<p><strong>ಲೇಹ್:</strong> ಲಡಾಕ್ಗೆ ಪ್ರತ್ಯೇಕ ರಾಜ್ಯದ ಸ್ಥಾನಮಾನ ಹಾಗೂ ಸಂವಿಧಾನದ 6ನೇ ಪರಿಚ್ಛೇದಕ್ಕೆ ಸೇರಿಸಲು ಒತ್ತಾಯಿಸಿ ನಡೆದ ಪ್ರತಿಭಟನೆಗಳಿಂದ ನಾಲ್ವರು ಸಾವನ್ನಪ್ಪಿ 90 ಮಂದಿ ಗಾಯಗೊಂಡ ಎರಡು ದಿನಗಳ ಬಳಿಕ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರನ್ನು ಶುಕ್ರವಾರ ಪೊಲೀಸರು ಬಂಧಿಸಿದ್ದಾರೆ.</p><p>ಮಧ್ಯಾಹ್ನ 2.30ಕ್ಕೆ ಲಡಾಕ್ ಡಿಜಿಪಿ ಎಸ್.ಡಿ.ಸಿಂಗ್ ಜಾಮ್ವಾಲ್ ನೇತೃತ್ವದ ತಂಡ ಸೋನಮ್ ವಾಂಗ್ಚುಕ್ ಅವರನ್ನು ವಶಕ್ಕೆ ಪಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.ಸೋನಮ್ ವಾಂಗ್ಚುಕ್ ಬಂಧನ ಸ್ವೀಕಾರಾರ್ಹವಲ್ಲ: ರಾಹುಲ್ ಗಾಂಧಿ.ಉನ್ನತ ನಾಯಕತ್ವದ ಭೇಟಿಗೆ ಕಾದಿದ್ದೇವೆ: ಸೋನಮ್ ವಾಂಗ್ಚುಕ್.<p>ವಾಂಗ್ಚುಕ್ ವಿರುದ್ಧ ಯಾವ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂಬುದು ತಕ್ಷಣಕ್ಕೆ ತಿಳಿದುಬಂದಿಲ್ಲ.</p><p>ಕಳೆದ ಐದು ವರ್ಷಗಳಿಂದ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಹೋರಾಟ ನಡೆಸುತ್ತಿರುವ ಲೇಹ್ ಅಪೆಕ್ಸ್ ಬಾಡಿ (ಎಲ್ಎಬಿ) ಮತ್ತು ಕಾರ್ಗಿಲ್ ಡೆಮಾಕ್ರಟಿಕ್ ಅಲಯನ್ಸ್ (ಕೆಡಿಎ) ಸಂಘಟನೆಯ ಪ್ರಮುಖ ಸದಸ್ಯರಾಗಿರುವ ವಾಂಗ್ಚುಕ್ ಅವರು ಹಿಂಸೆಗೆ ಪ್ರಚೋದನೆ ನೀಡಿದ್ದಾರೆ ಎಂದು ಗೃಹ ಸಚಿವಾಲಯ ಆರೋಪ ಮಾಡಿತ್ತು.</p><p>ಆದರೆ ಕೇಂದ್ರ ಸರ್ಕಾರದ ಆರೋಪವನ್ನು ಸೋನಮ್ ವಾಂಗ್ಚುಕ್ ತಳ್ಳಿ ಹಾಕಿದ್ದಾರೆ. ಬುಧವಾರ ನಡೆದ ಹಿಂಸಾಚಾರದ ಬಳಿಕ ಸೋನಮ್ ವಾಂಗ್ಚುಕ್ ಸತ್ಯಾಗ್ರಹವನ್ನು ವಾಪಸ್ ಪಡೆದಿದ್ದಾರೆ.</p><p>ಲಡಾಕ್ನಲ್ಲಿ ಒಟ್ಟಾರೆ ಪರಿಸ್ಥಿತಿಯೂ ಶಾಂತಿಯುತವಾಗಿದೆ. ಅಗತ್ಯ ವಸ್ತುಗಳ ಖರೀದಿಸಲು ನಿರ್ಬಂಧವನ್ನು ಸಡಿಲಿಸಲಾಗುವುದು ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.</p><p><strong>ಶಾಲಾ– ಕಾಲೇಜುಗಳು ಬಂದ್:</strong> ಶುಕ್ರವಾರದಿಂದ ಮುಂದಿನ ಎರಡು ದಿನಗಳವರೆಗೂ ಸರ್ಕಾರಿ, ಖಾಸಗಿ ಶಾಲೆಗಳು, ಕಾಲೇಜುಗಳು ಹಾಗೂ ಇತರೆ ಶಿಕ್ಷಣ ಸಂಸ್ಥೆಗಳನ್ನು ಮುಚ್ಚುವಂತೆ ಲೇಹ್ ಜಿಲ್ಲಾ ಮ್ಯಾಜಿಸ್ಟ್ರೇಟ್ ರೊಮಿಲ್ ಸಿಂಗ್ ಡೊಂಕ್ ಆದೇಶ ಹೊರಡಿಸಿದ್ದಾರೆ. ಅಂಗನವಾಡಿ ಕೇಂದ್ರಗಳು ಕೂಡ ತೆರೆಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.</p><p><strong>ಬೇಡಿಕೆಗಳು ಏನು:</strong> ಲಡಾಕ್ಗೆ ಪ್ರತ್ಯೇಕ ರಾಜ್ಯದ ಸ್ಥಾನಮಾನ, ಸಂವಿಧಾನದ 6ನೇ ಪರಿಚ್ಛೇದಕ್ಕೆ ಸೇರಿಸಲು ಒತ್ತಾಯ, ಲೇಹ್, ಕಾರ್ಗಿಲ್ಗೆ ಪ್ರತ್ಯೇಕ ಲೋಕಸಭಾ ಕ್ಷೇತ್ರ, ರಾಜ್ಯ ಲೋಕಸೇವಾ ಆಯೋಗ ಸ್ಥಾಪಿಸುವುದು ಪ್ರಮುಖ ಬೇಡಿಕೆಗಳಾಗಿವೆ ಎಂದು ಎಲ್ಎಬಿ ಹಾಗೂ ಕೆಡಿಎ ಪ್ರತಿಪಾದಿಸಿವೆ.</p>.ಪರಿಸರ ಹೋರಾಟಗಾರ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯ.ಲಡಾಖ್ಗೆ ರಾಜ್ಯ ಸ್ಥಾನಮಾನಕ್ಕಾಗಿ ಸತ್ಯಾಗ್ರಹ: ಸೋನಮ್ ವಾಂಗ್ಚುಕ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲೇಹ್:</strong> ಲಡಾಕ್ಗೆ ಪ್ರತ್ಯೇಕ ರಾಜ್ಯದ ಸ್ಥಾನಮಾನ ಹಾಗೂ ಸಂವಿಧಾನದ 6ನೇ ಪರಿಚ್ಛೇದಕ್ಕೆ ಸೇರಿಸಲು ಒತ್ತಾಯಿಸಿ ನಡೆದ ಪ್ರತಿಭಟನೆಗಳಿಂದ ನಾಲ್ವರು ಸಾವನ್ನಪ್ಪಿ 90 ಮಂದಿ ಗಾಯಗೊಂಡ ಎರಡು ದಿನಗಳ ಬಳಿಕ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರನ್ನು ಶುಕ್ರವಾರ ಪೊಲೀಸರು ಬಂಧಿಸಿದ್ದಾರೆ.</p><p>ಮಧ್ಯಾಹ್ನ 2.30ಕ್ಕೆ ಲಡಾಕ್ ಡಿಜಿಪಿ ಎಸ್.ಡಿ.ಸಿಂಗ್ ಜಾಮ್ವಾಲ್ ನೇತೃತ್ವದ ತಂಡ ಸೋನಮ್ ವಾಂಗ್ಚುಕ್ ಅವರನ್ನು ವಶಕ್ಕೆ ಪಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.ಸೋನಮ್ ವಾಂಗ್ಚುಕ್ ಬಂಧನ ಸ್ವೀಕಾರಾರ್ಹವಲ್ಲ: ರಾಹುಲ್ ಗಾಂಧಿ.ಉನ್ನತ ನಾಯಕತ್ವದ ಭೇಟಿಗೆ ಕಾದಿದ್ದೇವೆ: ಸೋನಮ್ ವಾಂಗ್ಚುಕ್.<p>ವಾಂಗ್ಚುಕ್ ವಿರುದ್ಧ ಯಾವ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂಬುದು ತಕ್ಷಣಕ್ಕೆ ತಿಳಿದುಬಂದಿಲ್ಲ.</p><p>ಕಳೆದ ಐದು ವರ್ಷಗಳಿಂದ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಹೋರಾಟ ನಡೆಸುತ್ತಿರುವ ಲೇಹ್ ಅಪೆಕ್ಸ್ ಬಾಡಿ (ಎಲ್ಎಬಿ) ಮತ್ತು ಕಾರ್ಗಿಲ್ ಡೆಮಾಕ್ರಟಿಕ್ ಅಲಯನ್ಸ್ (ಕೆಡಿಎ) ಸಂಘಟನೆಯ ಪ್ರಮುಖ ಸದಸ್ಯರಾಗಿರುವ ವಾಂಗ್ಚುಕ್ ಅವರು ಹಿಂಸೆಗೆ ಪ್ರಚೋದನೆ ನೀಡಿದ್ದಾರೆ ಎಂದು ಗೃಹ ಸಚಿವಾಲಯ ಆರೋಪ ಮಾಡಿತ್ತು.</p><p>ಆದರೆ ಕೇಂದ್ರ ಸರ್ಕಾರದ ಆರೋಪವನ್ನು ಸೋನಮ್ ವಾಂಗ್ಚುಕ್ ತಳ್ಳಿ ಹಾಕಿದ್ದಾರೆ. ಬುಧವಾರ ನಡೆದ ಹಿಂಸಾಚಾರದ ಬಳಿಕ ಸೋನಮ್ ವಾಂಗ್ಚುಕ್ ಸತ್ಯಾಗ್ರಹವನ್ನು ವಾಪಸ್ ಪಡೆದಿದ್ದಾರೆ.</p><p>ಲಡಾಕ್ನಲ್ಲಿ ಒಟ್ಟಾರೆ ಪರಿಸ್ಥಿತಿಯೂ ಶಾಂತಿಯುತವಾಗಿದೆ. ಅಗತ್ಯ ವಸ್ತುಗಳ ಖರೀದಿಸಲು ನಿರ್ಬಂಧವನ್ನು ಸಡಿಲಿಸಲಾಗುವುದು ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.</p><p><strong>ಶಾಲಾ– ಕಾಲೇಜುಗಳು ಬಂದ್:</strong> ಶುಕ್ರವಾರದಿಂದ ಮುಂದಿನ ಎರಡು ದಿನಗಳವರೆಗೂ ಸರ್ಕಾರಿ, ಖಾಸಗಿ ಶಾಲೆಗಳು, ಕಾಲೇಜುಗಳು ಹಾಗೂ ಇತರೆ ಶಿಕ್ಷಣ ಸಂಸ್ಥೆಗಳನ್ನು ಮುಚ್ಚುವಂತೆ ಲೇಹ್ ಜಿಲ್ಲಾ ಮ್ಯಾಜಿಸ್ಟ್ರೇಟ್ ರೊಮಿಲ್ ಸಿಂಗ್ ಡೊಂಕ್ ಆದೇಶ ಹೊರಡಿಸಿದ್ದಾರೆ. ಅಂಗನವಾಡಿ ಕೇಂದ್ರಗಳು ಕೂಡ ತೆರೆಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.</p><p><strong>ಬೇಡಿಕೆಗಳು ಏನು:</strong> ಲಡಾಕ್ಗೆ ಪ್ರತ್ಯೇಕ ರಾಜ್ಯದ ಸ್ಥಾನಮಾನ, ಸಂವಿಧಾನದ 6ನೇ ಪರಿಚ್ಛೇದಕ್ಕೆ ಸೇರಿಸಲು ಒತ್ತಾಯ, ಲೇಹ್, ಕಾರ್ಗಿಲ್ಗೆ ಪ್ರತ್ಯೇಕ ಲೋಕಸಭಾ ಕ್ಷೇತ್ರ, ರಾಜ್ಯ ಲೋಕಸೇವಾ ಆಯೋಗ ಸ್ಥಾಪಿಸುವುದು ಪ್ರಮುಖ ಬೇಡಿಕೆಗಳಾಗಿವೆ ಎಂದು ಎಲ್ಎಬಿ ಹಾಗೂ ಕೆಡಿಎ ಪ್ರತಿಪಾದಿಸಿವೆ.</p>.ಪರಿಸರ ಹೋರಾಟಗಾರ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯ.ಲಡಾಖ್ಗೆ ರಾಜ್ಯ ಸ್ಥಾನಮಾನಕ್ಕಾಗಿ ಸತ್ಯಾಗ್ರಹ: ಸೋನಮ್ ವಾಂಗ್ಚುಕ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>