<p><strong>ನವದೆಹಲಿ</strong>: ಲಡಾಖ್ಗೆ ರಾಜ್ಯದ ಸ್ಥಾನಮಾನಕ್ಕಾಗಿ ಆಗ್ರಹಿಸಿ, ಹೋರಾಟ ನಡೆಸಿ ಬಂಧನದಲ್ಲಿರುವ ಪರಿಸರ ಹೋರಾಟಗಾರ ಸೊನಮ್ ವಾಂಗ್ಚೂಕ್ ಅವರ ಬಿಡುಗಡೆಗೆ ಕೋರಿ, ಅವರ ಪತ್ನಿ ಗೀತಾಂಜಲಿ ಆಂಗ್ಮೊ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಅ.29ಕ್ಕೆ ಮುಂದೂಡಿದೆ. </p>.<p>ರಾಷ್ಟ್ರೀಯ ಭದ್ರತಾ ಕಾಯ್ದೆಯ (ಎನ್ಎಸ್ಎ) ಅನ್ವಯ ಸೆಪ್ಟೆಂಬರ್ 26ರಂದು ವಾಂಗ್ಚೂಕ್ ಅವರನ್ನು ಬಂಧಿಸಲಾಗಿತ್ತು. ಸದ್ಯ ಅವರು ರಾಜಸ್ಥಾನದ ಜೋಧಪುರ ಜೈಲಿನಲ್ಲಿದ್ದಾರೆ. </p>.<p>ವಾಂಗ್ಚೂಕ್ ಅವರ ಬಂಧನವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯನ್ನು ತಿದ್ದುಪಡಿ ಮಾಡಲು ಬಯಸುವುದಾಗಿ ಗೀತಾಂಜಲಿ ಆಂಗ್ಮೊ ಕೋರ್ಟ್ಗೆ ಮನವಿ ಮಾಡಿದ್ದಾರೆ. </p>.<p>ನ್ಯಾಯಮೂರ್ತಿಗಳಾದ ಅರವಿಂದ ಕುಮಾರ್ ಮತ್ತು ಎನ್.ವಿ ಅಂಜರಿಯಾ ಅವರನ್ನೊಳಗೊಂಡ ಪೀಠವು ಬುಧವಾರ, ‘ವಾಂಗ್ಚೂಕ್ ಅವರ ಸಹೋದರ ಮತ್ತು ವಕೀಲ ಜೈಲಿನಲ್ಲಿ ವಾಂಗ್ಚೂಕ್ ಅವರನ್ನು ಭೇಟಿಯಾಗಿದ್ದಾರೆ’ ಎಂದು ರಾಜಸ್ಥಾನದ ಜೋಧಪುರ ಜೈಲಿನ ಜೈಲರ್ ಸಲ್ಲಿಸಿರುವ ಅಫಿಡವಿಟ್ ಪರಿಶೀಲಿಸಿತು. </p>.<p>‘ವಾಂಗ್ಚೂಕ್ ಅವರನ್ನು ಯಾವ ಆಧಾರದಲ್ಲಿ ಬಂಧಿಸಲಾಗಿದೆ ಎಂದು ಪ್ರಶ್ನಿಸಿ, ಅರ್ಜಿಯನ್ನು ತಿದ್ದುಪಡಿ ಮಾಡಿ ಸಲ್ಲಿಸಲಾಗುವುದು’ ಎಂದು ಗೀತಾಂಜಲಿ ಆಂಗ್ಮೊ ಪರವಾಗಿ ಹಾಜರಾದ ವಕೀಲ ಕಪಿಲ್ ಸಿಬಲ್ ಪೀಠದ ಗಮನಕ್ಕೆ ತಂದರು.</p>.<p>‘ಪತ್ನಿಯ ಜತೆಗೆ ಕೆಲವು ವಿಷಯಗಳನ್ನು ಹಂಚಿಕೊಳ್ಳಲು ವಾಂಗ್ಚೂಕ್ ಅವರಿಗೆ ಅವಕಾಶ ನೀಡಬೇಕು’ ಎಂದು ಸಿಬಲ್ ಮನವಿ ಮಾಡಿದರು. ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಇದಕ್ಕೆ ಯಾವುದೇ ಆಕ್ಷೇಪ ಇಲ್ಲ ಎಂದು ಪೀಠದ ಗಮನಕ್ಕೆ ತಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಲಡಾಖ್ಗೆ ರಾಜ್ಯದ ಸ್ಥಾನಮಾನಕ್ಕಾಗಿ ಆಗ್ರಹಿಸಿ, ಹೋರಾಟ ನಡೆಸಿ ಬಂಧನದಲ್ಲಿರುವ ಪರಿಸರ ಹೋರಾಟಗಾರ ಸೊನಮ್ ವಾಂಗ್ಚೂಕ್ ಅವರ ಬಿಡುಗಡೆಗೆ ಕೋರಿ, ಅವರ ಪತ್ನಿ ಗೀತಾಂಜಲಿ ಆಂಗ್ಮೊ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಅ.29ಕ್ಕೆ ಮುಂದೂಡಿದೆ. </p>.<p>ರಾಷ್ಟ್ರೀಯ ಭದ್ರತಾ ಕಾಯ್ದೆಯ (ಎನ್ಎಸ್ಎ) ಅನ್ವಯ ಸೆಪ್ಟೆಂಬರ್ 26ರಂದು ವಾಂಗ್ಚೂಕ್ ಅವರನ್ನು ಬಂಧಿಸಲಾಗಿತ್ತು. ಸದ್ಯ ಅವರು ರಾಜಸ್ಥಾನದ ಜೋಧಪುರ ಜೈಲಿನಲ್ಲಿದ್ದಾರೆ. </p>.<p>ವಾಂಗ್ಚೂಕ್ ಅವರ ಬಂಧನವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯನ್ನು ತಿದ್ದುಪಡಿ ಮಾಡಲು ಬಯಸುವುದಾಗಿ ಗೀತಾಂಜಲಿ ಆಂಗ್ಮೊ ಕೋರ್ಟ್ಗೆ ಮನವಿ ಮಾಡಿದ್ದಾರೆ. </p>.<p>ನ್ಯಾಯಮೂರ್ತಿಗಳಾದ ಅರವಿಂದ ಕುಮಾರ್ ಮತ್ತು ಎನ್.ವಿ ಅಂಜರಿಯಾ ಅವರನ್ನೊಳಗೊಂಡ ಪೀಠವು ಬುಧವಾರ, ‘ವಾಂಗ್ಚೂಕ್ ಅವರ ಸಹೋದರ ಮತ್ತು ವಕೀಲ ಜೈಲಿನಲ್ಲಿ ವಾಂಗ್ಚೂಕ್ ಅವರನ್ನು ಭೇಟಿಯಾಗಿದ್ದಾರೆ’ ಎಂದು ರಾಜಸ್ಥಾನದ ಜೋಧಪುರ ಜೈಲಿನ ಜೈಲರ್ ಸಲ್ಲಿಸಿರುವ ಅಫಿಡವಿಟ್ ಪರಿಶೀಲಿಸಿತು. </p>.<p>‘ವಾಂಗ್ಚೂಕ್ ಅವರನ್ನು ಯಾವ ಆಧಾರದಲ್ಲಿ ಬಂಧಿಸಲಾಗಿದೆ ಎಂದು ಪ್ರಶ್ನಿಸಿ, ಅರ್ಜಿಯನ್ನು ತಿದ್ದುಪಡಿ ಮಾಡಿ ಸಲ್ಲಿಸಲಾಗುವುದು’ ಎಂದು ಗೀತಾಂಜಲಿ ಆಂಗ್ಮೊ ಪರವಾಗಿ ಹಾಜರಾದ ವಕೀಲ ಕಪಿಲ್ ಸಿಬಲ್ ಪೀಠದ ಗಮನಕ್ಕೆ ತಂದರು.</p>.<p>‘ಪತ್ನಿಯ ಜತೆಗೆ ಕೆಲವು ವಿಷಯಗಳನ್ನು ಹಂಚಿಕೊಳ್ಳಲು ವಾಂಗ್ಚೂಕ್ ಅವರಿಗೆ ಅವಕಾಶ ನೀಡಬೇಕು’ ಎಂದು ಸಿಬಲ್ ಮನವಿ ಮಾಡಿದರು. ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಇದಕ್ಕೆ ಯಾವುದೇ ಆಕ್ಷೇಪ ಇಲ್ಲ ಎಂದು ಪೀಠದ ಗಮನಕ್ಕೆ ತಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>