಮೂಲಕ ಮಾತ್ರ ನಿವೇಶನಗಳನ್ನು ಹಂಚಿಕೆ ಮಾಡಬೇಕು ಎಂದು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಅಬ್ದುಲ್ ನಜೀರ್ ನೇತೃತ್ವದ ನ್ಯಾಯಪೀಠ 2021ರ ಅಕ್ಟೋಬರ್ 29ರಂದು ಆದೇಶಿಸಿತ್ತು.</p>.<p>ಬೆಂಗಳೂರಿನಲ್ಲಿ ಪೂರ್ಣ ಪ್ರಮಾಣದಲ್ಲಿ ಅಭಿವೃದ್ಧಿ ಹೊಂದಿದ ಬಡಾವಣೆಯಲ್ಲಿ ರಾಜಕಾರಣಿಗಳಿಗೆ ಕಾನೂನುಬಾಹಿರವಾಗಿ ಬದಲಿ ನಿವೇಶನಗಳನ್ನು ಹಂಚಿಕೆ ಮಾಡಿದ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದ್ದ ನಜೀರ್ ನೇತೃತ್ವದ ನ್ಯಾಯಪೀಠ, ಈ ಬದಲಿ ನಿವೇಶನಗಳನ್ನು ಕಾನೂನು ಪ್ರಕ್ರಿಯೆಗಳ ಅನುಸಾರ ವಾಪಸ್ ಪಡೆಯುವಂತೆ ಪ್ರಾಧಿಕಾರಕ್ಕೆ ಈ ವರ್ಷದ ಸೆಪ್ಟೆಂಬರ್ನಲ್ಲಿ ಆದೇಶ ನೀಡಿತ್ತು. </p>.<p>ಈ ಪ್ರಕರಣದಲ್ಲಿ ಪ್ರಾಧಿಕಾರದ ಆಯುಕ್ತರಾಗಿದ್ದ ಎಂ.ಬಿ.ರಾಜೇಶ ಗೌಡ ಹಾಗೂ ಇಬ್ಬರು ಉಪ ಕಾರ್ಯದರ್ಶಿಗಳ ವರ್ಗಾವಣೆಗೂ ನ್ಯಾಯಪೀಠ ಆದೇಶಿಸಿತ್ತು. ಬೆಂಗಳೂರಿನ ಶಿವರಾಮ ಕಾರಂತ ಬಡಾವಣೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ನ್ಯಾಯಪೀಠ ಹಲವು ಆದೇಶಗಳನ್ನು ನೀಡಿತ್ತು. </p>.<p>ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯಲ್ಲಿ 1958ರ ಜನವರಿ 5ರಂದು ಜನಿಸಿದ ನಜೀರ್ ಅವರು, 1983ರ ಫೆಬ್ರುವರಿಯಲ್ಲಿ ವಕೀಲರಾಗಿ ಸೇವೆ ಆರಂಭಿಸಿದರು. 2003ರ ಮೇ 12ರಂದು ಅವರು ಕರ್ನಾಟಕ ಹೈಕೋರ್ಟ್ನ ಹೆಚ್ಚುವರಿ ನ್ಯಾಯಮೂರ್ತಿ<br />ಯಾಗಿ ನೇಮಕಗೊಂಡರು. 2004ರ ಸೆಪ್ಟೆಂಬರ್ನಲ್ಲಿ ಅವರು ಕಾಯಂ ನ್ಯಾಯಮೂರ್ತಿಯಾಗಿ ಬಡ್ತಿ<br />ಪಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕರ್ನಾಟಕ ಮೂಲದ ನ್ಯಾಯಮೂರ್ತಿ ಎಸ್.ಅಬ್ದುಲ್ ನಜೀರ್ ಅವರು ಸುಪ್ರೀಂ ಕೋರ್ಟ್ನಿಂದ ಬುಧವಾರ ನಿವೃತ್ತರಾದರು.</p>.<p>‘ನ್ಯಾಯಾಂಗದಲ್ಲಿ ಮಹಿಳೆಯರಿಗೆ ಸಾಕಷ್ಟು ಪ್ರಾತಿನಿಧ್ಯದ ಕೊರತೆ ಇದೆ ಮತ್ತು ನ್ಯಾಯಾಂಗವು ಲಿಂಗ ಅಸಮಾನತೆಗಳಿಂದ ಮುಕ್ತವಾಗಿದೆ ಎಂದು ಕರೆಯುವುದು ವಾಸ್ತವದಿಂದ ದೂರವಾಗಿತ್ತು’ ಎಂದು ಅವರು ಬೇಸರ ವ್ಯಕ್ತಪಡಿಸಿದರು.</p>.<p>ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ (ಎಸ್ಸಿಬಿಎ) ಆಯೋಜಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದ ನಜೀರ್, ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರ ಮಾರ್ಗದರ್ಶನದಲ್ಲಿ ಇಂದಿನ ಕ್ರಿಯಾತ್ಮಕ ಸನ್ನಿವೇಶದ ಸವಾಲುಗಳನ್ನು ಎದುರಿಸಲು ಸುಪ್ರೀಂ ಸಜ್ಜಾಗಿದೆ. ಆದರೆ, ಸುಧಾರಣೆಗೆ ಅವಕಾಶವಿತ್ತು ಎಂದರು. </p>.<p>‘ಸುಪ್ರೀಂ ಕೋರ್ಟ್ ಯಾವಾಗಲೂ ಉತ್ಕೃಷ್ಟತೆಗಾಗಿ ಶ್ರಮಿಸಿದೆ. ಸುಧಾರಣೆ ಮತ್ತು ಬದಲಾವಣೆಗಳಿಗೆ ಯಾವಾಗಲೂ ಅವಕಾಶವಿದೆ. ಉದಾಹರಣೆಗೆ, ಸಮಾಜದಲ್ಲಿ ಅಸ್ತಿತ್ವದಲ್ಲಿರುವ ಲಿಂಗ ಅಸಮಾನತೆಗಳಿಂದ ಭಾರತೀಯ ನ್ಯಾಯಾಂಗ ಮುಕ್ತವಾಗಿದೆ ಎಂದು ಹೇಳಿ<br />ದರೆ, ನಾನು ವಾಸ್ತವದಿಂದ ದೂರ<br />ವಿರಲು ಸಾಧ್ಯವಿಲ್ಲ. ನ್ಯಾಯಾಂಗದಲ್ಲಿ ಮಹಿಳೆಯರ ಪ್ರಾತಿನಿಧ್ಯ ಇನ್ನೂ ಕಡಿಮೆ ಇದೆ’ ಎಂದರು.</p>.<p>ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ‘ನಜೀರ್ ಅವರು ಯಾವಾಗಲೂ ನ್ಯಾಯದ ಪರವಾಗಿದ್ದರು ಹಾಗೂ ಸೂಕ್ತ ನ್ಯಾಯದಾನ ಒದಗಿಸುವುದನ್ನು ಖಾತರಿಪಡಿಸಿಕೊಳ್ಳುತ್ತಿದ್ದರು’ ಎಂದರು.</p>.<p class="Subhead"><strong>ಹಲವು ಮಹತ್ವದ ತೀರ್ಪು:</strong> ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿದ್ದ ಅವಧಿಯಲ್ಲಿ ನಜೀರ್ ಅವರು ಹಲವು ಮಹತ್ವದ ತೀರ್ಪು<br />ಗಳನ್ನು ಪ್ರಕಟಿಸಿದ್ದಾರೆ. ರಾಜಕೀಯ ಸೂಕ್ಷ್ಮತೆ ಹೊಂದಿದ್ದ ಅಯೋಧ್ಯೆ ಭೂವಿವಾದ, ತ್ರಿವಳಿ ತಲಾಕ್ ಹಾಗೂ ಖಾಸಗಿತನದ ಹಕ್ಕು ಕೂಡ ಮೂಲಭೂತ ಹಕ್ಕು ಎಂದು ಘೋಷಿಸಿದ ತೀರ್ಪು ಸೇರಿದಂತೆ ಹಲವು ಮಹತ್ವದ ಆದೇಶಗಳನ್ನು ಪ್ರಕಟಿಸಿದ್ದಾರೆ. </p>.<p>2018ರ ಫೆಬ್ರುವರಿ 17ರಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ಬಡ್ತಿ ಪಡೆದ ನಜೀರ್ ಅವರು, ಹಲವು ಸಾಂವಿಧಾನದ ಪೀಠಗಳ ಭಾಗವಾಗಿದ್ದರು. ₹500, ₹1000 ನೋಟುಗಳ ಅಮಾನ್ಯೀಕರಣ ಕಾನೂನುಬದ್ಧವಾಗಿದೆ ಎಂದು ತೀರ್ಪು ಕೊಟ್ಟ ಪಂಚ ಸದಸ್ಯರ ಸಾಂವಿಧಾನಿಕ ಪೀಠದಲ್ಲಿ ಇವರು ಒಬ್ಬರಾಗಿದ್ದರು.</p>.<p><strong>ಬದಲಿ ನಿವೇಶನ ವಾಪಸ್ಗೆ ಆದೇಶ</strong></p>.<p>ಮರು ಸ್ವಾಧೀನ ಪಡೆದಿರುವ ಅಥವಾ ಪೂರ್ಣ ಅಭಿವೃದ್ಧಿ ಹೊಂದಿದ ಬಡಾವಣೆಗಳಲ್ಲಿ ಸಾರ್ವಜನಿಕ ಹರಾಜಿನ ಮೂಲಕ ಮಾತ್ರ ನಿವೇಶನಗಳನ್ನು ಹಂಚಿಕೆ ಮಾಡಬೇಕು ಎಂದು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಅಬ್ದುಲ್ ನಜೀರ್ ನೇತೃತ್ವದ ನ್ಯಾಯಪೀಠ 2021ರ ಅಕ್ಟೋಬರ್ 29ರಂದು ಆದೇಶಿಸಿತ್ತು.</p>.<p>ಬೆಂಗಳೂರಿನಲ್ಲಿ ಪೂರ್ಣ ಪ್ರಮಾಣದಲ್ಲಿ ಅಭಿವೃದ್ಧಿ ಹೊಂದಿದ ಬಡಾವಣೆಯಲ್ಲಿ ರಾಜಕಾರಣಿಗಳಿಗೆ ಕಾನೂನುಬಾಹಿರವಾಗಿ ಬದಲಿ ನಿವೇಶನಗಳನ್ನು ಹಂಚಿಕೆ ಮಾಡಿದ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದ್ದ ನಜೀರ್ ನೇತೃತ್ವದ ನ್ಯಾಯಪೀಠ, ಈ ಬದಲಿ ನಿವೇಶನಗಳನ್ನು ಕಾನೂನು ಪ್ರಕ್ರಿಯೆಗಳ ಅನುಸಾರ ವಾಪಸ್ ಪಡೆಯುವಂತೆ ಪ್ರಾಧಿಕಾರಕ್ಕೆ ಈ ವರ್ಷದ ಸೆಪ್ಟೆಂಬರ್ನಲ್ಲಿ ಆದೇಶ ನೀಡಿತ್ತು. </p>.<p>ಈ ಪ್ರಕರಣದಲ್ಲಿ ಪ್ರಾಧಿಕಾರದ ಆಯುಕ್ತರಾಗಿದ್ದ ಎಂ.ಬಿ.ರಾಜೇಶ ಗೌಡ ಹಾಗೂ ಇಬ್ಬರು ಉಪ ಕಾರ್ಯದರ್ಶಿಗಳ ವರ್ಗಾವಣೆಗೂ ನ್ಯಾಯಪೀಠ ಆದೇಶಿಸಿತ್ತು. ಬೆಂಗಳೂರಿನ ಶಿವರಾಮ ಕಾರಂತ ಬಡಾವಣೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ನ್ಯಾಯಪೀಠ ಹಲವು ಆದೇಶಗಳನ್ನು ನೀಡಿತ್ತು. </p>.<p>ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯಲ್ಲಿ 1958ರ ಜನವರಿ 5ರಂದು ಜನಿಸಿದ ನಜೀರ್ ಅವರು, 1983ರ ಫೆಬ್ರುವರಿಯಲ್ಲಿ ವಕೀಲರಾಗಿ ಸೇವೆ ಆರಂಭಿಸಿದರು. 2003ರ ಮೇ 12ರಂದು ಅವರು ಕರ್ನಾಟಕ ಹೈಕೋರ್ಟ್ನ ಹೆಚ್ಚುವರಿ ನ್ಯಾಯಮೂರ್ತಿ<br />ಯಾಗಿ ನೇಮಕಗೊಂಡರು. 2004ರ ಸೆಪ್ಟೆಂಬರ್ನಲ್ಲಿ ಅವರು ಕಾಯಂ ನ್ಯಾಯಮೂರ್ತಿಯಾಗಿ ಬಡ್ತಿ<br />ಪಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>