<p><strong>ಶ್ರೀನಗರ</strong>: ಕೇಂದ್ರದ ತಪ್ಪು ನೀತಿಗಳಿಂದಾಗಿ ಕೇಂದ್ರಾಡಳಿತ ಪ್ರದೇಶ ಲಡಾಖ್ನಲ್ಲಿ ಹಿಂಸಾಚಾರ ಭುಗಿಲೆದ್ದಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ, ಪಿಡಿಪಿ ಪಕ್ಷದ ಮುಖ್ಯಸ್ಥೆ ಮೆಹಬೂಬ ಮುಫ್ತಿ ಹೇಳಿದ್ದಾರೆ.</p><p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಳೆದ ಆರು ವರ್ಷಗಳಿಂದ ಲಡಾಖ್ ಜನರಿಗೆ ಹಲವು ಭರವಸೆ ನೀಡುತ್ತಾ ಬಂದಿರುವ ಕೇಂದ್ರ ಗೃಹ ಸಚಿವಾಲಯ, ಈವರೆಗೆ ಒಂದೇ ಒಂದು ಭರವಸೆಯನ್ನು ಈಡೇರಿಸಿಲ್ಲ. ಅವರ ಸಹನೆಯ ಕಟ್ಟೆ ಒಡೆದಿದೆ’ ಎಂದು ಹೇಳಿದ್ದಾರೆ.</p><p>‘ತಮ್ಮ ಗುರುತು, ಸಂಸ್ಕೃತಿ, ಭೂಮಿ ಮತ್ತು ಉದ್ಯೋಗವನ್ನು ರಕ್ಷಿಸಿಕೊಳ್ಳಲು ಸಂವಿಧಾನದ ಆರನೇ ಪರಿಚ್ಛೇದಕ್ಕೆ ಸೇರಿಸುವಂತೆ ಅವರು ಒತ್ತಾಯಿಸುತ್ತಿದ್ದಾರೆ. ಆ ಪ್ರಯತ್ನದಲ್ಲಿ ಏನು ಆಗುತ್ತಿಲ್ಲ ಎಂಬುದು ಅವರನ್ನು ನಿರಾಶೆಗೊಳಿಸಿದೆ. ಅವರ ಜನಸಂಖ್ಯೆಯೂ ತೀರಾ ಕಡಿಮೆ ಇದೆ. ಒಂದು ವೇಳೆ ಹೊರಗಿನಿಂದ ಜನರು ಅಲ್ಲಿಗೆ ಹೆಚ್ಚಿನ ಸಂಖ್ಯೆಯಲ್ಲಿ ಬಂದರೆ ಅವರಿಗೆ ಏನು ಉಳಿಯುತ್ತದೆ?’ ಎಂದು ಪ್ರಶ್ನಿಸಿದ್ದಾರೆ.</p><p>‘ಕೇಂದ್ರವು ಇದರ ಬಗ್ಗೆ ಯೋಚಿಸಬೇಕು. ಲಡಾಖ್ನಂತಹ ಶಾಂತಿ, ಸಮೃದ್ಧ ಸ್ಥಳವು ಇಂದು ಹೊತ್ತಿ ಉರಿಯುತ್ತಿದೆ. ಜಮ್ಮು ಮತ್ತು ಕಾಶ್ಮೀರ ಹಿಂಸಾಚಾರದಲ್ಲಿ ಮುಳುಗಿದ್ದರೂ ಲಡಾಖ್ ಸದಾ ಶಾಂತಿಯಿಂದ ಇರುತ್ತಿತ್ತು. ಕಾರ್ಗಿಲ್ ಯುದ್ಧದಲ್ಲಿ ಲಡಾಖ್ ಜನರು ಮುಖ್ಯ ಪಾತ್ರ ವಹಿಸಿದ್ದರು’ ಎಂದು ತಿಳಿಸಿದ್ದಾರೆ.</p><p>ಇದೇ ವೇಳೆ, ಹಿಂಸಾಚಾರಕ್ಕೆ ಕಾಂಗ್ರೆಸ್ ಪ್ರಚೋದನೆ ನೀಡಿದೆ ಎಂಬ ಬಿಜೆಪಿಯ ಹೇಳಿಕೆಯನ್ನು ತಳ್ಳಿಹಾಕಿದ ಮುಫ್ತಿ, ಜನರ ಆಕ್ರೋಶದ ಫಲ ಇದು ಎಂದಿದ್ದಾರೆ.</p><p>‘ಸರ್ಕಾರ ತನ್ನ ವೈಫಲ್ಯವನ್ನು ಒಪ್ಪಿಕೊಳ್ಳಲು ಸಿದ್ಧವಿಲ್ಲ. ಅದಕ್ಕಾಗಿ ಬಲಿಪಶುವನ್ನು ಹುಡುಕುತ್ತಿದೆ. ಕಾಂಗ್ರೆಸ್ಗೆ ಅಷ್ಟೊಂದು ಬೆಂಬಲವಿದ್ದರೆ, ಪರಿಸ್ಥಿತಿ ಭಿನ್ನವಾಗಿರುತ್ತಿತ್ತು. ತಮ್ಮ ಗುರುತು, ಭೂಮಿ ಮತ್ತು ಉದ್ಯೋಗವನ್ನು ಕಳೆದುಕೊಳ್ಳುವ ಆತಂಕದಿಂದ ಜನ ಆಕ್ರೋಶಿತರಾಗಿದ್ದಾರೆ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ</strong>: ಕೇಂದ್ರದ ತಪ್ಪು ನೀತಿಗಳಿಂದಾಗಿ ಕೇಂದ್ರಾಡಳಿತ ಪ್ರದೇಶ ಲಡಾಖ್ನಲ್ಲಿ ಹಿಂಸಾಚಾರ ಭುಗಿಲೆದ್ದಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ, ಪಿಡಿಪಿ ಪಕ್ಷದ ಮುಖ್ಯಸ್ಥೆ ಮೆಹಬೂಬ ಮುಫ್ತಿ ಹೇಳಿದ್ದಾರೆ.</p><p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಳೆದ ಆರು ವರ್ಷಗಳಿಂದ ಲಡಾಖ್ ಜನರಿಗೆ ಹಲವು ಭರವಸೆ ನೀಡುತ್ತಾ ಬಂದಿರುವ ಕೇಂದ್ರ ಗೃಹ ಸಚಿವಾಲಯ, ಈವರೆಗೆ ಒಂದೇ ಒಂದು ಭರವಸೆಯನ್ನು ಈಡೇರಿಸಿಲ್ಲ. ಅವರ ಸಹನೆಯ ಕಟ್ಟೆ ಒಡೆದಿದೆ’ ಎಂದು ಹೇಳಿದ್ದಾರೆ.</p><p>‘ತಮ್ಮ ಗುರುತು, ಸಂಸ್ಕೃತಿ, ಭೂಮಿ ಮತ್ತು ಉದ್ಯೋಗವನ್ನು ರಕ್ಷಿಸಿಕೊಳ್ಳಲು ಸಂವಿಧಾನದ ಆರನೇ ಪರಿಚ್ಛೇದಕ್ಕೆ ಸೇರಿಸುವಂತೆ ಅವರು ಒತ್ತಾಯಿಸುತ್ತಿದ್ದಾರೆ. ಆ ಪ್ರಯತ್ನದಲ್ಲಿ ಏನು ಆಗುತ್ತಿಲ್ಲ ಎಂಬುದು ಅವರನ್ನು ನಿರಾಶೆಗೊಳಿಸಿದೆ. ಅವರ ಜನಸಂಖ್ಯೆಯೂ ತೀರಾ ಕಡಿಮೆ ಇದೆ. ಒಂದು ವೇಳೆ ಹೊರಗಿನಿಂದ ಜನರು ಅಲ್ಲಿಗೆ ಹೆಚ್ಚಿನ ಸಂಖ್ಯೆಯಲ್ಲಿ ಬಂದರೆ ಅವರಿಗೆ ಏನು ಉಳಿಯುತ್ತದೆ?’ ಎಂದು ಪ್ರಶ್ನಿಸಿದ್ದಾರೆ.</p><p>‘ಕೇಂದ್ರವು ಇದರ ಬಗ್ಗೆ ಯೋಚಿಸಬೇಕು. ಲಡಾಖ್ನಂತಹ ಶಾಂತಿ, ಸಮೃದ್ಧ ಸ್ಥಳವು ಇಂದು ಹೊತ್ತಿ ಉರಿಯುತ್ತಿದೆ. ಜಮ್ಮು ಮತ್ತು ಕಾಶ್ಮೀರ ಹಿಂಸಾಚಾರದಲ್ಲಿ ಮುಳುಗಿದ್ದರೂ ಲಡಾಖ್ ಸದಾ ಶಾಂತಿಯಿಂದ ಇರುತ್ತಿತ್ತು. ಕಾರ್ಗಿಲ್ ಯುದ್ಧದಲ್ಲಿ ಲಡಾಖ್ ಜನರು ಮುಖ್ಯ ಪಾತ್ರ ವಹಿಸಿದ್ದರು’ ಎಂದು ತಿಳಿಸಿದ್ದಾರೆ.</p><p>ಇದೇ ವೇಳೆ, ಹಿಂಸಾಚಾರಕ್ಕೆ ಕಾಂಗ್ರೆಸ್ ಪ್ರಚೋದನೆ ನೀಡಿದೆ ಎಂಬ ಬಿಜೆಪಿಯ ಹೇಳಿಕೆಯನ್ನು ತಳ್ಳಿಹಾಕಿದ ಮುಫ್ತಿ, ಜನರ ಆಕ್ರೋಶದ ಫಲ ಇದು ಎಂದಿದ್ದಾರೆ.</p><p>‘ಸರ್ಕಾರ ತನ್ನ ವೈಫಲ್ಯವನ್ನು ಒಪ್ಪಿಕೊಳ್ಳಲು ಸಿದ್ಧವಿಲ್ಲ. ಅದಕ್ಕಾಗಿ ಬಲಿಪಶುವನ್ನು ಹುಡುಕುತ್ತಿದೆ. ಕಾಂಗ್ರೆಸ್ಗೆ ಅಷ್ಟೊಂದು ಬೆಂಬಲವಿದ್ದರೆ, ಪರಿಸ್ಥಿತಿ ಭಿನ್ನವಾಗಿರುತ್ತಿತ್ತು. ತಮ್ಮ ಗುರುತು, ಭೂಮಿ ಮತ್ತು ಉದ್ಯೋಗವನ್ನು ಕಳೆದುಕೊಳ್ಳುವ ಆತಂಕದಿಂದ ಜನ ಆಕ್ರೋಶಿತರಾಗಿದ್ದಾರೆ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>