<p><strong>ನವದೆಹಲಿ:</strong> ಪೂರ್ವ ಲಡಾಖ್ ಗಡಿಯಲ್ಲಿ ಉದ್ಭವಿಸಿರುವ ಸಂಘರ್ಷಮಯ ಸ್ಥಿತಿಯನ್ನು ಶಮನಗೊಳಿಸುವ ನಿಟ್ಟಿನಲ್ಲಿ ಭಾರತ ಮತ್ತು ಚೀನಾ ಸೇನೆಗಳ ಕಮಾಂಡರ್ ಮಟ್ಟದ 9ನೇ ಸುತ್ತಿನ ಮಾತುಕತೆ ಭಾನುವಾರ ನಡೆಯಿತು.</p>.<p>ಶಾಂಘೈ ಸಹಕಾರ ಸಂಘಟನೆ ಶೃಂಗಸಭೆ ಸಂದರ್ಭದಲ್ಲಿ ವಿದೇಶಾಂಗ ಸಚಿವರಾದ ಎಸ್.ಜೈಶಂಕರ್ ಹಾಗೂ ವಾಂಗ್ ಯಿ ನಡುವೆ ಮಾಸ್ಕೋದಲ್ಲಿ ಸೆ.10ರಂದು ಮಾತುಕತೆ ನಡೆದಿತ್ತು. ಗಡಿಯಿಂದ ಸೈನಿಕರನ್ನು ಹಿಂತೆಗೆದುಕೊಳ್ಳುವುದು ಸೇರಿದಂತೆ ಐದು ಅಂಶಗಳನ್ನು ಒಳಗೊಂಡ ಒಪ್ಪಂದವಾಗಿತ್ತು.</p>.<p>ಭಾನುವಾರ ನಡೆದ ಮಾತುಕತೆ ಈ ಒಪ್ಪಂದ ಕೇಂದ್ರೀಕೃತವಾಗಿತ್ತು ಎಂದು ಸೇನಾಪಡೆ ಅಧಿಕಾರಿಗಳು ತಿಳಿಸಿದರು.</p>.<p>ವಾಸ್ತವ ನಿಯಂತ್ರಣ ರೇಖೆಗೆ (ಎಲ್ಎಸಿ) ಹೊಂದಿಕೊಂಡಿರುವ ಚೀನಾಕ್ಕೆ ಸೇರಿದ ಮೊಲ್ಡೊ ಗಡಿ ಠಾಣೆಯಲ್ಲಿ ಈ ಉನ್ನತ ಮಟ್ಟದ ಸಭೆ ನಡೆಯಿತು. ಲೇಹ್ನಲ್ಲಿನ 14 ಕಾರ್ಪ್ಸ್ನ ಕಮಾಂಡರ್ ಲೆ.ಜನರಲ್ ಪಿ.ಜಿ.ಕೆ.ಮೆನನ್ ಅವರು ಭಾರತೀಯ ನಿಯೋಗದ ನೇತೃತ್ವ ವಹಿಸಿದ್ದರು.</p>.<p>ಸೈನಿಕರನ್ನು ಹಿಂಪಡೆಯುವ ಮೂಲಕ ಗಡಿಯಲ್ಲಿನ ಸಂಘರ್ಷಮಯ ಸ್ಥಿತಿಯನ್ನು ಶಮನಗೊಳಿಸುವ ಜವಾಬ್ಧಾರಿ ಚೀನಾ ಸೇನೆಯದು ಎಂಬುದನ್ನು ಭಾರತ ಮತ್ತೊಮ್ಮೆ ಪ್ರತಿಪಾದಿಸಿತು ಎಂದು ಅಧಿಕಾರಿಗಳು ತಿಳಿಸಿದರು.</p>.<p>ಗಡಿ ವಿಷಯವಾಗಿ ಸಂಘರ್ಷದಿಂದ ಕೂಡಿದ ಪರಿಸ್ಥಿತಿ ನಿರ್ಮಾಣವಾದಾಗಿನಿಂದ ಈ ವರೆಗೆ 8 ಸುತ್ತಿನ ಮಾತುಕತೆ ನಡೆದಿವೆ. 8ನೇ ಸುತ್ತಿನ ಮಾತುಕತೆ ಕಳೆದ ವರ್ಷ ನವೆಂಬರ್ 6ರಂದು ನಡೆದಿತ್ತು.</p>.<p>7ನೇ ಸುತ್ತಿನ ಮಾತುಕತೆ ಕಳೆದ ವರ್ಷ ಅಕ್ಟೋಬರ್ 12ರಂದು ನಡೆದಿತ್ತು. ಪಾಂಗಾಂಗ್ ಸರೋವರದ ದಕ್ಷಿಣ ತೀರದಿಂದ ಭಾರತದ ಸೈನಿಕರು ಕೂಡಲೇ ಹಿಂದೆ ಸರಿಯಬೇಕು ಎಂದು ಚೀನಾ ಅಂದಿನ ಮಾತುಕತೆ ವೇಳೆ ಒತ್ತಾಯಿಸಿತ್ತು.</p>.<p>ಈ ಮಾತಿಗೆ ಸೊಪ್ಪು ಹಾಕದ ಭಾರತ, ಪಾಂಗಾಂಗ್ ಸರೋವರ ತೀರ ಸೇರಿದಂತೆ ಸಂಘರ್ಷಕ್ಕೆ ಕಾರಣವಾಗಿರುವ ಸ್ಥಳಗಳಿಂದ ಸೈನಿಕರನ್ನು ಹಿಂಪಡೆಯುವ ಪ್ರಕ್ರಿಯೆ ಎರಡೂ ದೇಶಗಳಿಂದ ಏಕಕಾಲಕ್ಕೆ ನಡೆಯಬೇಕು ಎಂದೂ ಸ್ಪಷ್ಟಪಡಿಸಿತ್ತು.</p>.<p>ಹಲವು ಸುತ್ತಿನ ಮಾತುಕತೆ ನಡೆದಿದ್ದರೂ ಗಡಿಯಲ್ಲಿ ಸೃಷ್ಟಿಯಾಗಿರುವ ಬಿಕ್ಕಟ್ಟು ಶಮನವಾಗದ ಕಾರಣ, ಭಾರತ 50,000 ಸೈನಿಕರನ್ನು ಗಡಿಯ ಆಯಕಟ್ಟಿನ ಸ್ಥಳಗಳಲ್ಲಿ ನಿಯೋಜಿಸಿ, ಯುದ್ಧಸನ್ನದ್ಧತೆಯ ಸಂದೇಶ ರವಾನಿಸಿದೆ.</p>.<p>ಚೀನಾ ಸಹ ಅಷ್ಟೇ ಸಂಖ್ಯೆಯ ಸೈನಿಕರನ್ನು ತನ್ನ ಗಡಿಯೊಳಗೆ ನಿಯೋಜನೆ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಪೂರ್ವ ಲಡಾಖ್ ಗಡಿಯಲ್ಲಿ ಉದ್ಭವಿಸಿರುವ ಸಂಘರ್ಷಮಯ ಸ್ಥಿತಿಯನ್ನು ಶಮನಗೊಳಿಸುವ ನಿಟ್ಟಿನಲ್ಲಿ ಭಾರತ ಮತ್ತು ಚೀನಾ ಸೇನೆಗಳ ಕಮಾಂಡರ್ ಮಟ್ಟದ 9ನೇ ಸುತ್ತಿನ ಮಾತುಕತೆ ಭಾನುವಾರ ನಡೆಯಿತು.</p>.<p>ಶಾಂಘೈ ಸಹಕಾರ ಸಂಘಟನೆ ಶೃಂಗಸಭೆ ಸಂದರ್ಭದಲ್ಲಿ ವಿದೇಶಾಂಗ ಸಚಿವರಾದ ಎಸ್.ಜೈಶಂಕರ್ ಹಾಗೂ ವಾಂಗ್ ಯಿ ನಡುವೆ ಮಾಸ್ಕೋದಲ್ಲಿ ಸೆ.10ರಂದು ಮಾತುಕತೆ ನಡೆದಿತ್ತು. ಗಡಿಯಿಂದ ಸೈನಿಕರನ್ನು ಹಿಂತೆಗೆದುಕೊಳ್ಳುವುದು ಸೇರಿದಂತೆ ಐದು ಅಂಶಗಳನ್ನು ಒಳಗೊಂಡ ಒಪ್ಪಂದವಾಗಿತ್ತು.</p>.<p>ಭಾನುವಾರ ನಡೆದ ಮಾತುಕತೆ ಈ ಒಪ್ಪಂದ ಕೇಂದ್ರೀಕೃತವಾಗಿತ್ತು ಎಂದು ಸೇನಾಪಡೆ ಅಧಿಕಾರಿಗಳು ತಿಳಿಸಿದರು.</p>.<p>ವಾಸ್ತವ ನಿಯಂತ್ರಣ ರೇಖೆಗೆ (ಎಲ್ಎಸಿ) ಹೊಂದಿಕೊಂಡಿರುವ ಚೀನಾಕ್ಕೆ ಸೇರಿದ ಮೊಲ್ಡೊ ಗಡಿ ಠಾಣೆಯಲ್ಲಿ ಈ ಉನ್ನತ ಮಟ್ಟದ ಸಭೆ ನಡೆಯಿತು. ಲೇಹ್ನಲ್ಲಿನ 14 ಕಾರ್ಪ್ಸ್ನ ಕಮಾಂಡರ್ ಲೆ.ಜನರಲ್ ಪಿ.ಜಿ.ಕೆ.ಮೆನನ್ ಅವರು ಭಾರತೀಯ ನಿಯೋಗದ ನೇತೃತ್ವ ವಹಿಸಿದ್ದರು.</p>.<p>ಸೈನಿಕರನ್ನು ಹಿಂಪಡೆಯುವ ಮೂಲಕ ಗಡಿಯಲ್ಲಿನ ಸಂಘರ್ಷಮಯ ಸ್ಥಿತಿಯನ್ನು ಶಮನಗೊಳಿಸುವ ಜವಾಬ್ಧಾರಿ ಚೀನಾ ಸೇನೆಯದು ಎಂಬುದನ್ನು ಭಾರತ ಮತ್ತೊಮ್ಮೆ ಪ್ರತಿಪಾದಿಸಿತು ಎಂದು ಅಧಿಕಾರಿಗಳು ತಿಳಿಸಿದರು.</p>.<p>ಗಡಿ ವಿಷಯವಾಗಿ ಸಂಘರ್ಷದಿಂದ ಕೂಡಿದ ಪರಿಸ್ಥಿತಿ ನಿರ್ಮಾಣವಾದಾಗಿನಿಂದ ಈ ವರೆಗೆ 8 ಸುತ್ತಿನ ಮಾತುಕತೆ ನಡೆದಿವೆ. 8ನೇ ಸುತ್ತಿನ ಮಾತುಕತೆ ಕಳೆದ ವರ್ಷ ನವೆಂಬರ್ 6ರಂದು ನಡೆದಿತ್ತು.</p>.<p>7ನೇ ಸುತ್ತಿನ ಮಾತುಕತೆ ಕಳೆದ ವರ್ಷ ಅಕ್ಟೋಬರ್ 12ರಂದು ನಡೆದಿತ್ತು. ಪಾಂಗಾಂಗ್ ಸರೋವರದ ದಕ್ಷಿಣ ತೀರದಿಂದ ಭಾರತದ ಸೈನಿಕರು ಕೂಡಲೇ ಹಿಂದೆ ಸರಿಯಬೇಕು ಎಂದು ಚೀನಾ ಅಂದಿನ ಮಾತುಕತೆ ವೇಳೆ ಒತ್ತಾಯಿಸಿತ್ತು.</p>.<p>ಈ ಮಾತಿಗೆ ಸೊಪ್ಪು ಹಾಕದ ಭಾರತ, ಪಾಂಗಾಂಗ್ ಸರೋವರ ತೀರ ಸೇರಿದಂತೆ ಸಂಘರ್ಷಕ್ಕೆ ಕಾರಣವಾಗಿರುವ ಸ್ಥಳಗಳಿಂದ ಸೈನಿಕರನ್ನು ಹಿಂಪಡೆಯುವ ಪ್ರಕ್ರಿಯೆ ಎರಡೂ ದೇಶಗಳಿಂದ ಏಕಕಾಲಕ್ಕೆ ನಡೆಯಬೇಕು ಎಂದೂ ಸ್ಪಷ್ಟಪಡಿಸಿತ್ತು.</p>.<p>ಹಲವು ಸುತ್ತಿನ ಮಾತುಕತೆ ನಡೆದಿದ್ದರೂ ಗಡಿಯಲ್ಲಿ ಸೃಷ್ಟಿಯಾಗಿರುವ ಬಿಕ್ಕಟ್ಟು ಶಮನವಾಗದ ಕಾರಣ, ಭಾರತ 50,000 ಸೈನಿಕರನ್ನು ಗಡಿಯ ಆಯಕಟ್ಟಿನ ಸ್ಥಳಗಳಲ್ಲಿ ನಿಯೋಜಿಸಿ, ಯುದ್ಧಸನ್ನದ್ಧತೆಯ ಸಂದೇಶ ರವಾನಿಸಿದೆ.</p>.<p>ಚೀನಾ ಸಹ ಅಷ್ಟೇ ಸಂಖ್ಯೆಯ ಸೈನಿಕರನ್ನು ತನ್ನ ಗಡಿಯೊಳಗೆ ನಿಯೋಜನೆ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>