<p><strong>ಲೇಹ್</strong>: ಲಡಾಖ್ಗೆ ರಾಜ್ಯದ ಸ್ಥಾನಮಾನ ನೀಡುವಂತೆ ಆಗ್ರಹಿಸಿ ಲೇಹ್ನಲ್ಲಿ ನಡೆದ ಪ್ರತಿಭಟನೆಯೂ ಹಿಂಸಾಚಾರಕ್ಕೆ ತಿರುಗಿದ ಬೆನ್ನಲ್ಲೇ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ (ಬಿಎನ್ಎಸ್ಎಸ್) ಸೆಕ್ಷನ್ 163ರ ಅಡಿಯಲ್ಲಿ ನಗರದಾದ್ಯಂತ ಜಾರಿಗೊಳಿಸಲಾಗಿದ್ದ ಕರ್ಫ್ಯೂ ಸತತ ನಾಲ್ಕನೇ ದಿನವಾದ ಶನಿವಾರವೂ ಮುಂದುವರಿದಿದೆ. </p><p>‘ಲಡಾಖ್ನಲ್ಲಿ ಐದು ಅಥವಾ ಅದಕ್ಕಿಂತ ಹೆಚ್ಚು ಜನರು ಸೇರುವುದನ್ನು ನಿಷೇಧಿಸಲಾಗಿದೆ. ಪೂರ್ವಾನುಮತಿ ಇಲ್ಲದೆ ಯಾವುದೇ ಮೆರವಣಿಗೆ, ರ್ಯಾಲಿ ನಡೆಸುವಂತಿಲ್ಲ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p><p>ಲೇಹ್ನಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.</p><p>ವಾಂಗ್ಚುಕ್ ನಡೆಸುತ್ತಿರುವ ಉಪವಾಸ ಸತ್ಯಾಗ್ರಹ ಬೆಂಬಲಿಸಿ ಲೇಹ್ ಅಪೆಕ್ಸ್ ಬಾಡಿ (ಎಲ್ಎಬಿ) ಬುಧವಾರ ಬಂದ್ಗೆ ಕರೆ ನೀಡಿತ್ತು. ಈ ವೇಳೆ ಪೊಲೀಸರು ಮತ್ತು ಪ್ರತಿಭಟನಕಾರರ ಮಧ್ಯೆ ಸಂಘರ್ಷ ಉಲ್ಬಣಗೊಂಡು, ನಾಲ್ವರು ಮೃತಪಟ್ಟು, 80ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. </p><p>ಲಡಾಖ್ಗೆ ರಾಜ್ಯದ ಸ್ಥಾನಮಾನ ನೀಡಬೇಕು. ಲಡಾಖ್ ಅನ್ನು ಸಂವಿಧಾನದ ಆರನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸಿ ಸ್ವಾಯತ್ತ ಪ್ರದೇಶ ಎಂದು ಘೋಷಿಸಬೇಕು ಎಂಬುದು ಲಡಾಖ್ ಜನರ ಪ್ರಮುಖ ಬೇಡಿಕೆಯಾಗಿದೆ.</p>.ಪೊಲೀಸ್–ಪ್ರತಿಭಟನಕಾರರ ಮಧ್ಯೆ ಸಂಘರ್ಷ: ಲಡಾಖ್ ಉತ್ಸವ ರದ್ದು.ಲಡಾಖ್ ಹಿಂಸಾಚಾರ | ನನ್ನ ಬಂಧನದಿಂದ ಸರ್ಕಾರಕ್ಕೆ ಸಮಸ್ಯೆ; ಸೋನಮ್ ವಾಂಗ್ಚುಕ್.ಆಳ-ಅಗಲ | ಲಡಾಖ್: ರಾಜ್ಯ ಸ್ಥಾನಮಾನ, ಸ್ವಾಯತ್ತೆಗಾಗಿ ಹೋರಾಟ.ಲೇಹ್ನಲ್ಲಿ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಆರೋಪ: ಸೋನಮ್ ವಾಂಗ್ಚುಕ್ ಬಂಧನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲೇಹ್</strong>: ಲಡಾಖ್ಗೆ ರಾಜ್ಯದ ಸ್ಥಾನಮಾನ ನೀಡುವಂತೆ ಆಗ್ರಹಿಸಿ ಲೇಹ್ನಲ್ಲಿ ನಡೆದ ಪ್ರತಿಭಟನೆಯೂ ಹಿಂಸಾಚಾರಕ್ಕೆ ತಿರುಗಿದ ಬೆನ್ನಲ್ಲೇ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ (ಬಿಎನ್ಎಸ್ಎಸ್) ಸೆಕ್ಷನ್ 163ರ ಅಡಿಯಲ್ಲಿ ನಗರದಾದ್ಯಂತ ಜಾರಿಗೊಳಿಸಲಾಗಿದ್ದ ಕರ್ಫ್ಯೂ ಸತತ ನಾಲ್ಕನೇ ದಿನವಾದ ಶನಿವಾರವೂ ಮುಂದುವರಿದಿದೆ. </p><p>‘ಲಡಾಖ್ನಲ್ಲಿ ಐದು ಅಥವಾ ಅದಕ್ಕಿಂತ ಹೆಚ್ಚು ಜನರು ಸೇರುವುದನ್ನು ನಿಷೇಧಿಸಲಾಗಿದೆ. ಪೂರ್ವಾನುಮತಿ ಇಲ್ಲದೆ ಯಾವುದೇ ಮೆರವಣಿಗೆ, ರ್ಯಾಲಿ ನಡೆಸುವಂತಿಲ್ಲ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p><p>ಲೇಹ್ನಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.</p><p>ವಾಂಗ್ಚುಕ್ ನಡೆಸುತ್ತಿರುವ ಉಪವಾಸ ಸತ್ಯಾಗ್ರಹ ಬೆಂಬಲಿಸಿ ಲೇಹ್ ಅಪೆಕ್ಸ್ ಬಾಡಿ (ಎಲ್ಎಬಿ) ಬುಧವಾರ ಬಂದ್ಗೆ ಕರೆ ನೀಡಿತ್ತು. ಈ ವೇಳೆ ಪೊಲೀಸರು ಮತ್ತು ಪ್ರತಿಭಟನಕಾರರ ಮಧ್ಯೆ ಸಂಘರ್ಷ ಉಲ್ಬಣಗೊಂಡು, ನಾಲ್ವರು ಮೃತಪಟ್ಟು, 80ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. </p><p>ಲಡಾಖ್ಗೆ ರಾಜ್ಯದ ಸ್ಥಾನಮಾನ ನೀಡಬೇಕು. ಲಡಾಖ್ ಅನ್ನು ಸಂವಿಧಾನದ ಆರನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸಿ ಸ್ವಾಯತ್ತ ಪ್ರದೇಶ ಎಂದು ಘೋಷಿಸಬೇಕು ಎಂಬುದು ಲಡಾಖ್ ಜನರ ಪ್ರಮುಖ ಬೇಡಿಕೆಯಾಗಿದೆ.</p>.ಪೊಲೀಸ್–ಪ್ರತಿಭಟನಕಾರರ ಮಧ್ಯೆ ಸಂಘರ್ಷ: ಲಡಾಖ್ ಉತ್ಸವ ರದ್ದು.ಲಡಾಖ್ ಹಿಂಸಾಚಾರ | ನನ್ನ ಬಂಧನದಿಂದ ಸರ್ಕಾರಕ್ಕೆ ಸಮಸ್ಯೆ; ಸೋನಮ್ ವಾಂಗ್ಚುಕ್.ಆಳ-ಅಗಲ | ಲಡಾಖ್: ರಾಜ್ಯ ಸ್ಥಾನಮಾನ, ಸ್ವಾಯತ್ತೆಗಾಗಿ ಹೋರಾಟ.ಲೇಹ್ನಲ್ಲಿ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಆರೋಪ: ಸೋನಮ್ ವಾಂಗ್ಚುಕ್ ಬಂಧನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>