<p><strong>ಶ್ರೀನಗರ</strong>: ಲಡಾಖ್ಗೆ ರಾಜ್ಯದ ಸ್ಥಾನಮಾನ ನೀಡುವಂತೆ ಆಗ್ರಹಿಸಿ ಹೋರಾಟ ನಡೆಸುತ್ತಿರುವ ಸಂಘಟನೆಗಳು ತಮ್ಮ ನಿಲುವನ್ನು ಇನ್ನಷ್ಟು ಬಿಗಿಗೊಳಿಸಿವೆ. ಲೇಹ್ ಅಪೆಕ್ಸ್ ಬಾಡಿ (ಎಬಿಎಲ್) ಸಂಘಟನೆಯು ಕೇಂದ್ರ ಗೃಹ ಸಚಿವಾಲಯದ ಜತೆಗಿನ ಮಾತುಕತೆಯಿಂದ ಹಿಂದೆ ಸರಿದಿದೆ.</p>.<p>ಪರಿಸರ ಹೋರಾಟಗಾರ ಸೊನಮ್ ವಾಂಗ್ಚೂಕ್ ಅವರನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ಕಾರ್ಗಿಲ್ ಪ್ರಜಾಸತ್ತಾತ್ಮಕ ಒಕ್ಕೂಟ (ಕೆಡಿಎ) ಒತ್ತಾಯಿಸಿದೆ.</p>.<p>ಪ್ರಜಾಸತ್ತಾತ್ಮಕವಾಗಿ ನಡೆಸುತ್ತಿರುವ ಚಳವಳಿಯನ್ನು ಅಪರಾಧ ಎಂಬಂತೆ ಬಿಂಬಿಸುತ್ತಿರುವ ಕಾರಣ ಮಾತುಕತೆ ನಡೆಸಲು ಸಾಧ್ಯವಿಲ್ಲ ಎಂದು ಎಬಿಎಲ್ ಸೋಮವಾರ ಹೇಳಿದೆ. ಅಕ್ಟೋಬರ್ 6ರಂದು ನವದೆಹಲಿಯಲ್ಲಿ ನಿಗದಿಪಡಿಸಿದ್ದ ಮಾತುಕತೆಯಿಂದ ಹಿಂದೆ ಸರಿದಿರುವುದಕ್ಕೆ ಮೂರು ಕಾರಣಗಳನ್ನು ನೀಡಿದೆ.</p>.<p>‘ವಾಂಗ್ಚೂಕ್ ಅವರ ಬಂಧನ, ಪ್ರತಿಭಟನೆಯನ್ನು ‘ರಾಷ್ಟ್ರವಿರೋಧಿ’ ಎಂದು ಕರೆದಿರುವುದು ಹಾಗೂ ಲೇಹ್ನಲ್ಲಿ ನಡೆದ ಪ್ರತಿಭಟನೆ ವೇಳೆ ಪೊಲೀಸರ ಗುಂಡಿನ ನಾಲ್ವರು ಬಲಿಯಾಗಿರುವುದನ್ನು ಖಂಡಿಸಿ ಮಾತುಕತೆಯಿಂದ ಹಿಂದೆ ಸರಿಯುತ್ತಿದ್ದೇವೆ’ ಎಂದು ಹೇಳಿದೆ.</p>.<p>‘ಶಾಂತಿಯುತ ಬೇಡಿಕೆಗಳಿಗೆ ಜೈಲು ಮತ್ತು ಗುಂಡುಗಳಿಂದ ಪ್ರತಿಕ್ರಿಯಿಸುವ ಮೂಲಕ ಕೇಂದ್ರವು ಲಡಾಖ್ನ ಜನರ ನಂಬಿಕೆಗೆ ದ್ರೋಹ ಬಗೆದಿದೆ’ ಎಂದು ಎಬಿಎಲ್ ನಾಯಕರೊಬ್ಬರು ಹೇಳಿದ್ದಾರೆ.</p>.<p>ಲಡಾಖ್ಗೆ ರಾಜ್ಯದ ಸ್ಥಾನಮಾನ ನೀಡುವಂತೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆ ಕಳೆದ ಬುಧವಾರ ಹಿಂಸಾಚಾರಕ್ಕೆ ತಿರುಗಿತ್ತು. ಪೊಲೀಸರ ಗುಂಡಿಗೆ ನಾಲ್ವರು ಮೃತಪಟ್ಟಿದ್ದರು. ಹಿಂಸಾಚಾರದಲ್ಲಿ 80ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು. ಹಿಂಸಾಚಾರಕ್ಕೆ ಸಂಬಂಧಿಸಿದಂತೆ ವಾಗ್ಚೂಕ್ ಅವರನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ</strong>: ಲಡಾಖ್ಗೆ ರಾಜ್ಯದ ಸ್ಥಾನಮಾನ ನೀಡುವಂತೆ ಆಗ್ರಹಿಸಿ ಹೋರಾಟ ನಡೆಸುತ್ತಿರುವ ಸಂಘಟನೆಗಳು ತಮ್ಮ ನಿಲುವನ್ನು ಇನ್ನಷ್ಟು ಬಿಗಿಗೊಳಿಸಿವೆ. ಲೇಹ್ ಅಪೆಕ್ಸ್ ಬಾಡಿ (ಎಬಿಎಲ್) ಸಂಘಟನೆಯು ಕೇಂದ್ರ ಗೃಹ ಸಚಿವಾಲಯದ ಜತೆಗಿನ ಮಾತುಕತೆಯಿಂದ ಹಿಂದೆ ಸರಿದಿದೆ.</p>.<p>ಪರಿಸರ ಹೋರಾಟಗಾರ ಸೊನಮ್ ವಾಂಗ್ಚೂಕ್ ಅವರನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ಕಾರ್ಗಿಲ್ ಪ್ರಜಾಸತ್ತಾತ್ಮಕ ಒಕ್ಕೂಟ (ಕೆಡಿಎ) ಒತ್ತಾಯಿಸಿದೆ.</p>.<p>ಪ್ರಜಾಸತ್ತಾತ್ಮಕವಾಗಿ ನಡೆಸುತ್ತಿರುವ ಚಳವಳಿಯನ್ನು ಅಪರಾಧ ಎಂಬಂತೆ ಬಿಂಬಿಸುತ್ತಿರುವ ಕಾರಣ ಮಾತುಕತೆ ನಡೆಸಲು ಸಾಧ್ಯವಿಲ್ಲ ಎಂದು ಎಬಿಎಲ್ ಸೋಮವಾರ ಹೇಳಿದೆ. ಅಕ್ಟೋಬರ್ 6ರಂದು ನವದೆಹಲಿಯಲ್ಲಿ ನಿಗದಿಪಡಿಸಿದ್ದ ಮಾತುಕತೆಯಿಂದ ಹಿಂದೆ ಸರಿದಿರುವುದಕ್ಕೆ ಮೂರು ಕಾರಣಗಳನ್ನು ನೀಡಿದೆ.</p>.<p>‘ವಾಂಗ್ಚೂಕ್ ಅವರ ಬಂಧನ, ಪ್ರತಿಭಟನೆಯನ್ನು ‘ರಾಷ್ಟ್ರವಿರೋಧಿ’ ಎಂದು ಕರೆದಿರುವುದು ಹಾಗೂ ಲೇಹ್ನಲ್ಲಿ ನಡೆದ ಪ್ರತಿಭಟನೆ ವೇಳೆ ಪೊಲೀಸರ ಗುಂಡಿನ ನಾಲ್ವರು ಬಲಿಯಾಗಿರುವುದನ್ನು ಖಂಡಿಸಿ ಮಾತುಕತೆಯಿಂದ ಹಿಂದೆ ಸರಿಯುತ್ತಿದ್ದೇವೆ’ ಎಂದು ಹೇಳಿದೆ.</p>.<p>‘ಶಾಂತಿಯುತ ಬೇಡಿಕೆಗಳಿಗೆ ಜೈಲು ಮತ್ತು ಗುಂಡುಗಳಿಂದ ಪ್ರತಿಕ್ರಿಯಿಸುವ ಮೂಲಕ ಕೇಂದ್ರವು ಲಡಾಖ್ನ ಜನರ ನಂಬಿಕೆಗೆ ದ್ರೋಹ ಬಗೆದಿದೆ’ ಎಂದು ಎಬಿಎಲ್ ನಾಯಕರೊಬ್ಬರು ಹೇಳಿದ್ದಾರೆ.</p>.<p>ಲಡಾಖ್ಗೆ ರಾಜ್ಯದ ಸ್ಥಾನಮಾನ ನೀಡುವಂತೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆ ಕಳೆದ ಬುಧವಾರ ಹಿಂಸಾಚಾರಕ್ಕೆ ತಿರುಗಿತ್ತು. ಪೊಲೀಸರ ಗುಂಡಿಗೆ ನಾಲ್ವರು ಮೃತಪಟ್ಟಿದ್ದರು. ಹಿಂಸಾಚಾರದಲ್ಲಿ 80ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು. ಹಿಂಸಾಚಾರಕ್ಕೆ ಸಂಬಂಧಿಸಿದಂತೆ ವಾಗ್ಚೂಕ್ ಅವರನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>